ಮೀನು ಹಿಡಿಯಲು ಹೋದ ಮೂವರು ನೀರುಪಾಲು
Team Udayavani, Jul 22, 2019, 3:00 AM IST
ಸೊರಬ/ಚಂದ್ರಗುತ್ತಿ: ಮೀನು ಹಿಡಿಯಲು ಹೋಗಿದ್ದ ಮೂವರು ಯುವಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆ ಎಂಬಲ್ಲಿ ಭಾನುವಾರ ನಡೆದಿದೆ. ಜೋಳದಗುಡ್ಡೆ ಗ್ರಾಮದ ಸೊರಬ ಪಪೂ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳಾದ ಕಾರ್ತಿಕ್ (16), ಶರತ್ (17) ಹಾಗೂ ಗಾರೆ ಕೆಲಸ ಮಾಡುವ ಪ್ರದೀಪ್ (19) ಮೃತಪಟ್ಟವರು.
ಈ ಮೂವರು ಭಾನುವಾರ ಬೆಳಗ್ಗೆ ಸ್ನೇಹಿತರೊಂದಿಗೆ ಜೋಳದಗುಡ್ಡೆಯ ಹೊಸಮಠ ಕೆರೆಗೆ ಮೀನು ಹಿಡಿಯಲು ತೆರಳಿದ್ದರು. ಮೀನುಗಳನ್ನು ಹಿಡಿಯಲು ಕೆರೆಗಿಳಿದ ಮೂವರು ನೀರಿನ ಸುಳಿಗೆ ಸಿಲುಕಿದ್ದಾರೆ. ಈಜು ಬಾರದ್ದರಿಂದ ದಡಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ.
ಇವರ ಜತೆಯಲ್ಲಿ ಹೋಗಿದ್ದ ಅಭಿಷೇಕ್ ಎಂಬಾತ ಕೆರೆಗಿಳಿಯದೆ ದಡದಲ್ಲಿಯೇ ನಿಂತಿದ್ದ. ಮೂವರು ಮುಳುಗುತ್ತಿರುವುದನ್ನು ಕಂಡು ಈತ ಕೂಗಿದ್ದಾನೆ. ಬೊಬ್ಬೆ ಕೇಳಿದ ಅಲ್ಲೇ ಸಮೀಪದಲ್ಲಿರುವ ಜನರು ಕೆರೆಗೆ ಧುಮುಕಿ ಯುವಕರನ್ನು ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್