ಮುಖ್ಯಮಂತ್ರಿ ಮುಂದಿದೆ ಚುನಾವಣೆ ಸವಾಲು


Team Udayavani, Aug 3, 2021, 6:30 AM IST

ಮುಖ್ಯಮಂತ್ರಿ ಮುಂದಿದೆ ಚುನಾವಣೆ ಸವಾಲು

ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ವರ್ಷಾಂತ್ಯದಲ್ಲಿ ಸಾಲು ಸಾಲು ಚುನಾವಣೆಗಳನ್ನು ಎದುರಿ ಸುವ ಸವಾಲು ಹೊತ್ತುಕೊಂಡಿದ್ದು, ಇದು ಅವರ ಪಾಲಿಗೊಂದು ದೊಡ್ಡ ಅಗ್ನಿಪರೀಕ್ಷೆಯಾಗಲಿದೆ.

ಮಾಜಿ ಸಿಎಂ ಯಡಿಯೂರಪ್ಪ  ಸೂಚನೆ ಮೇರೆಗೆ ಮುಖ್ಯಮಂತ್ರಿ ಯಾಗಿದ್ದರೂ, ಮುಂದಿನ ಆರು ತಿಂಗಳಲ್ಲಿ ರಾಜ್ಯದಲ್ಲಿ ಎದುರಾಗುವ ಚುನಾವಣೆಗಳಲ್ಲಿ ಬಸವರಾಜ್‌ ಬೊಮ್ಮಾಯಿಗೆ ತಮ್ಮ ಸಾಮರ್ಥ್ಯ ವನ್ನು ತೋರಿಸುವ ಸವಾಲು ಮತ್ತು ಅವಕಾಶ ಎರಡೂ ಒದಗಿ ಬರಲಿದೆ.

ಸಾಲು ಸಾಲು ಚುನಾವಣೆಗಳು:

ಈ ವರ್ಷಾಂತ್ಯದಲ್ಲಿ ಕೆಲವು ಚುನಾವಣೆಗಳು ಎದುರಾಗಲಿವೆ. ಪ್ರಮುಖವಾಗಿ ಹಾನಗಲ್‌ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು ನಡೆಯ ಲಿವೆ. ಎರಡೂ ಉಪ ಚುನಾವಣೆಗಳು ಉತ್ತರ ಕರ್ನಾಟಕ ಭಾಗದ ಲ್ಲಿಯೇ ನಡೆಯುವುದರಿಂದ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಕ್ಷೇತ್ರಗಳಾಗಿರುವುದರಿಂದ ಅಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರುವುದು ಸಿಎಂಗೆ ಅನಿವಾರ್ಯವಾಗಲಿದೆ.

ಹಾನಗಲ್‌ ಸಿಎಂ ತವರು ಜಿಲ್ಲೆಯ ಕ್ಷೇತ್ರವೇ ಆಗಿರುವುದು ಹಾಗೂ ಬಿಜೆಪಿಯ ಸಿ.ಎಂ. ಉದಾಸಿಯವರೇ ಪ್ರತಿನಿಧಿಸಿದ್ದ ಕ್ಷೇತ್ರವಾಗಿ ರುವುದರಿಂದ ಪಕ್ಷದಿಂದ ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸಿಕೊಂಡು ಬರುವ  ಜವಾಬ್ದಾರಿ ಮುಖ್ಯಮಂತ್ರಿ ಮೇಲೆ ಬೀಳಲಿದೆ.

ಜಿ.ಪಂ. ಚುನಾವಣೆ:

ಈಗಾಗಲೇ ಅವಧಿ ಮುಗಿದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗಳಿಗೆ  ಡಿಸೆಂಬರ್‌ ವೇಳೆಗೆ ಚುನಾವಣೆ ನಡೆಯ ಲಿದೆ. ಇದು ಮಿನಿ ವಿಧಾನಸಭಾ ಚುನಾವಣೆ ಎಂದೇ ಪರಿಗಣಿತ ವಾಗುವುದರಿಂದ ಇದರ  ಫ‌ಲಿ ತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಗ್ರಾಮೀಣ ಭಾಗದ ಮತದಾರರ ನಾಡಿ ಮಿಡಿತವನ್ನು ಬಿಂಬಿಸುವ ಈ  ಚುನಾವಣೆಗಳು ಬೊಮ್ಮಾಯಿಗೆ ಸವಾಲಾಗಲಿದೆ.

ಬಿಬಿಎಂಪಿ, ಪಾಲಿಕೆ ಚುನಾವಣೆ:

ಜತೆಗೆ ಬಿಬಿಎಂಪಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಹಿತ ಅನೇಕ ಮಹಾನಗರ ಪಾಲಿಕೆಗಳ ಚುನಾವಣೆಗಳೂ ಎದುರಾಗಲಿವೆ. ನಗರ ಪ್ರದೇಶದಲ್ಲಿ ತನ್ನ ಶಕ್ತಿಯನ್ನು ಒರೆಗೆ ಹಚ್ಚಲು ಬಿಜೆಪಿ ಗಿರುವ ದೊಡ್ಡ ಅವಕಾಶವೇ ಬಿಬಿಎಂಪಿ ಚುನಾವಣೆ. ಬಿಬಿಎಂಪಿಯನ್ನು ಗೆಲ್ಲಲು ಅಲ್ಲಿನ ಶಾಸಕರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬುದೂ ಮುಖ್ಯವಾಗುತ್ತದೆ.

ಸಿಎಂ ತವರು ಜಿಲ್ಲೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯೂ ವರ್ಷಾಂತ್ಯಕ್ಕೆ ನಡೆಯಲಿದೆ. ಜತೆಗೆ ಕಲಬುರಗಿ ಮಹಾನಗರ ಪಾಲಿಕೆ ಹಾಗೂ 100ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೂ ಸಿಎಂ ಸಾಮರ್ಥ್ಯವನ್ನು ಪರೀಕ್ಷಿಸಲಿವೆ.

25 ಪರಿಷತ್‌ ಸ್ಥಾನಗಳು :

ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ 25 ಸದಸ್ಯರ ಅವಧಿ 2022ರ ಜನವರಿಗೆ ಅಂತ್ಯವಾಗಲಿದ್ದು, ಇದಕ್ಕೂ  ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿವೆ. ಮೇಲ್ಮನೆಯಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಬಹುಮತ ಪಡೆಯಲು ಈ ಚುನಾವಣೆ ಹೆಚ್ಚು ಮಹತ್ವದ್ದಾಗಿದೆ. 2022ರ ಜುಲೈಗೆ ಸಭಾಪತಿ ಬಸವರಾಜ್‌ ಹೊರಟ್ಟಿ  ಅವಧಿ ಪೂರ್ಣಗೊಳ್ಳುವುದರಿಂದ ಬಿಜೆಪಿ  ಬಹುಮತ ಪಡೆದರೆ ತಮ್ಮದೇ ಸಭಾಪತಿಯನ್ನು ಹೊಂದಲು ಅವಕಾಶ ಸಿಗಲಿದೆ. ಹೀಗಾಗಿ ಈ ಚುನಾ ವಣೆಯಲ್ಲಿ ಹೆಚ್ಚು ಸದಸ್ಯರನ್ನು ಗೆಲ್ಲಿಸುವ ಸವಾಲು ಸಿಎಂ ಮುಂದಿದೆ.

-ಶಂಕರ ಪಾಗೋಜಿ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.