ಚಿತ್ರಮಂದಿರ ವಿಚಾರ : ಯಾರನ್ನೋ ಮೆಚ್ಚಿಸಲು ತೀರ್ಮಾನ ಬದಲಿಸಲಾಗದು : ಸುಧಾಕರ್
Team Udayavani, Apr 4, 2021, 12:14 PM IST
ಬೆಂಗಳೂರು : ಯಾರನ್ನೋ ಮೆಚ್ಚಿಸುವ ಸಲುವಾಗಿ ತೀರ್ಮಾನ ಬದಲಿಸಲು ಸಾಧ್ಯವಿಲ್ಲ, ನಮಗೆ ರಾಜ್ಯದ ಜನರ ಆರೋಗ್ಯ ಮುಖ್ಯ, ಕೆಲವರು ನನ್ನನ್ನ ಟೀಕೆ ಮಾಡ್ತಿದ್ದಾರೆ ಅದರ ಬಗ್ಗೆ ಬೇಜಾರಿಲ್ಲ. ರಾಜ್ಯದ ಜನರ ಆರೋಗ್ಯ ಕಾಪಾಡೋಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಚಿತ್ರರಂಗಕ್ಕೆ ಮೂರು ದಿನ ಪೂರ್ಣ ರಿಯಾಯಿತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸುಧಾಕರ್, ಕೆಲವರಿಗೆ ರಿಯಾಯಿತಿ ಕೊಟ್ಟಿದ್ದಾರೆ. ಅದರ ಬಗ್ಗೆ ಹೆಚ್ಚು ಮಾತನಾಡೋದಿಲ್ಲ. ಜನರ ಜೀವನ, ಜೀವನೋಪಾಯ ಎರಡೂ ಮುಖ್ಯ. ಸಿಎಂ ಯಡಿಯೂರಪ್ಪ ಅವ್ರಿಗೂ ಒತ್ತಡ ಬಂದಿದೆ. ಎಲ್ಲರ ಜೊತೆ ಸಮಾಲೋಚಿಸಿ ಸರಿದೂಗಿಸಬೇಕಾಗುತ್ತೆ ಹಾಗಾಗಿಯೇ ಸಿಎಂ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ ಎಂದರು.
ಶಿಕ್ಷಣ ಸಂಸ್ಥೆಗಳು, ಚಿತ್ರರಂಗದ ಅಭಿಮಾನಿಗಳು ಹಾಗೂ ಜಿಮ್ ಮಾಲೀಕರಿಂದಲೂ ಒತ್ತಡ ಬಂದಿದೆ ನನಗೂ ಒತ್ತಡ ಬಂದಿದೆ ಹಾಗಂತ ಎಲ್ಲರಿಗೂ ರಿಯಾಯಿತಿ ಕೊಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಸಚಿವರು, ಇಲಾಖಾ ಕಾರ್ಯದರ್ಶಿ ಜೊತೆ ಚರ್ಚೆ ನಡೆಸಿದ್ದೇನೆ ಈಗಿರುವ 8 ಲಕ್ಷ ಡೋಸ್ ಇನ್ನು ಮೂರು ದಿನಕ್ಕೆ ಮುಗಿಯುತ್ತದೆ ಈಗಾಗಲೇ 25 ಲಕ್ಷ ಡೋಸ್ ಗೆ ಬೇಡಿಕೆ ಇಟ್ಟಿದ್ದೇನೆ ಎಂದರು.
ಎರಡು ಕಂತುಗಳಲ್ಲಿ ಡೋಸ್ ಪೂರೈಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ. ಎರಡು ದಿನಗಳಲ್ಲಿ ಮೊದಲ ಕಂತು ನಂತರ ಉಳಿದದ್ದು ಕಳುಹಿಸುವ ಭರವಸೆ ಸಿಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?