ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ


Team Udayavani, Jun 5, 2023, 6:36 PM IST

1-sdasdasd

ಕೊಪ್ಪಳ: ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸರ್ಕಾರದಲ್ಲಿ ಇನ್ನೂ ಚರ್ಚೆಯೇ ಆಗಿಲ್ಲ. ಈಗಲೇ ಏಕೆ ಮುನ್ನೆಲೆಗೆ ಬಂತು ಎನ್ನುವುದು ಗೊತ್ತಾಗುತ್ತಿಲ್ಲ. ಪಶು ಸಂಗೋಪನಾ ಸಚಿವರು ತಮ್ಮ ದೃಷ್ಟಿಯಲ್ಲಿ ಕಾಯ್ದೆ ಹಿಂಪಡೆಯುವ ಬಗ್ಗೆ ಹೇಳಿರಬಹುದು. ಈ ಬಗ್ಗೆ ಸಿಎಂ, ಡಿಸಿಎಂ ಅವರು ಈ ಬಗ್ಗೆ ನಿರ್ಧರಿಸುತ್ತಾರೆ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದರು.

ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಅಧಿವೇಶನ ಆರಂಭಕ್ಕೂ ಮುನ್ನ ಯಾವ ಬಿಲ್ ತರಬೇಕು. ಯಾವ ಬಿಲ್ ಬೇಡ ಎನ್ನುವ ಕುರಿತು ಚರ್ಚೆ ನಡೆಯುತ್ತವೆ. ಆಗ ನಿಖರವಾಗಿ ಗೊತ್ತಾಗಲಿದೆ. ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಏನು ನಿರ್ಧಾರ ಕೈಗೊಳ್ಳುತ್ತೋ ಅದೇ ನನ್ನ ನಿರ್ಧಾರ ಎಂದರು.

ಬಿಜೆಪಿಯ ಎಲ್ಲ ಹಗರಣಗಳನ್ನು ತನಿಖೆಯನ್ನು ಮಾಡಲೇ ಬೇಕಿದೆ. ಬಿಜೆಪಿ ಈ ರಾಜ್ಯವನ್ನು ಹರಾಜು ಮಾಡಿದೆ. ೪೦ ಪರ್ಸೆಂಟ್ ಸರ್ಕಾರ ಎಂದು ಹೆಸರು ಮಾಡಿದ್ದಾರೆ. ಸರ್ಕಾರದ ಮಾನ ಮರ್ಯಾದೆ ತೆಗೆದಿದ್ದಾರೆ. ಪಿಎಸ್‌ಐ ಹಗರಣ ರಾಜ್ಯದಲ್ಲಿ ಸುದ್ದಿಯಾಯಿತು. ಓರ್ವ ಐಪಿಎಸ್ ಅಧಿಕಾರಿ ಬಂಧನ ಆಗಿದೆ. ಅದು ಬಿಟ್ಟು ಏನೂ ಆಗಿಲ್ಲ. ಇದರಲ್ಲಿ ಯಾವ ಮಂತ್ರಿ, ಶಾಸಕ ಇದ್ದಾರೆ ಎನ್ನುವ ತನಿಖೆ ಮಾಡಿಸಿಲ್ಲ. ನಾವು ಈ ಪ್ರಕರಣ ಹೀಗೆ ಬಿಟ್ಟರೆ ರಾಜ್ಯದ ಜನತೆಗೆ ಅನ್ಯಾಯ ಮಾಡಿದಂತಾಗಲಿದೆ. ಸಿಎಂ ಸಿದ್ದರಾಮಯ್ಯ ಅವರು ಆಗ ಈ ಹಗರಣದ ವಿರುದ್ದ ಮಾತನಾಡಿದ್ದರು. ಈಗ ಅವರು ಸುಮ್ನೆ ಬಿಡುತ್ತಾರಾ ? ನಾನೂ ಹಗರಣದ ವಿರುದ್ದ ಹೋರಾಟ ಮಾಡಿದ್ದೇನೆ. ನಾವು ಸುಮ್ಮನೆ ಇರಲ್ಲ. ’ಈ ಹಗರಣದಲ್ಲಿ ಭಾಗಿಯಾದ ವ್ಯಕ್ತಿಗಳೇ ನಾನೇ ದುಡ್ಡು ಕೊಟ್ಟಿರುವೆ. ನನ್ನದೇ ಆ ಧ್ವನಿ ಎಂದು ಹೇಳಿದ್ದಾರೆ.’ ಇಷ್ಟೆಲ್ಲಾ ಆದರೂ ನಾವು ಸುಮ್ಮನಿರಲು ಆಗುತ್ತಾ ಎಂದರು.
ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ನಾವು ಪ್ರೀತಿ, ವಿಶ್ವಾಸದ ರಾಜಕಾರಣ ಮಾಡಿದ್ದೇವೆ. ಎಲ್ಲ ಜಾತಿಗಳನ್ನು ಸಮನಾಗಿ ತೆಗೆದುಕೊಂಡು ಬಂದಿದ್ದೇವೆ. ನಮ್ಮ ಅಧಿಕಾರವಧಿಯಲ್ಲಿ ಹಿಂದೂ ಮುಸ್ಲಿಂ, ಸಿಖ್ ಎಂದು ಒಂದಾಗಿದ್ದೇವೆ. ಆದರೆ ಬಿಜೆಪಿ ತಮ್ಮ ಮೇಲಿನ ಆಪಾದನೆ ನಮ್ಮ ಮೇಲೆ ಹಾಕುತ್ತಿದೆ ಎಂದರು.

ಪಠ್ಯ ಪುಸ್ತಕದ ಪರಿಷ್ಕರಣೆ ವಿಚಾರದಲ್ಲಿ, ಮಕ್ಕಳಿಗೆ ಒಳ್ಳೆಯದನ್ನು ಬೋಧನೆ ಮಾಡಬೇಕು. ಅಲ್ಲಿಯೇ ಜಾತಿ ಬಿತ್ತುವ ಕೆಲಸ ಆಗಬಾರದು. ಇತಿಹಾಸ ಇರುವ ಸತ್ಯವನ್ನು ಹೇಳಬೇಕು. ಇತಿಹಾಸ ತಿರುಚಿ ಹೇಳುವ ಕೆಲಸ ಆಗಬಾರದು. ಬಿಜೆಪಿ ತಿರುಚಿ ಹೇಳುವ ಕೆಲಸ ಮಾಡಿದೆ. ಇತಿಹಾಸ ಎಲ್ಲರಿಗೂ ಒಂದೇ. ಸತ್ಯಾಸತ್ಯತೆಯನ್ನ ಮಕ್ಕಳಿಗೆ ತಿಳಿಸಬೇಕು. ಸತ್ಯವನ್ನು ಸಮಾಜಕ್ಕೆ ತಿಳಿಸದೇ ಹೋದರೆ ನಾವು ಮೋಸ ಮಾಡಿದಂತೆ ಎಂದರು.
ಈ ವೇಳೆ ಶಾಸಕ ರಾಘವೇಂದ್ರ ಹಿಟ್ನಾಳ ಇದ್ದರು.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

sthiraasthi

Karnataka: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.