ಮುರುಘಾಮಠದ ಶಿವಯೋಗಿ ಶ್ರೀ ಲಿಂಗೈಕ್ಯ


Team Udayavani, Jan 16, 2020, 3:05 AM IST

muruga-math

ಧಾರವಾಡ: ಇಲ್ಲಿನ ಮುರುಘಾಮಠದ ಹಿಂದಿನ ಪೀಠಾಧಿಪತಿಗಳಾ ಗಿದ್ದ ಶ್ರೀ ಶಿವಯೋಗಿ ಸ್ವಾಮೀಜಿ (55) ಬುಧವಾರ ಲಿಂಗೈಕ್ಯರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಅವರು ಬುಧವಾರ ಸಂಜೆ ಲಿಂಗೈಕ್ಯರಾದರು.

ಮುರುಘಾಮಠದ ಪೀಠಾಧಿಪತಿ ಯಾಗಿದ್ದ ವೇಳೆ ಅವರ ವಿರುದ್ಧ ಮಠದ ಆಸ್ತಿ ಮಾರಾಟಕ್ಕೆ ಸಂಚು ರೂಪಿಸಿದ ಆರೋಪವಿತ್ತು. ನಂತರ ಭಕ್ತರು ಅವರನ್ನು ಮಠದ ಪೀಠದಿಂದ ಕೆಳಗಿಳಿಸಿದ್ದರು. ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದು, ಪ್ರಕರಣ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ವಿವಾದಕ್ಕೆ ಸಂಬಂಧಿಸಿದಂತೆ ಅವರು, ಇತ್ತೀಚೆಗಷ್ಟೇ ಮತ್ತೆ ತಮ್ಮ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಕೆಲವರ ಹೆಸರು ಹೇಳಿ ಆರೋಪಿಸಿ, ದಯಾಮರಣ ನೀಡುವಂತೆ ಕೂಡ ಕೋರ್ಟ್‌ಗೆ ಮನವಿ ಮಾಡಿದ್ದರು.

ಮೂಲತಃ ಕುಂದಗೋಳ ತಾಲೂಕು ಪಶುಪತಿಹಾಳದವರಾಗಿದ್ದ ಶಿವಯೋಗಿ ಸ್ವಾಮೀಜಿಗಳು ಪ್ರಾಥಮಿಕ ಶಿಕ್ಷಣ ಅಲ್ಲಿಯೇ ಮುಗಿಸಿ ಬಳಿಕ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಧಾರವಾಡಕ್ಕೆ ಬಂದು ಮುರುಘಾಮಠದಲ್ಲಿಯೇ ಉಳಿದುಕೊಂಡು ಪೂರ್ಣಗೊಳಿಸಿದ್ದರು. ಶ್ರೀ ಶಿವಯೋಗಿ ಸ್ವಾಮೀಜಿ ಅವರನ್ನು 1994ರಲ್ಲಿ ಮಠದ ಪೀಠಾಧಿಪತಿಯನ್ನಾಗಿ ನೇಮಿಸಲಾಗಿತ್ತು. ಆದರೆ ಮಠದ ಆಸ್ತಿ ಮಾರಾಟಕ್ಕೆ ಕುರಿತು ಶ್ರೀಗಳು ಮತ್ತು ಭಕ್ತರ ನಡುವೆ ವಿವಾದ ಸೃಷ್ಟಿಯಾಗಿ 2009ರಲ್ಲಿ ಬಲವಂತವಾಗಿ ಪೀಠದಿಂದ ಕೆಳಗಿಳಿಸಲಾಗಿತ್ತು. ಈ ನಡುವೆ ಮಠ ಮತ್ತು ಶ್ರಿಗಳ ನಡುವೆ ರಾಜಿ ಸಂಧಾನ ನಡೆದಿತ್ತು. ಅಷ್ಟರಲ್ಲಿ ಅವರು ಲಿಂಗೈಕ್ಯರಾಗಿದ್ದಾರೆ.

ಕಂಬನಿ ಮಿಡಿದ ಗಣ್ಯರು: ಶ್ರೀ ಶಿವಯೋಗಿ ಸ್ವಾಮೀಜಿ ಲಿಂಗ್ಯಕ್ಯರಾಗಿರುವುದಕ್ಕೆ ಲಿಂಗಾಯತ ಸಮಾಜದ ಗಣ್ಯರು ತೀವ್ರ ಸಂತಾಪ ಸೂಚಿಸಿ ನೆಚ್ಚಿನ ಗುರುವಿಗೆ ಕಂಬನಿ ಮಿಡಿದಿದ್ದಾರೆ. ಅಖೀಲ ಭಾರತ ವೀರಶೈವ ಮಹಾಸಭೆ ಪದಾಧಿಕಾರಿಗಳು, ಲಿಂಗಾಯತ ನೌಕರರ ಸಂಘ ಮತ್ತು ಭಕ್ತ ಮಂಡಳಿ ಶಿವಯೋಗಿ ಶ್ರೀಗಳು ಲಿಂಗೈಕ್ಯರಾಗಿದ್ದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿವಯೋಗಿ ಸ್ವಾಮೀಜಿ ಉತ್ತಮ ವ್ಯಕ್ತಿಯಾಗಿ ದ್ದರು. ಆದರೆ ದುರ್ದೈವವಶಾತ್‌ ಅವರ ಮೇಲೆ ವಿವಾದಗಳು ಬಂದಿದ್ದರಿಂದ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದರು. ಅವರ ಅಗಲಿಕೆ ಮಠದ ಭಕ್ತರಿಗೆ ನೋವನ್ನುಂಟು ಮಾಡಿದೆ. ಬಸವಾದಿ ಶರಣರು ಅವರ ಆತ್ಮಕ್ಕೆ ಶಾಂತಿ ನೀಡಲಿ.
-ಗುರುರಾಜ ಹುಣಸಿಮರದ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ,

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.