ಸಿಎಂ ಎದುರೇ ಮೈತ್ರಿ ನಾಯಕರ ಕಿತ್ತಾಟ


Team Udayavani, Jun 22, 2019, 3:00 AM IST

Udayavani Kannada Newspaper

ಚಂಡರಕಿ: ಗುರುಮಿಠಕಲ್‌ ಶಾಸಕ ನಾಗನಗೌಡ ಕಂದಕೂರ, ಶರಣಗೌಡ ಕಂದಕೂರ, ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ ನಡುವಿನ ಭಿನ್ನಮತವು ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲೇ ಸ್ಫೋಟಗೊಂಡಿತು.

ಶುಕ್ರವಾರ ಯಾದಗಿರಿ ಜಿಲ್ಲೆಯ ಗುರುಮಿಠಕಲ್‌ ವಿಧಾನಸಭಾ ಕ್ಷೇತ್ರದ ಚಂಡರಕಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ಹಾಗೂ ಜನತಾದರ್ಶನ ಉದ್ಘಾಟನಾ ಸಮಾರಂಭದ ವೇದಿಕೆ ಮೇಲೆಯೇ ಶಾಸಕ ನಾಗನಗೌಡ ಕಂದಕೂರ, ಅವರ ಪುತ್ರ ಶರಣಗೌಡ ಕಂದಕೂರ ಹಾಗೂ ಸಚಿವ ರಾಜಶೇಖರ ಪಾಟೀಲ ನಡುವೆ ಜಟಾಪಟಿ ನಡೆಯಿತು.

ಸಮಾರಂಭ ಉದ್ಘಾಟನೆಗೊಂಡು ಸಚಿವ ರಾಜಶೇಖರ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಲು ಮುಂದಾದರು. ಈ ಸಂದರ್ಭದಲ್ಲಿ ಶಾಸಕರ ಪುತ್ರ ಶರಣಗೌಡ ಕಂದಕೂರ ಹಾಗೂ ಅವರ ಬೆಂಬಲಿಗರು ಮೊದಲು ಶಾಸಕ ನಾಗನಗೌಡ ಕಂದಕೂರ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಬೇಕು.

ಶರಣಗೌಡ ಕಂದಕೂರ ಅವರಿಗೆ ವೇದಿಕೆ ಮೇಲೆ ಅವಕಾಶ ಕಲ್ಪಿಸಬೇಕೆಂದು ಕೂಗ ತೊಡಗಿದರು. ಎಲ್ಲ ಸಿದ್ಧತೆ ನಾವು ಮಾಡಿದ್ದೇವೆ, ನೀವೇನು ಮಾಡಿದ್ದೀರಿ ಎಂದರು. ಇದರಿಂದ ಬೇಸತ್ತ ಸಚಿವ ರಾಜಶೇಖರ ಪಾಟೀಲ ಮಾತನ್ನು ಮೊಟಕುಗೊಳಿಸಿ, ಆಸನದಲ್ಲಿ ಕುಳಿತುಕೊಳ್ಳಲು ಬಂದರು.

ಆಗ, ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಚಿವರಾದ ಬಂಡೆಪ್ಪ ಖಾಶೆಂಪೂರ, ಪ್ರಿಯಾಂಕ್‌ ಖರ್ಗೆ ಸಮಾಧಾನ ಪಡಿಸಲು ಮುಂದಾದರು. ಇದರ ನಡುವೆ ಶಾಸಕ ನಾಗನಗೌಡ ಕಂದಕೂರ ಅವರು ನಾನು ಎದ್ದು ಹೋಗುತ್ತೇನೆ ಎಂದು ಪ್ರತಿವಾದ ಮಾಡಿದರು.

ಇದರಿಂದ ಸಮಾರಂಭದಲ್ಲಿ ಕೆಲಕಾಲ ಏನು ನಡೆಯುತ್ತಿದೆ ಎನ್ನುವುದೇ ಗೊತ್ತಾಗಲಿಲ್ಲ. ತಕ್ಷಣ ಕುಮಾರಸ್ವಾಮಿ ಅವರು ಶರಣಗೌಡ ಕಂದಕೂರ ಅವರನ್ನು ಕರೆದು ಕಿವಿಮಾತು ಹೇಳಿದರು. ತದನಂತರ ಪರಿಸ್ಥಿತಿ ತಿಳಿಯಾಯಿತು. ಬಳಿಕ ಸಚಿವ ರಾಜಶೇಖರ ಪಾಟೀಲ ತಮ್ಮ ಮಾತು ಮುಂದುವರಿಸಿದರು.

ಇದಕ್ಕೂ ಮುನ್ನ ವೇದಿಕೆ ಮೇಲೆ ಶಾಸಕರಿಗೆ ಆಸನ ನೀಡದ ಪ್ರಯುಕ್ತ ಬಹಿರಂಗ ತಳ್ಳಾಟವೂ ನಡೆಯಿತು. ಅಲ್ಲದೇ ಶಾಸಕರ ಪಕ್ಕ ಕುಳಿತುಕೊಳ್ಳಲು ಸಚಿವ ರಾಜಶೇಖರ ಪಾಟೀಲ ಸ್ಪಷ್ಟವಾಗಿ ನಿರಾಕರಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ಪರಿಸ್ಥಿತಿ ಗಂಭೀರತೆ ಅರಿತ ಮುಖ್ಯಮಂತ್ರಿಗಳು ತಾವು ಆಸೀನರಾಗಿರುವ ಹಿಂಭಾಗದಲ್ಲೇ ಶಾಸಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದರು.

ಸಚಿವರ ಆಕ್ಷೇಪ: ಸಚಿವ ರಾಜಶೇಖರ ಪಾಟೀಲ, “ಎಲ್ಲೆಲ್ಲೂ ಜೆಡಿಎಸ್‌ ಧ್ವಜ ಹಾಗೂ ಅವರ ಪಕ್ಷದ ನಾಯಕರ ಕಟೌಟ್‌ಗಳೇ ಕಾಣುತ್ತಿವೆ, ಕಾಂಗ್ರೆಸ್‌ ನಾಯಕರ ಭಾವಚಿತ್ರಗಳು ಪ್ರಮುಖವಾಗಿ ಕಂಡುಬರುತ್ತಿಲ್ಲ’ ಎಂದು ಗುರುವಾರ ಆಕ್ಷೇಪ ವ್ಯಕ್ತಪಡಿಸಿದ್ದರು. ಗುರುಮಿಠಕಲ್‌ದಿಂದ ಚಂಡರಕಿಗೆ ಹೋಗುವ ನಾಲ್ಕುವರೆ ಕಿ.ಮೀ. ಜೆಡಿಎಸ್‌ ಪಕ್ಷದ ಧ್ವಜಗಳೇ ಇದ್ದವು. ಶುಕ್ರವಾರ ಸಿಎಂ ಬರುವ ವೇಳೆ ಅದರಲ್ಲಿ ಕಾಂಗ್ರೆಸ್‌ ಪಕ್ಷದ ಧ್ವಜ ಕಂಡು ಬಂತು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.