ಪರೀಕ್ಷಾ ಮಂಡಳಿ ವಿಲೀನಕ್ಕೆ ಒಪ್ಪಿಗೆ
Team Udayavani, Sep 23, 2022, 6:20 AM IST
ಬೆಂಗಳೂರು: ಹಲವು ವರ್ಷದಿಂದ ಚರ್ಚೆಯಲ್ಲಿದ್ದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ (ಪಿಯು ಬೋರ್ಡ್) ವಿಲೀನಕ್ಕೆ ಸಂಬಂಧಿಸಿ 2022ನೇ ಸಾಲಿನ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ಮಸೂದೆಗೆ ಅನುಮೋದನೆ ದೊರೆಯಿತು.
ಮಸೂದೆ ಮಂಡಿಸಿ ವಿಷಯ ಪ್ರಸ್ತಾವಿಸಿದ ಸಚಿವ ಬಿ.ಸಿ.ನಾಗೇಶ್, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಇಳಿಸುವ ಉದ್ದೇಶದಿಂದ ಮಂಡಳಿಗಳನ್ನು ವಿಲೀನಗೊಳಿಸುತ್ತಿದ್ದೇವೆ. ಎರಡು ಮಂಡಳಿಗಳನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಿದ್ದೇವೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಎನ್ಇಪಿ ಸೂಚಿಸಿರುವಂತೆ ಪೂರ್ವ ಪ್ರಾಥಮಿಕ ತರಗತಿಯಿಂದ 2ನೇ ತರಗತಿ ವರೆಗೂ ಒಂದು ಹಂತ, 3ರಿಂದ 5ನೇ ತರಗತಿ ವರೆಗೂ ಇನ್ನೊಂದು ಹಂತ, 6ರಿಂದ 8ನೇ ತರಗತಿ ವರೆಗೂ ಮತ್ತೂಂದು ಹಂತ ಹಾಗೂ 9ರಿಂದ 12ನೇ ತರಗತಿವರೆಗೂ ಪ್ರತ್ಯೇಕ ವಿಭಾಗ ಇರಲಿದೆ. ಆದರೆ, ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ಇರುತ್ತವೆ ಎಂದರು.
ಅನುಮೋದನೆ:
ಸಚಿವ ಆರ್. ಅಶೋಕ್ ಮಂಡಿಸಿದ್ದ 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ(ತಿದ್ದುಪಡಿ) ಮಸೂದೆ ಹಾಗೂ 2022ನೇ ಸಾಲಿನ ಕರ್ನಾಟಕ ಸ್ಟಾಂಪ್ (ಮೂರನೇ ತಿದ್ದುಪಡಿ) ಮಸೂದೆಗೂ ಅನುಮೋದನೆ ದೊರೆಯಿತು. (ಸ್ಟಾಂಪ್ ತಿದ್ದುಪಡಿ ಮಸೂದೆಯು ಸರಕಾರದಿಂದ ಅನುದಾನ ಪಡೆದು ಟ್ರಸ್ಟ್ಗಳನ್ನು ನಡೆಸುತ್ತಿರುವವರು ಆದಾಯ ತೆರಿಗೆ ವ್ಯಾಪ್ತಿಯ ಒಳಗೆ ತರುವುದಾಗಿದೆ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ