ದಿನಪೂರ್ತಿ ನಡೆಯದ ವಿಧಾನ ಪರಿಷತ್‌ ಕಲಾಪ


Team Udayavani, Jul 19, 2019, 5:14 AM IST

After-the-session-(2)

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ರಾಜೀನಾಮೆಗೆ ಆಗ್ರಹಿಸಿ ಮೇಲ್ಮನೆಯಲ್ಲಿ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದರಿಂದ ಗುರುವಾರ ಇಡೀ ದಿನದ ಕಲಾಪ ಬಲಿಯಾಗಿದೆ.

ಬೆಳಗ್ಗೆ 11.30ಕ್ಕೆ ದಿನದ ಕಲಾಪ ಆರಂಭಕ್ಕೂ ಮೊದಲೇ ಪ್ರತಿಪಕ್ಷದ ಸದಸ್ಯರಾದ ಅರುಣ್‌ ಶಹಾಪುರ, ನಾರಾಯಣಸ್ವಾಮಿ, ಆಯನೂರು ಮಂಜುನಾಥ, ಕೆ.ಪಿ.ನಂಜುಂಡಿ, ತೇಜಸ್ವಿನಿ ಗೌಡ, ಮಹಾಂತೇಶ್‌ ಕವಟಗಿಮಠ, ಎನ್‌.ರವಿಕುಮಾರ್‌, ಎಂ.ಕೆ.ಪ್ರಾಣೇಶ್‌ ಮೊದಲಾದರು ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸದನದ ಬಾವಿಗಿಳಿದು ಪ್ರತಿಭಟನೆ ಆರಂಭಿಸಿದ್ದರು.

ಸರ್ಕಾರದಲ್ಲಿ ಬಹುತಮ ಇಲ್ಲದೇ ಇದ್ದರೂ, ಸಿಎಂ ರಾಜೀ ನಾಮೆ ನೀಡುತ್ತಿಲ್ಲ. ವರ್ಗಾವಣೆ ದಂಧೆ ಯಲ್ಲಿ ಸರ್ಕಾರ ನಿರತವಾ ಗಿದೆ. ಮುಖ್ಯಮಂತ್ರಿಗಳು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು. ಕೆಲ ಕಾಲ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಧ್ಯಪ್ರವೇಶಿಸಿದ ಸಭಾಪತಿ ಪ್ರತಾಪ್‌ ಚಂದ್ರಶೆಟ್ಟಿ, ವಿಧಾನಸಭೆಯಲ್ಲಿ ಸಚಿವರು ಹಾಜರಾತಿ ಇರಬೇಕಾದ್ದರಿಂದ ಸದನವನ್ನು ಮಧ್ಯಾಹ್ನ 3.30ಕ್ಕೆ ಮುಂದೂಡಿದರು.

3.30ಕ್ಕೆ ಆರಂಭವಾಗಬೇಕಿದ್ದ ಸದನ 3.45ಕ್ಕೆ ಆರಂಭವಾಯಿತು. ಆಗಲೂ ಬಿಜೆಪಿ ಸದಸ್ಯರು ಪ್ರತಿಭಟನೆ ಮುಂದುವರಿಸಿದರು. ಭಾರತ್‌ ಮಾತಾಕೀ ಜೈ, ಒಂದೇ ಮಾತರಂ ಘೋಷಣೆಗಳನ್ನು ಕೂಗುತ್ತಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಭಿತ್ತಿಪತ್ರ ಪ್ರದರ್ಶಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವಾಗಲೇ, ಸದಸ್ಯ ಐವನ್‌ ಡಿಸೋಜಾ ಮಾತನಾಡಿ, ನೀರಿಲ್ಲದ ಬಾವಿಯಿಂದ ಮೇಲೆ ಬನ್ನಿ, ಕಾಂಗ್ರೆಸ್‌ ಶಾಸಕರನ್ನು ಅಪಹರಣ ಮಾಡಿರುವ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು ಎಂದು ಹೇಳಿದರು.

ಸರ್ಕಾರದಲ್ಲಿ ಬಹುಮತ ಇಲ್ಲದೇ ಇದ್ದರೂ, ಅಧಿಕಾರಕ್ಕೆ ಅಂಟಿಕೊಂಡು ಕೂತಿರುವ ಮೂಲಕ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಸುಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ದೂರಿದರು.

ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದೆ. ಇಲ್ಲಿಯೂ ಕಲಾಪ ನಡೆಯಲು ಅವಕಾಶ ಮಾಡಿಕೊಡಬೇಕು. ಕಳೆದ ಮೂರು ದಿನದಿಂದ ಪ್ರತಿಪಕ್ಷದ ಸದಸ್ಯರ ಪ್ರತಿಭಟನೆಯಿಂದ ಕಲಾಪ ಸರಿಯಾಗಿ ನಡೆದಿಲ್ಲ. ಇಂತಹ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ಸಭಾ ನಾಯಕಿ ಹಾಗೂ ಸಚಿವೆ ಡಾ.ಜಯಮಾಲಾ ಆಗ್ರಹಿಸಿದರು.

ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ಪರವಿರೋಧ ವಾಗ್ವಾದ ಹೆಚ್ಚಾಗುತ್ತಿದ್ದಂತೆ ಕಲಾಪದಲ್ಲಿ ಗದ್ದಲ ಏರ್ಪಟ್ಟಿದ್ದರಿಂದ ಸಭಾಪತಿಯವರು ಸದನವನ್ನು ಸಂಜೆ 5.30ರವರೆಗೆ ಮುಂದೂಡಿದರು. 6 ಗಂಟೆಗೆ ಸದನದ ಕಲಾಪ ಪುನರ್‌ ಆರಂಭವಾಗುತ್ತಿದ್ದಂತೆ ಬಾವಿಗೆ ಇಳಿದು ಪ್ರತಿಪಕ್ಷದ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದರಿಂದ ಸಭಾಪತಿಯವರು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕಲಾಪ ಮುಂದೂಡಿದರು.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.