ಪರ್ಯಾಯ ಸರ್ಕಾರಕ್ಕಿಂತ ಮಧ್ಯಂತರ ಚುನಾವಣೆಯೇ ಬಿಜೆಪಿ ಚಿಂತನೆಯಾಗಿತ್ತು


Team Udayavani, Jul 24, 2019, 3:07 AM IST

paryaya

ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರ ಪತನವಾದರೆ ಪರ್ಯಾಯ ಸರ್ಕಾರ ರಚನೆಗಿಂತ ಮಧ್ಯಂತರ ಚುನಾವಣೆ ಎದುರಿಸುವುದು ಬಿಜೆಪಿ ವರಿಷ್ಠರ ಚಿಂತನೆಯಾಗಿತ್ತು. ಆದರೆ, ಬಿಜೆಪಿ ಶಾಸಕರು ಚುನಾವಣೆ ಎದುರಿಸುವ ಮನಸ್ಥಿತಿಯಲ್ಲಿಲ್ಲದ ಕಾರಣ 224 ಕ್ಷೇತ್ರಗಳ ಚುನಾವಣೆಗಿಂತ 20-25 ಕ್ಷೇತ್ರದ ಉಪಚುನಾವಣೆಯೇ ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಯಿತು.

ಬಿಜೆಪಿ 105 ಶಾಸಕ ಬಲ ಹೊಂದಿದ್ದು, ಸರಳ ಬಹುಮತಕ್ಕೆ 8 ಶಾಸಕರ ಕೊರತೆ ಇದೆ. ಪಕ್ಷೇತರ ಇಬ್ಬರು ಶಾಸಕರನ್ನು ಸೆಳೆದರೆ ಆರು ಶಾಸಕರ ಬೆಂಬಲವಷ್ಟೇ ಅಗತ್ಯವಿತ್ತು. ಹಾಗಾಗಿ, ಸಾರ್ವತ್ರಿಕ ಚುನಾವಣೆಗಿಂತ ಉಪಚುನಾವಣೆಯೇ ಸೂಕ್ತ ಎಂಬ ನಿಲುವನ್ನು ಬಿಜೆಪಿ ವರಿಷ್ಠರು ಕೈಗೊಂಡರು. ಆ ಬಳಿಕವಷ್ಟೇ ಆಡಳಿತ ಪಕ್ಷಗಳ ಶಾಸಕರ ರಾಜೀನಾಮೆ ಸರಣಿ ಶುರುವಾಯಿತು ಎಂದು ಮೂಲಗಳು ಹೇಳಿವೆ.

ಕಳೆದ 2018ರ ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ 104 ಶಾಸಕರು ಆಯ್ಕೆಯಾದರೂ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಬಿಜೆಪಿಗೆ ಇರಲಿಲ್ಲ. ಹಾಗಿದ್ದರೂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫ‌ಲರಾದರು. ನಂತರ ಮೈತ್ರಿ ಸರ್ಕಾರ ರಚನೆಯಾಯಿತು. ನಂತರ ಮೈತ್ರಿ ಪಕ್ಷಗಳ ನಾಯಕರಲ್ಲಿ ಒಳಜಗಳ, ಭಿನ್ನಾಭಿಪ್ರಾಯ, ಒಡಕಿನ ಮಾತು ಕೇಳಿ ಬರಲಾರಂಭಿಸಿದಂತೆ ಬಿಜೆಪಿಯಲ್ಲೂ ಸರ್ಕಾರ ರಚನೆಯ ಆಸೆಗೆ ಜೀವ ಬಂದಿತ್ತು.

ಮಧ್ಯಂತರ ಚುನಾವಣೆಗೆ ಒಲವಿತ್ತು: ಸರ್ಜಿಕಲ್‌ ಸ್ಟ್ರೈಕ್‌ ಬಳಿಕ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಬಿಜೆಪಿ ಪರವಾದ ಅಲೆ ಸೃಷ್ಟಿಯಾದಂತೆ ಕಾಣಲಾರಂಭಿಸಿತ್ತು. ಸತತ ಎರಡನೇ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ಸುಸ್ಥಿರ ಸರ್ಕಾರ ರಚಿಸಿದರೆ ರಾಜ್ಯದಲ್ಲೂ ಬಿಜೆಪಿ ಸರ್ಕಾರ ರಚನೆಗೆ ಪ್ರಯತ್ನ ನಡೆಯುವ ಸುಳಿವು ಸಿಕ್ಕಿತ್ತು. ಒಂದೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ, ರಾಜ್ಯದಲ್ಲೂ ಬಿಜೆಪಿ ಹೆಚ್ಚು ಸ್ಥಾನ ಪಡೆದರೆ ಮೈತ್ರಿ ಪಕ್ಷಗಳಲ್ಲಿ ಭಿನ್ನಮತ ಮೂಡುವುದು ಸಹಜವಾಗಿತ್ತು. ಅಂತಹ ಪರಿಸ್ಥಿತಿ ನಿರ್ಮಾಣವಾದರೆ ಪರ್ಯಾಯ ಸರ್ಕಾರ ರಚನೆಗಿಂತ ಮಧ್ಯಂತರ ಚುನಾವಣೆಗೆ ಹೋಗಿ ಐದು ವರ್ಷಗಳ ಸುಸ್ಥಿರ ಸರ್ಕಾರ ರಚಿಸುವುದು ವರಿಷ್ಠರ ಇರಾದೆಯಾಗಿತ್ತು.

ಮಾನಸಿಕವಾಗಿ ಸಿದ್ಧವಾಗದ ಬಿಜೆಪಿ: ಆದರೆ, ಬಿಜೆಪಿಯ ಬಹುತೇಕ ಶಾಸಕರು ಮಧ್ಯಂತರ ಚುನಾವಣೆಗೆ ಹೋಗಲು ಮಾನಸಿಕವಾಗಿ ಸಿದ್ಧರಾಗಿರಲಿಲ್ಲ. ಐದು ವರ್ಷಕ್ಕೆ ಜನ ಆಯ್ಕೆ ಮಾಡಿರುವಾಗ ಕೇವಲ 13 ತಿಂಗಳಷ್ಟೇ ಮುಗಿದಿರುವಾಗ ಚುನಾವಣೆಗೆ ಹೋಗುವುದು ಸರಿಯಲ್ಲ. ಜತೆಗೆ ಅಷ್ಟೂ ಮಂದಿ ಮತ್ತೆ ಗೆದ್ದು ಬರುವ ವಿಶ್ವಾಸವಿಲ್ಲದಿದ್ದುದು ಶಾಸಕರ ಹಿಂಜರಿಕೆಗೆ ಕಾರಣವಾಗಿತ್ತು. ಹಾಗಾಗಿ ಮೈತ್ರಿ ಸರ್ಕಾರದ ಸಂಖ್ಯಾಬಲ ಕಳೆದುಕೊಂಡರೆ, ಪರ್ಯಾಯ ಸರ್ಕಾರ ರಚಿಸಿದರೆ ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ಕಮಲ ಸರ್ಕಾರ ಅರಳಿದಂತಾಗಲಿದೆ ಎಂಬ ಸಮಜಾಯಿಷಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಉಪಚುನಾವಣೆಯೇ ಸೂಕ್ತ: ಒಂದೊಮ್ಮೆ ಮೈತ್ರಿ ಸರ್ಕಾರ ಪತನವಾಗಬೇಕಾದರೆ ಸಂಖ್ಯಾಬಲ ಇಳಿಕೆಯಾಗಬೇಕು. ಆಡಳಿತ ಪಕ್ಷಗಳ 10ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಿದರಷ್ಟೇ ಸಂಖ್ಯಾಬಲ ಇಳಿಕೆಯಾಗಲಿದೆ. ಹೀಗಾಗಿ, ಮಧ್ಯಂತರ ಚುನಾವಣೆ ಘೋಷಣೆಯಾಗಿ 224 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸುವುದಕ್ಕಿಂತ ಆಯ್ದ ಕ್ಷೇತ್ರಗಳಿಗೆ ಉಪಚುನಾವಣೆಗೆ ಸಜ್ಜಾಗುವುದೇ ಸೂಕ್ತ ಎಂಬ ಬಗ್ಗೆ ಚರ್ಚೆಯಾಯಿತು. ಆ ನಂತರವಷ್ಟೇ ಇತರ ಪ್ರಕ್ರಿಯೆಗಳಿಗೆ ಚಾಲನೆ ದೊರೆಯಿತು ಎಂದು ಹೇಳಿವೆ.

ಹಿಂದೆಯೇ ಮುನ್ಸೂಚನೆ!: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನ ಬಾಕಿಯಿದ್ದಾಗ ರಾಜ್ಯ ಬಿಜೆಪಿಯ ಸಂಘಟನಾ ವಿಭಾಗದ ಉನ್ನತ ನಾಯಕರೊಬ್ಬರು ಅನೌಪಚಾರಿಕವಾಗಿ ಚರ್ಚಿಸುವಾಗ ಲೋಕಸಭಾ ಚುನಾವಣೆ ಫ‌ಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುವ ಮುನ್ಸೂಚನೆ ನೀಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಮತ್ತೂಮ್ಮೆ ಸರ್ಕಾರ ರಚಿಸಿದರೆ ರಾಜ್ಯ ಸೇರಿದಂತೆ ದೇಶದಲ್ಲೂ ಸಾಕಷ್ಟು ಬದಲಾವಣೆಗಳಾಗಲಿವೆ.

ರಾಜ್ಯದಲ್ಲೂ ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಮೈತ್ರಿ ಸರ್ಕಾರವೂ ಅಸ್ಥಿರವಾಗುವ ಸಾಧ್ಯತೆ ಇದೆ. 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆದ್ದರೆ ಮೈತ್ರಿ ಪಕ್ಷಗಳಿಗೆ ಜನಾದೇಶವಿಲ್ಲ ಎಂಬುದು ಸಾಬೀತಾಗುತ್ತದೆ. ಆಗ ಆಡಳಿತ ಪಕ್ಷಗಳ ಸಾಕಷ್ಟು ಶಾಸಕರು ಅತೃಪ್ತಿಯಿಂದ ಹೊರ ಬರುವ ಸಾಧ್ಯತೆ ಇದ್ದು, ಸಹಜವಾಗಿಯೇ ಮೈತ್ರಿ ಸರ್ಕಾರದ ಸಂಖ್ಯಾಬಲ ಇಳಿಕೆಯಾಗಲಿದೆ. ಕಾದು ನೋಡೋಣ ಎಂದು ಸೂಚ್ಯವಾಗಿ ತಿಳಿಸಿದ್ದರು.

* ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.