ರಾಜಭವನಕ್ಕೆ BSY; ಸರ್ಕಾರ ರಚನೆಗೆ ಅವಕಾಶ ಕೋರಿದ ಬಿಜೆಪಿ
Team Udayavani, May 15, 2018, 5:07 PM IST
ಬೆಂಗಳೂರು: ರಾಜ್ಯ ರಾಜಕೀಯದ ದಿಢೀರ್ ಬೆಳವಣಿಗೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್, ಜೆಡಿಎಸ್ ಮೈತ್ರಿಗೆ ವೇದಿಕೆ ಸಿದ್ದವಾಗಿದ್ದರೆ, ಮತ್ತೊಂದೆಡೆ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ ಸರ್ಕಾರ ರಚನೆಗೆ ತಮಗೆ ಅವಕಾಶ ಕೊಡಬೇಕೆಂದು ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ್ದಾರೆ.
ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಯತ್ನ: ಬಿಎಸ್ ವೈ
ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಬಿಜೆಪಿಗೆ ಜನ ಆಶೀರ್ವಾದ ಮಾಡಿದ್ದಾರೆ. ನಾವೇ ಸರ್ಕಾರ ರಚಿಸುತ್ತೇವೆ. ಆದರೆ ಕಾಂಗ್ರೆಸ್ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.