ಮಧ್ಯಾಂತರ ತೀರ್ಪಿಗೆ ಮುನ್ನ ಗೈರಾದವರಿಗೆ ಮಾತ್ರ ಪರೀಕ್ಷೆ 


Team Udayavani, Mar 18, 2022, 7:10 AM IST

ಮಧ್ಯಾಂತರ ತೀರ್ಪಿಗೆ ಮುನ್ನ ಗೈರಾದವರಿಗೆ ಮಾತ್ರ ಪರೀಕ್ಷೆ 

ಬೆಂಗಳೂರು: ಹಿಜಾಬ್‌ ಗೊಂದಲದ ಸಂದರ್ಭ ಹೈಕೋರ್ಟ್‌ನ ಮಧ್ಯಾಂತರ ತೀರ್ಪು ಬರುವ ಮುನ್ನ  ಪರೀಕ್ಷೆಗಳಿಗೆ ಹಾಜ ರಾಗದ ವಿದ್ಯಾರ್ಥಿಗಳಿಗೆ ಹಿಜಾಬ್‌ ಧರಿಸದೇ ಪರೀಕ್ಷೆ ಬರೆಯಲು ಅವಕಾಶ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸ ದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಆದರೆ ಮಧ್ಯಾಂತರ ಆದೇಶದ ಅನಂತರ ಪರೀಕ್ಷೆ ತಪ್ಪಿಸಿ ಕೊಂಡವರಿಗೆ ಮರು ಅವ ಕಾಶ ಕಷ್ಟ ಸಾಧ್ಯ ಎಂದಿದ್ದಾರೆ.

ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್‌, ಹಿಜಾಬ್‌ ಗೊಂದಲ ಸಂದರ್ಭ ಕೆಲವರಿಗೆ ಪರೀಕ್ಷೆ ಬರೆಯಲಾಗಿರಲಿಲ್ಲ. ಈಗ ಹಿಜಾಬ್‌ ತೆಗೆದು ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ. ಅವರಿಗೆ ಅವಕಾಶ ಕಲ್ಪಿಸಬೇಕು ಹಾಗೂ ಹೈಕೋರ್ಟ್‌ ಆದೇಶ ಬಂದ ಅನಂತರವೂ ಪಾಲಿಸದೇ ಗೊಂದಲ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಹಕ್ಕು: ಸಿದ್ದು ಅವರ ಆಗ್ರಹಕ್ಕೆ ಬೆಂಬಲ ಸೂಚಿಸಿದ ಬಿಜೆಪಿ ಶಾಸಕ ಜಗದೀಶ್‌ ಶೆಟ್ಟರ್‌, ಹೈಕೋರ್ಟ್‌ ಆದೇಶ ನೀಡಿದರೂ ಅದನ್ನು ಖಂಡಿಸಿ ಬಂದ್‌ ಮಾಡುವುದು, ಪ್ರತಿಭಟನೆ ನಡೆಸುವುದು ಸರಿಯಲ್ಲ. ಕೋರ್ಟ್‌ ಆದೇಶಕ್ಕೆ ಬೆಲೆ ಕೊಡದವರು ಮತ್ತೆ ಯಾರಿಗೆ ಬೆಲೆ ಕೊಡುತ್ತಾರೆ ಎಂದು ಪ್ರಶ್ನಿಸಿದರು. ಈ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕೋರ್ಟ್‌ ತೀರ್ಪಿನ ಬಗ್ಗೆ ಅಸಮಾಧಾನ ಇದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಜತೆಗೆ ಶಾಂತಿಯುತ ಬಂದ್‌, ಪ್ರತಿಭಟನೆ ಮಾಡುವುದು ಕೂಡ ಸಂವಿಧಾನಾತ್ಮಕ ಹಕ್ಕು ಎಂದರು.

ಮಹಾ ಪಾಪದ ಕೆಲಸ: ರವಿ:

ಬಿಜೆಪಿ ಸದಸ್ಯ ಸಿ.ಟಿ. ರವಿ  ಮಾತನಾಡಿ, ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್‌ ನಲ್ಲಿ 10 ದಿನ ವಿವರವಾದ ವಿಚಾರಣೆ ನಡೆದು ಬಳಿಕ ಕೋರ್ಟ್‌ ತೀರ್ಪು ಕೊಟ್ಟಿದೆ. ಅದನ್ನು ಧಿಕ್ಕರಿಸಿ ಪ್ರತಿಭಟನೆ, ಬಂದ್‌ ಮಾಡುವುದು ಎಷ್ಟು ಸರಿ?  ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ರಾಜ್ಯದ ಶಾಂತಿ ಭಂಗ ಮಾಡಲು, ಪ್ರಚೋದನೆ ನೀಡಲು ಅವಕಾಶವಿಲ್ಲ. ಇದರಲ್ಲಿ ಓಟ್‌ ಬ್ಯಾಂಕ್‌ ರಾಜಕಾರಣ ಮಾಡುವುದು ಮಹಾ ಪಾಪದ ಕೆಲಸ ಎಂದರು.

ಸದಸ್ಯರು ಪರ ವಿರೋಧಗಳ ವಾದಕ್ಕೆ ಉತ್ತರಿಸಿದ ಕಾನೂನು ಸಚಿವ ಮಾಧುಸ್ವಾಮಿ, ಸುಪ್ರೀಂ ಕೋರ್ಟ್‌ ತೀರ್ಮಾನ ಪ್ರಕಟಿಸುವ ವರೆಗೆ ಸರಕಾರ ಹೈಕೋರ್ಟ್‌ ಆದೇಶವನ್ನು ಜಾರಿ ಮಾಡಲೇಬೇಕು ಎಂದರು.

ಸ್ವಯಂಪ್ರೇರಿತ ಬಂದ್‌ :

ಹೈಕೋರ್ಟ್‌ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆಗಳು ರಾಜ್ಯಾದ್ಯಂತ ಸ್ವಯಂ ಪ್ರೇರಿತರಾಗಿ ಬಂದ್‌ ನಡೆಸಿದ್ದಾರೆ. ದ.ಕ., ಉಡುಪಿ, ಚಿಕ್ಕಮಗಳೂರು, ದೊಡ್ಡಬಳ್ಳಾಪುರ, ಹಾಸನ, ಕೋಲಾರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಸ್ಲಿಂ ಸಂಘಟನೆಗಳು ಬಂದ್‌ ನಡೆಸಿದವು. ಎಲ್ಲೆಡೆ ಸ್ವಯಂ ಪ್ರೇರಿತವಾಗಿ ತಮ್ಮ  ಅಂಗಡಿ, ಮುಂಗಟ್ಟು ಮತ್ತು ಸಂಸ್ಥೆಗಳಲ್ಲಿ  ವ್ಯವಹಾರವನ್ನು ಸ್ಥಗಿತಗೊಳಿಸಿದ್ದರು.  ಹಲವೆಡೆ ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾಗಿದ್ದೂ ಕಂಡುಬಂತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.