ಮುಖ್ಯ ಕಾರ್ಯದರ್ಶಿಗೆ ಉಂಟು ಕಾರ್ಕಳದ ನಂಟು


Team Udayavani, Dec 2, 2017, 3:01 PM IST

siddu-prabha.jpg

ಕಾರ್ಕಳ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿರುವ ಐಎಎಸ್‌ ಅಧಿಕಾರಿ ರತ್ಮಪ್ರಭಾ ಅವರಿಗೂ ಕಾರ್ಕಳಕ್ಕೂ ನಂಟಿದೆ ಎಂಬುದು ಬಹುತೇಕರಿಗೆ ಗೊತ್ತೇ ಇಲ್ಲ. ಈಗಲೂ ವರ್ಷಕ್ಕೊಮ್ಮೆ ತಾಯಿಯ ಊರು ಕಾರ್ಕಳಕ್ಕೆ ಪ್ರತಿ ವರ್ಷ ರತ್ನಪ್ರಭಾ ಅವರು ಭೇಟಿ ನೀಡುತ್ತಾರೆ. 

ಹೌದು, ರಾಜ್ಯದ ಅತ್ಯುನ್ನತ ಹುದ್ದೆಯ ಹೊಣೆಗಾರಿಕೆ ವಹಿಸಿಕೊಂಡಿರುವ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ತಾಯಿ ಕಾರ್ಕಳದವರು. ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ದಾಖಲಾಗಿರುವ ರತ್ನಪ್ರಭ ಅವರ ವೈಯಕ್ತಿಕ ವಿವರದ ಪೈಕಿ ಅವರಿಗೆ ಗೊತ್ತಿರುವ ಭಾಷೆಗಳಲ್ಲಿ ಕೊಂಕಣಿಯೂ ಸೇರಿದೆ.

ಕಾರ್ಕಳದ ಜನಪ್ರಿಯ ಉದ್ಯಮಿ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡು ಜನಪ್ರಿಯರಾಗಿದ್ದ ಹಳೇ ದ್ವಾರಕಾ ಹೊಟೇಲಿನ ಮಾಲೀಕ ಸದಾನಂದ ಕಾಮತ್‌ ಅವರ ಸೋದರಿಯಾಗಿದ್ದ ವಿಮಾಲಾ ಬಾೖ ಅವರ ಮೂವರು ಮಕ್ಕಳಲ್ಲಿ ರತ್ನಪ್ರಭಾ ಕೊನೆಯವರು.

ಕಾರ್ಕಳದಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸಿದ ದಿ ವಿಮಲಾ ಬಾೖ ಅವರು ಆಂಧ್ರ ಮೂಲದ ಅಧಿಕಾರಿ ಚಂದ್ರಯ್ಯ ಅವರನ್ನು ವಿವಾಹವಾಗಿದ್ದರು. ತಮ್ಮ ಬಾಲ್ಯ ಹಾಗೂ ಶಿಕ್ಷಣವನ್ನು ಆಂಧ್ರಪ್ರದೇಶದಲ್ಲಿಯೇ ಪೂರೈಸಿದ ರತ್ನಪ್ರಭಾ ಅವರು, ತಾಯಿ ವಿಮಲಾ ಅವರ ಜತೆ ರಜಾ ದಿನಗಳಲ್ಲಿ ಕಾರ್ಕಳದತ್ತ ಬಂದು ಕುಟುಂಬದ ಸದಸ್ಯರ ಜತೆಗೆ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದರು.

ಈಗಲೂ ವರ್ಷಕ್ಕೊಂದು ಬಾರಿ ಕಾರ್ಕಳಕ್ಕೆ ಬರುವ ಅವರು, ಕುಟುಂಬದ ಕಾರ್ಯಕ್ರಮಗಳಲ್ಲಿ, ತಮ್ಮ ಕುಟುಂಬದ ದೇವಸ್ಥಾನದ ಪೂಜಾ ಮಹೋತ್ಸವಗಳಲ್ಲಿ ಪಾಲ್ಗೊಳ್ಳುತ್ತಾರೆ.

ಕರಾವಳಿಯ ನಿಕಟ ಸಂಪರ್ಕ: ತಾಯಿ ವಿಮಲಾ ಅವರು ಮಂಗಳೂರು, ಪುತ್ತೂರು, ಕಾರ್ಕಳ ಮೊದಲಾದ ಕಡೆ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದರಿಂದ ಆ ಊರುಗಳ ಸಂಪರ್ಕವೂ ರತ್ನಪ್ರಭಾ ಅವರಿಗಿದೆ.  ವಿಮಲಾ ಅವರು ಮಂಗಳೂರಿನ ಲೇಡಿ ಗೋಶನ್‌ನಲ್ಲಿಯೂ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದು ಸ್ಕಿನ್‌ ಸ್ಪೆಷಲಿಸ್ಟ್‌ ಆಗಿದ್ದರು.

2016 ರಲ್ಲಿ ತಾಯಿ ತೀರಿಕೊಂಡಾಗ ಕೊನೆಯ ಬಾರಿ ರತ್ನಪ್ರಭಾ ಅವರು ಕಾರ್ಕಳಕ್ಕೆ ಭೇಟಿ ನೀಡಿದ್ದರು. ರತ್ನಪ್ರಭಾ ಅವರಿಗೆ ಕಾರ್ಕಳ ಇಷ್ಟವಾದ ತಾಣ, ಕಾರ್ಕಳದಲ್ಲಿರುವ ಪೂರ್ವಜರ ಮನೆ, ವಾತಾವರಣ ಎಲ್ಲವೂ ಅವರಿಗೆ ಅಚ್ಚು-ಮೆಚ್ಚು ಎಂದು ಪ್ರಸ್ತುತ ಬೆಂಗಳೂರಿನಲ್ಲಿರುವ ಕಾರ್ಕಳದ ದಿ|ಸದಾನಂದ ಕಾಮತ್‌ ಕುಟುಂಬ ಸದಸ್ಯರು ತಿಳಿಸುತ್ತಾರೆ.

ಕೊಂಕಣಿ ಅಂದ್ರೆ ಇಷ್ಟ: ರತ್ನಪ್ರಭಾ ಅವರಿಗೆ ಕೊಂಕಣಿ ಎಂದರೆ ಇಷ್ಟ .ಮನೆ ಭಾಷೆ ಕೊಂಕಣಿಯಾದ್ದರಿಂದ ಭಾಷೆಯ ಮೇಲೆ ಅಭಿಮಾನ ಜಾಸ್ತಿ. ಆಂಧ್ರಮೂಲದ ಹುಡುಗನನ್ನು ವರಿಸಿದ್ದರೂ, ಕೊಂಕಣಿ ಭಾಷೆ ಹಾಗೂ ಊರಿನ ವ್ಯಾಮೋಹದಿಂದ ತಮ್ಮ ಮಗ, ಮಗಳಿಗೂ ಕೊಂಕಣಿ ಕಲಿಸಿದ್ದಾರೆ. ಭಾಷಾ ಪ್ರೇಮವನ್ನೂ ಉಳಿಸಿಕೊಂಡಿದ್ದಾರೆ. ಅಲ್ಲದೇ ಟೆನ್ನಿಸ್‌ನಲ್ಲಿಯೂ ಅವರು ಪ್ರವೀಣೆಯಾಗಿದ್ದರು ಎಂದು ಸದಾನಂದ ಕಾಮತ್‌ ಕುಟುಂಬ ಸದಸ್ಯರು ಹೇಳುತ್ತಾರೆ.

ಮಹಿಳಾ ಕಾಳಜಿ ಹಾಗೂ ಜನಸ್ನೇಹಿ ಅಧಿಕಾರಿ: ಸಾಮಾನ್ಯವಾಗಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡರೆ ಐಐಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಶುಭ ಕೋರುವುದು ಸಹಜ. ಆದರೆ, ರತ್ನಪ್ರಭಾ ಅವರು ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡ ಆದೇಶ ಹೊರಬೀಳುತ್ತಿದ್ದಂತೆ ಮಹಿಳಾ ಸಂಘಟನೆಗಳು, ನಾಗರಿಕ ಸಂಘಟನೆಗಳು, ಸೇವಾ ಸಂಸ್ಥೆಗಳ ಪ್ರತಿನಿಧಿಗಳು ವಿಧಾನಸೌಧಕ್ಕೆ ಆಗಮಿಸಿ ರತ್ನಪ್ರಭಾ ಅವರಿಗೆ ಶುಭಕೋರುತ್ತಿರುವುದು ವಿಶೇಷ.

ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾಕ್ಷರತೆ ಬಗ್ಗೆ ಹೆಚ್ಚು ಒತ್ತು ನೀಡಿದ್ದ ರತ್ನಪ್ರಭಾ ಅವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಸೈ ಎನಿಸಿಕೊಂಡವರು. ಐಎಎಸ್‌ ವಲಯದಲ್ಲಿಯೂ ರತ್ನಪ್ರಭಾ ಅವರು ದಕ್ಷತೆ, ಸರಳ ಹಾಗೂ ಜನಸ್ನೇಹಿ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ.

* ಪ್ರಸಾದ್‌ ಶೆಣೈ ಕಾರ್ಕಳ

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.