ಪಠ್ಯ ಕಡಿತ ಇನ್ನಷ್ಟು ಪರಿಷ್ಕರಣೆ ಸಾಧ್ಯತೆ!
Team Udayavani, Nov 23, 2020, 12:41 AM IST
ಬೆಂಗಳೂರು: ಶಾಲಾರಂಭ ಇನ್ನಷ್ಟು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪಠ್ಯ ಕಡಿತದಲ್ಲಿ ಮತ್ತಷ್ಟು ಪರಿಷ್ಕರಣೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪಿಯುಸಿ ತರಗತಿಗಳಿಗೆ 2020-21ನೇ ಸಾಲಿಗೆ ಅನ್ವಯವಾಗುವಂತೆ ಶೇ.30ರಷ್ಟು ಪಠ್ಯ ಕಡಿತಗೊಳಿಸಿ, ಅಧಿಕೃತ ಆದೇಶ ಹೊರಡಿಸಲಾಗಿದೆ. ಆದರೆ, ಪಿಯು ಕಾಲೇಜು ಇನ್ನೂ ಆರಂಭವಾಗದೇ ಇರುವುದರಿಂದ ಶೇ.70ರಷ್ಟು ಪಠ್ಯ ಕಲಿಕೆ ಮತ್ತು ಬೋಧನೆ ಹೊರೆಯಾಗಲಿದೆ ಎಂದು ಆರೋಪವೂ ಕೇಳಿ ಬರುತ್ತಿದೆ.
ಈ ಮಧ್ಯೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಸೆಸೆಲ್ಸಿ ವಿದ್ಯಾರ್ಥಿಗಳ ಪಠ್ಯಕಡಿತಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಚರ್ಚೆ ನಡೆಸಲು ತಜ್ಞರ ಸಮಿತಿಯ ಮೊರೆ ಹೋಗಿದೆ. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ತರಗತಿ ಬೋಧನೆಗೆ ಸಿಗಬಹುದಾದ ಶೈಕ್ಷಣಿಕ ದಿನಗಳ ಆಧಾರದಲ್ಲಿ ವೈಜ್ಞಾನಿಕ ರೀತಿಯಲ್ಲಿ ಪಠ್ಯ ಕಡಿತ ಮಾಡಲು ಚಿಂತನೆ ನಡೆಯುತ್ತಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕಡಿತ ಪಠ್ಯದ ಪರಿಷ್ಕರಣೆ
2020-21ರ ಶೈಕ್ಷಣಿಕ ವರ್ಷದಲ್ಲಿ ಡಿಸೆಂಬರ್, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಮಾತ್ರ ಉಳಿದಿದೆ. ಶಾಲಾರಂಭದ ಬಗ್ಗೆ ಯಾವುದೇ ನಿರ್ಧಾರವೂ ಆಗಿಲ್ಲ. ಹೀಗಾಗಿ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆ (ಡಿಎಸ್ಇಆರ್ಟಿ)ಯಲ್ಲಿರುವ ವಿವಿಧ ವಿಷಯ ತಜ್ಞರ ಮೂಲಕ ಮುಂದೇ ಸಿಗಬಹುದಾದ ಶೈಕ್ಷಣಿಕ ದಿನಗಳ ಆಧಾರದಲ್ಲಿ ಪಠ್ಯ ಕಡಿತದ ಕರಡು ವರದಿಯನ್ನು ಸಿದ್ಧಪಡಿಸಿ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈಗಾಗಲೇ ಶೇ.30ರಷ್ಟು ಪಠ್ಯ ಕಡಿತ ಮಾಡಿರುವ ವಿಷಯ ತಜ್ಞರ ಸಮಿತಿಯು ಈಗ ಅದನ್ನೇ ಇನ್ನಷ್ಟು ಪರಿಷ್ಕರಿಸಿ, ಶೇ.50ರಷ್ಟು ಅಥವಾ ಶೇ.60ರಷ್ಟು ಪಠ್ಯವನ್ನು ಕಡಿತಗೊಳಿಸಿ, ಅಥವಾ ಉಳಿಸಿಕೊಂಡು ಕರಡು ರೂಪದಲ್ಲಿ ವರದಿ ಸಲ್ಲಿಸುವ ಸಾಧ್ಯತೆಯಿದೆ. ಸರಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಡಿಎಸ್ಇಆರ್ಟಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ