ಡಿಸಿಎಂ ತವರಲ್ಲಿ ದೇವಾಲಯ ಪ್ರವೇಶಿಸಿದ ದಲಿತನಿಗೆ ದಂಡ
Team Udayavani, Jun 8, 2019, 3:00 AM IST
ಕೊರಟಗೆರೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರವಾದ ಕೊರಟಗೆರೆ ತಾಲೂಕಿನಲ್ಲಿ ದಲಿತನೊಬ್ಬ ದೇವಾಲಯ ಪ್ರವೇಶಿಸಿದ ಎಂದು ಪಂಚಾಯಿತಿ ಸೇರಿ ಆತನಿಗೆ ಗಾಮದಿಂದಲೇ ಬಹಿಷ್ಕಾರ ಹಾಕಲಾಗಿದೆ. ಜತೆಗೆ, 25 ಸಾವಿರ ರೂ.ದಂಡ ಹಾಕಿ, ದೇವಾಲಯ ಮೈಲಿಗೆ ಆಗಿದೆ ಎಂದು ಸುಣ್ಣ ಬಣ್ಣ ಮಾಡಿಸಿದ ಅಮಾನವೀಯ ಘಟನೆ ನಡೆದಿದೆ.
ತಾಲೂಕಿನ ಚನ್ನರಾಯನದುರ್ಗಾ ಹೋಬಳಿಯ ಮಲ್ಲೇಕಾವು ಗ್ರಾಮದ ದೊಡ್ಡಮ್ಮ ದೇವಿಯ ದೇವಾಲಯದಲ್ಲಿ ಮೇ 20ರಂದು ಜಾತ್ರೆ ನಡೆದಿತ್ತು. ಜಾತ್ರೆಯ ಒಂದು ವಾರದ ಬಳಿಕ ದೇವಾಲಯದಲ್ಲಿ ಮರುಪೂಜೆ ಏರ್ಪಡಿಸಿದ್ದು, ಅಂದು ದಲಿತ ಸಮುದಾಯಕ್ಕೆ ಸೇರಿದ, ಬೆಂಗಳೂರಿನಲ್ಲಿ ಆಟೋ ಚಾಲಕನಾಗಿರುವ ಮಲ್ಲೇಕಾವು ಜತೆ ಜಗದೀಶ್ ಎಂಬುವರು ಕುಟುಂಬ ಸಮೇತ ಪೂಜೆಗಾಗಿ ದೇವಾಲಯ ಪ್ರವೇಶಿಸಿದ್ದರು.
ಬಳಿಕ, ಗ್ರಾಮದ ಕೆಲ ಮುಖಂಡರು ಪಂಚಾಯಿತಿ ಸೇರಿ, ಜಗದೀಶನಿಗೆ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ದೇವಾಲಯ ಅಪವಿತ್ರವಾಗಿದ್ದು ಹೊಸದಾಗಿ ಸುಣ್ಣ, ಬಣ್ಣ ಬಳಿಸಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿಸುವಂತೆ ಸೂಚನೆ ನೀಡಿದ್ದಾರೆ. ಇದರ ಖರ್ಚಿಗಾಗಿ 25 ಸಾವಿರ ರೂ. ದಂಡ ಸಹ ಹಾಕಿದ್ದಾರೆ. ಈ ಬಗ್ಗೆ ಜಗದೀಶ್, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ