ಶಿಗ್ಗಾವಿ ಕ್ಷೇತ್ರದ ಖುರ್ಷಾಪೂರದಲ್ಲಿ ಜವಳಿ ಪಾರ್ಕ್ ಗೆ ಇಂದು ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ
Team Udayavani, Jul 16, 2022, 11:51 AM IST
ಶಿಗ್ಗಾವಿ: ಇಂದು ಸ್ವಕ್ಷೇತ್ರ ಶಿಗ್ಗಾವಿ, ಸವಣೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಆಯೋಜಿಸಿರುವ ಟೆಕ್ಸ್ಟೈಲ್ ಪಾರ್ಕ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅದರ ಜತೆಗೆ ಟೆಕ್ಸ್ ಪೋರ್ಟ್ ಸಿದ್ಧ ಉಡುಪು ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಕೈಮಗ್ಗ ಹಾಗೂ ಜವಳಿ ಇಲಾಖೆಯಿಂದ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂಕರ್ ಪ್ರವರ್ತಕರ ಮಾದರಿಯಲ್ಲಿ 59.34 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಆಗುತ್ತಿದೆ.
ಸಿದ್ಧ ಉಡುಪು ಘಟಕಗಳ ಹಾಗೂ ಜವಳಿ ಘಟಕಗಳ ಸ್ಥಾಪನೆಗೆ ಮೂರು ಹಂತಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದಕ್ಕಾಗಿ ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಆಂಕರ್ ಪ್ರವರ್ತಕ ಟೆಕ್ಸ್ ಪೋರ್ಟ್ ಪ್ರೈ ಲಿ ಕಂಪನಿ 42 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದ ಉಡುಪು ಘಟಕ ನಿರ್ಮಾಣ ಮಾಡುತ್ತಿದೆ. ಇದರಿಂದ ಒಟ್ಟು 3000 ಜನರಿಗೆ ಉದ್ಯೋಗ ಲಭಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ