“ವಾಲ್ಮೀಕಿ ಮೀಸಲು ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಗಡುವು’
Team Udayavani, Feb 23, 2020, 3:02 AM IST
ಕೊಪ್ಪಳ: ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಯಕ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧವೇ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದೇನೆ.
ಸರ್ಕಾರ ಸಮಿತಿ ರಚನೆ ಮಾಡಿ ವರದಿ ಕೇಳುತ್ತಿದೆ. ಸಮಿತಿ ವರದಿ ನೀಡಬೇಕಿದೆ. ಸರ್ಕಾರಕ್ಕೆ ನಾವು ಗಡುವು ನೀಡಿದ್ದು, ಒಂದು ವೇಳೆ ಮೀಸಲಾತಿ ಹೆಚ್ಚಳ ಮಾಡದಿದ್ದರೆ ಮತ್ತೆ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.
ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಇಲಾಖೆ ನೀಡಿದ್ದಾರೆ. ಅವರಿಗೆ ಆ ಖಾತೆ ನಿಭಾಯಿಸುವುದು ಕಷ್ಟ ಅನ್ನಿಸಬಹುದು. ಇಲ್ಲಿ ಭಾಷೆ ಸಮಸ್ಯೆಯಿದೆ. ಕಾನೂನಾತ್ಮಕ ಸಮಸ್ಯೆ ಇರುತ್ತದೆ. ಅದೆಲ್ಲವನ್ನು ನಿಭಾಯಿಸುವುದು ಅವರಿಗೆ ಕಷ್ಟವಾಗಬಹುದು. ರಮೇಶ ರಾಜಕಿಹೊಳಿಯವರು ರಾಜೀನಾಮೆ ನೀಡುವ ಮಾತನ್ನಾಡಿ ಬ್ಲಾಕ್ವೆುಲ್ ಮಾಡುತ್ತಿದ್ದಾರೆ. ಈ ರೀತಿ ಬ್ಲಾಕ್ವೆುಲ್ ಮಾಡುವುದು ಸರಿಯಲ್ಲ.
-ಸತೀಶ ಜಾರಕಿಹೊಳಿ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ