“ಮಹಾರಾಷ್ಟ್ರದಿಂದ ಬರುತ್ತಿರುವವರನ್ನು ನಿಯಂತ್ರಿಸುವುದೇ ಸವಾಲು’
Team Udayavani, Jun 9, 2020, 8:15 AM IST
ಹಾಸನ: ರಾಜ್ಯಕ್ಕೆ ಮಹಾರಾಷ್ಟ್ರದಿಂದ ಬರುತ್ತಿರುವವರನ್ನು ನಿಯಂತ್ರಿಸುವುದೇ ದೊಡ್ಡ ಸವಾಲಾಗಿದ್ದು, ಅಲ್ಲಿಂದ ಬರುವವರನ್ನು ವ್ಯವಸ್ಥಿತವಾಗಿ ಕ್ವಾರಂಟೈನ್ ಮಾಡಿ ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದ ಜನರು ಆತಂಕಪಡಬೇಕಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿಯೂ ಮುಂಬೈನಿಂದ ಬಂದವರಿಂದಲೇ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ. ಈಗ ಮಹಾರಾಷ್ಟ್ರದಿಂದ ಬರುತ್ತಿರುವವರನ್ನೂ ವ್ಯವಸ್ಥಿತವಾಗಿ ಕ್ವಾರಂಟೈನ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಲು ಪ್ರಮುಖವಾಗಿ ಮೂರು ಕಾರಣಗಳಿವೆ.
ವಿದೇಶದಿಂದ ವಾಪಸ್ ಆದವರು, ತಬ್ಲೀ ಗಳು ಹಾಗೂ ಮಹಾರಾಷ್ಟ್ರ ದಿಂದ ರಾಜ್ಯಕ್ಕೆ ವಾಪಸ್ಸಾಗುತ್ತಿರುವವರು ಕಾರಣ. ವಿದೇಶಗ ಳಿಂದ ಬಂದ 30 ಸಾವಿರ ಜನರನ್ನು ಕ್ವಾರಂಟೈನ್ ಮಾಡಿ ಪರೀಕ್ಷೆಗೊಳಪಡಿಸಲಾಗಿದೆ. 850 ಮಂದಿ ತಬ್ಲೀಘಿಗಳಿಗೂ ಕ್ವಾರಂಟೈನ್ ಮಾಡಿ ಪರೀಕ್ಷೆ ನಡೆಸಿ ಕೋವಿಡ್ 19 ಹರಡದಂತೆ ಕ್ರಮ ಕೈಗೊಳ್ಳಲಾಗಿತ್ತು. ಈಗ ಮುಂಬೈ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಬಂದವರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ