ಪರೀಕ್ಷಾ ಸವಾಲಿಗೆ ಉತ್ತರ “ಎಕ್ಸಾಮ್ ವಾರಿಯರ್’
Team Udayavani, Jan 21, 2020, 3:05 AM IST
ಬೆಂಗಳೂರು: ಪ್ರಧಾನಿ ಮೋದಿ ಅವರು ರಚಿಸಿರುವ “ಎಕ್ಸಾಮ್ ವಾರಿಯರ್’ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿ, ರಾಜ್ಯ ಸರ್ಕಾರ ದಿಂದಲೇ ಪ್ರತಿಶಾಲೆಗೆ ಹಂಚಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಸೋಮವಾರ ರಾಜಾಜಿನಗರದ ಕೆಎಲ್ಇ ಕಾಲೇಜಿನಲ್ಲಿ “ಪರೀಕ್ಷಾ ಪೆ ಚರ್ಚಾ’ ನೇರಪ್ರಸಾರ ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದ ಅವರು, ತಜ್ಞರು ಮತ್ತು ಮಕ್ಕಳ ಸಲಹೆ ಪಡೆದು ಮೋದಿಯವರು “ಎಕ್ಸಾಮ್ ವಾರಿಯರ್’ ಪುಸ್ತಕ ರಚಿಸಿದ್ದಾರೆ. ಪರೀಕ್ಷೆಗೆ ಹೇಗೆ ಸಿದ್ಧರಾಗಬೇಕು ಮತ್ತು ಪರೀಕ್ಷೆ ಭಯ ಹೋಗಲಾಡಿಸುವ ಅಂಶಗಳನ್ನು ಉಲ್ಲೇಖೀಸಿದ್ದಾರೆ.
ಇದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಕನ್ನಡಕ್ಕೆ ಭಾಷಾಂತರಗೊಳಿಸ ಲಾಗುವುದು ಎಂದರು. ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ಒಂದರಂತೆ ಇಲ್ಲವೆ ಪ್ರತಿ ವಿದ್ಯಾರ್ಥಿಗೆ ಒಂದರಂತೆ ಪುಸ್ತಕ ವಿತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.
ಇದೇ ವೇಳೆ, ಸಚಿವ ಎಸ್.ಸುರೇಶ್ಕುಮಾರ್, ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳ ಮಧ್ಯೆ ಕುಳಿತು “ಪರೀಕ್ಷಾ ಪೆ ಚರ್ಚಾ’ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ಜಿ. ಜಗದೀಶ್, ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ