ರಕ್ಷಣಾ ಸಚಿವರಿಗೆ ಮಳೆ ದುರಂತ ವಿವರಿಸಿದ್ದ ಬಾಲಕ ದಾರುಣ ಸಾವು
Team Udayavani, May 19, 2019, 3:00 AM IST
ಮಡಿಕೇರಿ: ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಕುತ್ತಿಗೆಗೆ ವೇಲ್ ಸುತ್ತಿಕೊಂಡ ಪರಿಣಾಮ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಡಿಕೇರಿ ಹೊರವಲಯದ ಗ್ರಾಮದಲ್ಲಿ ನಡೆದಿದೆ. ಪ್ರಕೃತಿ ವಿಕೋಪ ಸಂದರ್ಭ ಮನೆಯನ್ನು ಕಳೆದುಕೊಂಡಿದ್ದ ಬಾಲಕ, ಸಂತ್ರಸ್ತನಾಗಿ ಕುಟುಂಬದೊಂದಿಗೆ ಮಡಿಕೇರಿಯ ಪೊಲೀಸ್ ಸಮುದಾಯ ಭವನದಲ್ಲಿ ಆಶ್ರಯ ಪಡೆದಿದ್ದ.
ಈ ಸಂದರ್ಭ ಮೈತ್ರಿ ಸಮುದಾಯ ಭವನಕ್ಕೆ ಆಗಮಿಸಿದ್ದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ತನ್ನ ಗ್ರಾಮದಲ್ಲಿ ಸಂಭವಿಸಿದ್ದ ಪ್ರಕೃತಿ ವಿಕೋಪದ ನೈಜ್ಯ ಘಟನೆಗಳನ್ನು ಚಿತ್ರ ರೂಪದಲ್ಲಿ ಬಿಡಿಸಿ, ಅದನ್ನು ಸಚಿವರಿಗೆ ವಿವರಿಸುವ ಮೂಲಕ ಪ್ರಕೃತಿ ವಿಕೋಪದ ಕರಾಳತೆಯನ್ನು ಮನವರಿಕೆ ಮಾಡುವಲ್ಲಿ ಸಫಲನಾಗಿದ್ದ.
ಮಡಿಕೇರಿ ಹೊರವಲಯದ ಗ್ರಾಮದಲ್ಲಿದ್ದ 8 ವರ್ಷದ ಬಾಲಕ ಮನೆಯಲ್ಲಿ ಒಬ್ಬೊಂಟಿಯಾಗಿ ಮನೆಯ ಮೇಲ್ಚಾವಣಿಗೆ ವೇಲ್ ಕಟ್ಟಿಕೊಂಡು ಆಟವಾಡುತ್ತಿದ್ದ. ಈ ಸಂದರ್ಭ ವೇಲ್ ಬಾಲಕನ ಕುತ್ತಿಗೆಗೆ ಬಿಗಿದುಕೊಂಡಿದ್ದು, ಅದನ್ನು ಬಿಡಿಸಿಕೊಳ್ಳಲಾಗದೆ ಬಾಲಕ ಸ್ಥಳದಲ್ಲೇ ಒದ್ದಾಡಿದ್ದಾನೆ.
ಮಧ್ಯಾಹ್ನ ವೇಳೆಗೆ ಬಾಲಕನ ತಂದೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಮಗನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ಹೊತ್ತಿಗಾಗಲೇ ಬಾಲಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು