ಪಠ್ಯಪುಸ್ತಕ ಪರಿಷ್ಕರಣೆ ನಮಗೆ ಪ್ರತಿಷ್ಠೆಯಲ್ಲ: ಸಿಎಂ ಬೊಮ್ಮಾಯಿ
Team Udayavani, Jun 19, 2022, 11:10 AM IST
ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಈಗಾಗಲೇ ಪರಿಷ್ಕೃತ ಪಠ್ಯ ಪಬ್ಲಿಕ್ ಡೊಮೇನ್ ನಲ್ಲಿದೆ. ಅದರಲ್ಲಿ ಲೋಪವಿದ್ದರೆ ತಿಳಿಸಬಹುದು ಎಂದು ಮುಖ್ಯಂಮತರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿಪಥ ವಿಚಾರವಾಗಿ ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುತ್ತಿದೆ. ಅಗ್ನಿಪಥ ಯೋಜನೆ ಮೂಲಕ ಸಶಕ್ತ ಯುವ ಶಕ್ತಿ ರೂಪಿಸಲಾಗುತ್ತದೆ. ಈಗಾಗಲೇ ಸೇನಾ ಪರೀಕ್ಷೆ ಬರೆದ ಕೆಲವರಿಗೆ ಆತಂಕ ಇರಬಹುದು. ಅದನ್ನೆಲ್ಲ ಕೇಂದ್ರ ಸರ್ಕಾರ ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಆದರೆ ಈ ನೆಪದಲ್ಲಿ ಪ್ರತಿಭಟನೆ,ರೈಲಿಗೆ ಬೆಂಕಿ ಹಾಕುವುದು ಸರಿಯಲ್ಲ ಎಂದರು.
ಇದನ್ನೂ ಓದಿ:ಮೋದಿಗೆ ಸರಿಸಾಟಿ ನಾಯಕ ಮತ್ತೂಬ್ಬರಿಲ್ಲ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ
ಮೋದಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ನಾಳೆ ಸಂಜೆ ಮೈಸೂರಿನಲ್ಲಿ ಸಾರ್ವಜನಿಕ ಸಭೆ, ಸುತ್ತೂರು ಮಠ ಹಾಗೂ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ಕೊಡುತ್ತಿದ್ದಾರೆ. ಎಲ್ಲ ಸಿದ್ಧತೆಗಳೂ ಆಗಿವೆ ಎಂದರು.