ರಾಘವೇಶ್ವರ ಶ್ರೀಗಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್
Team Udayavani, Aug 30, 2019, 3:00 AM IST
ಬೆಂಗಳೂರು: ಆರ್ಥಿಕ ಅವ್ಯವಹಾರ ಗಳು ನಡೆದ ಹಿನ್ನೆಲೆಯಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಪೀಠದಿಂದ ಕೆಳಗಿಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಯಿಂದ ನ್ಯಾ.ಮೊಹಮ್ಮದ್ ನವಾಜ್ ಹಿಂದೆ ಸರಿದಿದ್ದಾರೆ. ಈ ಕುರಿತು ಎದುರ್ಕುಲಾ ಈಶ್ವರ್ ಭಟ್ ಹಾಗೂ ಎ.ಕೆ.ಜಯಕೃಷ್ಣ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬಂದಿತ್ತು.
ಕೋರ್ಟ್ ಆಫೀಸರ್ ವಿಚಾರಣೆಗಾಗಿ ಅರ್ಜಿ ಸಂಖ್ಯೆಯನ್ನು ಕೂಗಿದಾಗ ನ್ಯಾ.ಮೊಹಮ್ಮದ್ ನವಾಜ್ ಅವರು, ತಾವು ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದರು. ಆಗ ಅರ್ಜಿ ಋಯನ್ನು ಬೇರೊಂದು ನ್ಯಾಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿ ಸುವಂತೆ ರಿಜಿಸ್ಟ್ರಾರ್ಗೆ ಸೂಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!