ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ


Team Udayavani, Sep 25, 2019, 3:05 AM IST

rajyadalli

ಬೆಂಗಳೂರು/ಹುಬ್ಬಳ್ಳಿ: ರಾಜ್ಯದ ಹಲವೆಡೆ ಮಂಗಳವಾರವೂ ವರುಣನ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆ ಸಂಬಂಧಿ ಘಟನೆಯಲ್ಲಿ ಮನೆ ಮಾಳಿಗೆ ಕುಸಿದು ಯುವತಿ ಮೃತಪಟ್ಟಿದ್ದಾಳೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಸುರಿದ ಮಳೆ-ಗಾಳಿಗೆ ಮನೆಯ ಮಾಳಿಗೆ ಕುಸಿದು ಸಂಗೀತಾ ಜಗಪ್ಪ ಕತ್ತಿ (19) ಸಾವನ್ನಪ್ಪಿದ್ದಾರೆ. ಮೃತಳ ತಾಯಿ ಭಾಗ್ಯಶ್ರೀ ಅಪಾಯದಿಂದ ಪಾರಾಗಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿ ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದ ಹಲವೆಡೆ ಮಳೆಯಾಗಿದ್ದು, ಸೋಮವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬಂಡೆಯೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಮಹದೇಶ್ವರ ಬೆಟ್ಟ -ಪಾಲಾರ್‌ ಮಧ್ಯೆ ಸಂಚಾರಕ್ಕೆ ಅಡಚಣೆಯಾಗಿತ್ತು. ಹಾಸನ ನಗರದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದರಿಂದ ಸಾರ್ವಜನಿಕರು ಪರದಾಡಿದರು.

ಮಂಡ್ಯ ಜಿಲ್ಲಾದ್ಯಂತ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬಹುತೇಕ ಕೆರೆಗಳು ಸಂಪೂರ್ಣ ಭರ್ತಿಯಾಗಿವೆ. ಕೆಲವೆಡೆ ಒಡೆದು ಬೆಳೆಗಳಿಗೆ ನೀರು ನುಗ್ಗಿದರೆ, ಮತ್ತೆ ಕೆಲವೆಡೆ ಒಡೆಯುವ ಆತಂಕದಲ್ಲಿವೆ. ಶಿಂಷಾ ನದಿ ತುಂಬಿ ಹರಿದು ಪ್ರವಾಹ ಸ್ಥಿತಿ ತಲುಪಿದೆ. ಕೆಲ ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧಗೊಳಿಸಿ ಪರ್ಯಾಯ ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ.

ಸೋಮವಾರ ತಡರಾತ್ರಿ ಗದಗ ಜಿಲ್ಲೆಯಲ್ಲಿ ಒಟ್ಟು 124.2 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಸತತ ಮೂರ್‍ನಾಲ್ಕು ಗಂಟೆ ಸುರಿದ ಮಳೆಯಿಂದ ಗದಗ-ಬೆಟಗೇರಿ ಅವಳಿ ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ರಾತ್ರಿಯಿಡೀ ಜಾಗರಣೆ ಮಾಡುವಂತಾಯಿತು. ಇನ್ನು, ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮಾರುತಗಳು ಸಕ್ರಿಯವಾಗಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು.

ಶ್ರವಣಬೆಳಗೊಳದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 9 ಸೆಂ. ಮೀ. ಮಳೆಯಾಗಿದೆ. ರಾಜ್ಯದ ವಿವಿಧೆಡೆ ಬಿದ್ದ ಮಳೆಯ ಪ್ರಮಾಣ ಹೀಗಿತ್ತು(ಸೆಂ.ಮೀ.ಗಳಲ್ಲಿ): ನುಗ್ಗೇಹಳ್ಳಿ, ಬರ ಗೂರು ತಲಾ 8, ನಾಗಮಂಗಲ, ತಿಪಟೂರು ತಲಾ 7, ಮೈಸೂರು 6, ಮಂಡ್ಯ, ಕೃಷ್ಣರಾಜಪೇಟೆ, ಪಾವಗಡ, ಮಳವಳ್ಳಿ, ಮಲೆಮಹದೇಶ್ವರ ಬೆಟ್ಟ 5, ಶಿರಾ, ಹೆಸರಘಟ್ಟ 4, ಹೊಳೆನರಸೀಪುರ, ಬೆಳ್ಳೂರು 3, ಸುಬ್ರಹ್ಮಣ್ಯ, ಸೈದಾಪುರ, ಶ್ರೀರಂಗಪಟ್ಟಣ,

ನೆಲಮಂಗಲ, ಮಧುಗಿರಿ, ಗುಬ್ಬಿ, ಹುಲಿಯೂರುದುರ್ಗ, ಕಡೂರು, ಚಾಮರಾಜನಗರ 2, ಹೊಸದುರ್ಗ, ಹಾಸನ, ಹಳೇಬೀಡು, ಚನ್ನರಾಯ ಪಟ್ಟಣ, ಕನಕಪುರ, ಮಾಗಡಿ, ಚಿಕ್ಕಮಗಳೂರು, ಬೆಂಗಳೂರು ನಗರ, ಸರಗೂರು, ಮಡಿಕೇರಿ, ಕುಶಾಲನಗರ, ಭಾಗಮಂಡಲ, ಸೋಮವಾರಪೇಟೆ, ಕೊರಟಗೆರೆ, ಬುಕ್ಕಪಟ್ಣ, ಹೊಸಕೋಟೆ, ಆನೇಕಲ್‌ನಲ್ಲಿ 1 ಸೆಂ.ಮೀ.ಮಳೆಯಾಗಿದೆ. ಗುರುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

ಉಕ್ಕೇರಿದ ಹಳ್ಳದಲ್ಲೇ ಶವ ಸಾಗಿಸಿ ಅಂತ್ಯಸಂಸ್ಕಾರ: ಬಿಸಿಲುನಾಡು ಬಳ್ಳಾರಿಯಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಉಕ್ಕೇರಿದ ಹಳ್ಳದಲ್ಲೇ ಶವ ಸಾಗಿಸಿ ಅಂತ್ಯಸಂಸ್ಕಾರ ನಡೆಸಲಾಗಿದೆ. ಸೋಮವಾರ ಅಸುಂಡಿ ಗ್ರಾಮದಲ್ಲಿ ಪರಶುರಾಮ್‌ (45) ಎಂಬುವವರು ಹೃದಯಾಘಾತದಿಂದ ನಿಧನರಾಗಿದ್ದರು. ಗ್ರಾಮದ ಪಕ್ಕದ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದ ಆಚೆಗಿನ ಸ್ಮಶಾನಕ್ಕೆ ತೆರಳಲು ರಸ್ತೆಯೇ ಇಲ್ಲದ ಕಾರಣ ಹಳ್ಳದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಲೆಂದು ಕುಟುಂಬಸ್ಥರು ಶವವನ್ನು ಮನೆಯಲ್ಲೇ ಇಟ್ಟುಕೊಂಡಿದ್ದರು. ಆದರೆ ಹಳ್ಳದಲ್ಲಿ ನೀರು ಕಡಿಮೆಯಾಗದ್ದರಿಂದ ಅನಿವಾರ್ಯ ವಾಗಿ ಮಂಗಳವಾರ ತುಂಬಿ ಹರಿಯುತ್ತಿರುವ ಹಳ್ಳದಲ್ಲೇ ಶವವನ್ನು ಸ್ಮಶಾನಕ್ಕೆ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.