ವಿಜಯಪುರ : ಕುದುರಿಸಾಲವಾಡಗಿ ಸೈನಿಕನ ಮೇಲೆ ಹಲ್ಲೆ
Team Udayavani, Jul 21, 2021, 9:03 PM IST
ವಿಜಯಪುರ: ಜಿಲ್ಲೆಯಲ್ಲಿ ಸೈನಿಕನ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಸೈನಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ್ದಾನೆ.
ಬಸವನ ಬಾಗೇವಾಡಿ ತಾಲೂಕಿನ ಕುದರೆಸಾಲವಾಡಗಿ ಗ್ರಾಮದ ಸಂತೋಷ ಶಿವಪ್ಪ ಹಟ್ಟಿ(30) ಸೇನೆಯಲ್ಲಿ ಹವಾಲ್ದಾರ ಆಗಿದ್ದು, 10 ವರ್ಷದಿಂದ ಸೇನೆಯಲ್ಲಿದ್ದಾರೆ.
ತನ್ನ ಮದುವೆಗಾಗಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದು, ಗ್ರಾಮದ ಅರವಿಂದ ಕಡೇಮನಿ, ರಾಮಪ್ಪ ಕಡೇಮನಿ, ಬಸಗುಂಡಪ್ಪ ನಡುವಿನ ಮನಿ, ಮಲ್ಲವ್ವ ಕಡೇಮನಿ, ಭಾರತಿ ಕಡೇಮನಿ, ಸಾರ್ ಕಡೇಮನಿ, ರಮೇಶ ನಡುವಿನಮನಿ ಅವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಾಗಿ ಬಸವನ ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೈನಿಕ ಸಂತೋಷ ಕಟ್ಟಿ ಅವರ ತಂದೆ, ತಾಯಿ ಮತ್ತು ಕುಟುಂಬದವರಿಗೆ ಆರೋಪಿಗಳು ಈ ಹಿಂದೆ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ನಮ್ಮ ಕುಟುಂಬದ ಏಳಿಗೆ ಸಹಿಸದೇ ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ಸಂತೋಷ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾನೆ.
ತೀವ್ರವಾಗಿ ಗಾಯಗೊಂಡಿರುವ ಸೈನಿಕ ಸಂತೋಷ ಬಸವನಬಾಗೇವಾಡಿ ತಾಲೂಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್