ಪ್ರಸಕ್ತ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ
Team Udayavani, Jun 6, 2019, 3:00 AM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಮಾಡಬೇಕಾದ ಕಾರ್ಯಗಳು, ಸರ್ಕಾರಿ ರಜಾ ದಿನಗಳು ಹಾಗೂ ವಿವಿಧ ಜಯಂತಿಯ ಸಂಪೂರ್ಣ ಮಾಹಿತಿ ಒಳಗೊಂಡ ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಜೂನ್: ಆಂದೋಲನ, ಬಾಲ ಕಾರ್ಮಿಕ ವಿರೋಧಿ ದಿನಾಚರಣೆ, ಶಾಲಾಮಟ್ಟದ ಕ್ರೀಡಾಕೂಟ, ವಿಶ್ವಯೋಗ ದಿನಾಚರಣೆ, ಶಾಲಾ ಹಂತದಲ್ಲಿ ಪ್ರತಿಭಾಕಾರಂಜಿ, ಶಾಲಾ ಹಂತದ ನಾಟಕ ಹಾಗೂ ವಿಜ್ಞಾನ ವಸ್ತುಪ್ರದರ್ಶನ ನಡೆಸಲು ತಿಳಿಸಿದೆ.
ಜುಲೈ: ಹೋಬಳಿ ಮಟ್ಟದ ಕ್ರೀಡಾಕೂಟ, ಮೊದಲ ಹಂತದ ಋಣಾತ್ಮಕ ಮೌಲ್ಯಮಾಪನ, ತಾಲೂಕು ಮಟ್ಟದ ಕ್ರೀಡಾಕೂಟ, ತಾಲೂಕು ಹಂತದ ವಿಜ್ಞಾನ ನಾಟಕ ಮತ್ತು ವಸ್ತು ಪ್ರದರ್ಶನ.
ಆಗಸ್ಟ್: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಸ್ವಾತಂತ್ರ್ಯ ದಿನಾಚರಣೆ, ಜಿಲ್ಲಾಮಟ್ಟದ ಕ್ರೀಡಾಕೂಟ, ರಾಷ್ಟ್ರೀಯ ಕ್ರೀಡಾದಿನ.
ಸೆಪ್ಟೆಂಬರ್: ಶಿಕ್ಷಕರ ದಿನಾಚರಣೆ, ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ, ವಿದ್ಯಾರ್ಥಿಗಳ ಸಂಕಲನಾತ್ಮಕ ಮೌಲ್ಯಮಾಪನ.
ಅಕ್ಟೋಬರ್: ಗಾಂಧಿ ಜಯಂತಿ, ಸಮುದಾಯದತ್ತ ಶಾಲೆ, ವಿದ್ಯಾರ್ಥಿಗಳ ಸಂಕಲನಾತ್ಮಕ ಮೌಲ್ಯಮಾಪನ ನಡೆಯಲಿದೆ. ಅಕ್ಟೋಬರ್ 6ರಿಂದ ಆಕ್ಟೋಬರ್ 20ರವರೆಗೆ ಮಧ್ಯಂತರ ರಜೆ.
ನವೆಂಬರ್: ಕನ್ನಡ ರಾಜ್ಯೋತ್ಸವ, ರಾಜ್ಯಮಟ್ಟದ ಕ್ರೀಡಾಕೂಟ, ರಾಷ್ಟ್ರೀಯ ಕ್ರೀಡಾಕೂಟ, ಮಕ್ಕಳ ದಿನಾಚರಣೆ, ಕನಕದಾಸ ಜಯಂತಿ, ರಾಷ್ಟ್ರೀಯ ಭಾವೈಕ್ಯ ಸಪ್ತಾಹ, ಸಂವಿಧಾನ ದಿನಾಚರಣೆ.
ಡಿಸೆಂಬರ್: ವಿಶ್ವ ಏಡ್ಸ್ ದಿನಾಚರಣೆ, ವಿಶ್ವ ವಿಕಲಚೇತನರ ದಿನಾಚರಣೆ, ಮೂರನೇ ರೂಪಣಾತ್ಮಕ ಮೌಲ್ಯಮಾಪನ, ರಾಷ್ಟ್ರೀಯ ಗಣಿತ ದಿನ, ಅಣುಕು ಸಂಸತ್ ಸ್ಪರ್ಧೆ.
2020ರ ಜನವರಿ: ಸಾವಿತ್ರಿಭಾಯಿ ಪುಲೆ ದಿನಾಚರಣೆ, ಸ್ವಾಮಿ ವಿವೇಕಾನಂದ ಜಯಂತಿ, ರಾಷ್ಟ್ರೀಯ ಮತದಾರರ ದಿನಾಚರಣೆ, ಗಣರಾಜ್ಯ ದಿನಾಚರಣೆ, ಹುತಾತ್ಮರ ದಿನಾಚರಣೆ.
ಫೆಬ್ರವರಿ: ನಾಲ್ಕನೇ ರೂಪಣಾತ್ಮಕ ಮೌಲ್ಯಮಾಪನ, ರಾಷ್ಟ್ರೀಯ ವಿಜ್ಞಾನ ದಿನಾಚರಣೆ.
ಮಾರ್ಚ್: ವಿಶ್ವ ಮಹಿಳಾ ದಿನಾಚರಣೆ.
ಏಪ್ರಿಲ್: ಸಮಗ್ರ ಸಂಕಲನಾತ್ಮಕ ಮೌಲ್ಯಮಾಪನ, ವಿಶ್ವ ಆರೋಗ್ಯ ದಿನಾಚರಣೆ, ಎರಡನೇ ಸಮುದಾಯದತ್ತ ಶಾಲೆ, ಅಂಬೇಡ್ಕರ್ ಜಯಂತಿ ಹಾಗೂ ಏ.12ರಿಂದ ಮೇ 24ರವರೆಗೆ ಬೇಸಿಗೆ ರಜೆ.
ಯಾವ ದಿನಾಂಕದಂದು ಯಾವ ಕಾರ್ಯಕ್ರಮ ನಡೆಸಬೇಕು ಎಂಬಿತ್ಯಾದಿ ಎಲ್ಲ ಮಾಹಿತಿ ಇಲಾಖೆಯ ವೆಬ್ಸೈಟ್ http:chooleducation.kar.nic.in ನಲ್ಲಿ ಲಭ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು