ರಾಷ್ಟ್ರದ್ರೋಹಿ ಕೆಲಸಕ್ಕೆ “ಕೈ’ ನಾಯಕರ ಇಂಬು
Team Udayavani, Feb 23, 2020, 3:04 AM IST
ಧಾರವಾಡ: ರಾಜ್ಯದ ಅನ್ನ, ನೀರು, ಉಪ್ಪು ತಿಂದು “ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗುವ ಅವಿವೇಕಿಗಳನ್ನು ಡಿ.ಕೆ.ಶಿವಕುಮಾರ್ ಬೆಂಬಲಿಸುವುದು ಖಂಡನೀಯ. ಇದು ನಾಚಿಗೇಡಿನ ಸಂಗತಿ. ಇಂದು ಹುಡುಗಿ ಬಾಯಲ್ಲಿ ಬಂದಿರುವ “ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ, ನಾಳೆ ಡಿಕೆಶಿ ಬಾಯಲ್ಲಿ ಬಂದರೂ ಅಚ್ಚರಿಪಡಬೇಕಿಲ್ಲ ಎಂದು ಸಚಿವ ಜಗದೀಶ ಶೆಟ್ಟರ ಟೀಕಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರು ನೀಡುವ ಬೆಂಬಲದಿಂದ ರಾಜ್ಯದಲ್ಲಿ ರಾಷ್ಟ್ರದ್ರೋಹದ ಚಟುವಟಿಕೆಗಳು ಹೆಚ್ಚುತ್ತಿದ್ದು, ಮುಖ್ಯವಾಗಿ ಕಾಂಗ್ರೆಸ್ ಪಕ್ಷವೇ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿದೆ. ರಾಷ್ಟ್ರದ್ರೋಹದ ಕೆಲಸಕ್ಕೆ ಕಾಂಗ್ರೆಸ್ ನಾಯಕರೇ ರಾಜ್ಯದಲ್ಲಿ ಇಂಬು ನೀಡುವ ಕೆಲಸ ಮಾಡುತ್ತಿದ್ದಾರೆಂದು ದೂರಿದರು.
ಪಾಕ್ ಗೆದ್ದಾಗ ಪಟಾಕಿ ಹಾರಿಸಿದವರ ಬಗ್ಗೆ ಕಾಂಗ್ರೆಸ್ನವರು ಹುಡುಗರು ಮಾಡಿದ್ದಾರೆ ಬಿಡಿ ಎನ್ನುತ್ತಿದ್ದರು. ಸಿಎಎ ಇಟ್ಟುಕೊಂಡು ಒಂದು ಕೋಮಿನ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ನಕ್ಸಲ್ ಜತೆಗೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ. ಇದೇ ಕಾರಣಕ್ಕೆ ಡಿಕೆಶಿಯವರು ಅಮೂಲ್ಯ ಹೇಳಿಕೆಯನ್ನು ಬೆಂಬಲಿಸಿರಬೇಕು ಎಂದು ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ