ಭೌತಿಕ ತರಗತಿ ನಡೆಸದಿರಲು ಕೆಲವು ಖಾಸಗಿ ಶಾಲೆಗಳ ನಿರ್ಧಾರ


Team Udayavani, Aug 23, 2021, 6:38 AM IST

ಭೌತಿಕ ತರಗತಿ ನಡೆಸದಿರಲು ಕೆಲವು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ರಾಜ್ಯ ಸರಕಾರ ಹಾಗೂ ಶಿಕ್ಷಣ ಇಲಾಖೆಯು ಪ್ರೌಢಶಾಲೆಯಿಂದ ಪಿಯು ತರಗತಿವರೆಗೂ ಸೋಮವಾರದಿಂದಲೇ ಭೌತಿಕ ತರಗತಿ ಆರಂಭಿಸಲು ತೀರ್ಮಾನಿಸಿದ್ದರೂ, ಕೆಲವು  ಖಾಸಗಿ ಶಾಲೆಗಳು ಆನ್‌ಲೈನ್‌ ತರಗತಿಗಳನ್ನೇ ಮುಂದುವರಿಸಲು ನಿರ್ಧರಿಸಿವೆ.

ಎಲ್ಲರಿಗೂ ಭೌತಿಕ ತರಗತಿ ನಡೆಸಲು ಅನುಮತಿ ಸಿಗುವ ವರೆಗೆ ಆನ್‌ಲೈನ್‌ ತರಗತಿಗಳನ್ನೇ  ಮುಂದುವರಿಸಲು  ಕೆಲವು ಖಾಸಗಿ ಶಾಲಾಡಳಿತ ಮಂಡಳಿ ತೀರ್ಮಾನಿಸಿವೆ. ಮತ್ತೆ ಕೆಲವು ಶಾಲೆಗಳು ವಿದ್ಯಾರ್ಥಿಗಳ  ಪೋಷಕರ ಆಶಯದಂತೆ ಭೌತಿಕ ತರಗತಿ ಅಥವಾ ಆನ್‌ಲೈನ್‌ ತರಗತಿ ನಡೆಸಲು ಮುಂದಾಗಿವೆ.

ಸರಕಾರ  ಭೌತಿಕ ತರಗತಿಗಳನ್ನು ಕಡ್ಡಾಯ ಮಾಡಿಲ್ಲ.   ಆನ್‌ಲೈನ್‌ ಮತ್ತು ಭೌತಿಕ ತರಗತಿಗಳನ್ನು ಏಕಕಾಲದಲ್ಲಿ ನಡೆಸುವುದು ಕಷ್ಟವಾದ್ದರಿಂದ  ಪೋಷಕರ ಆಶಯದಂತೆ ಆನ್‌ಲೈನ್‌ ಅಥವಾ ಭೌತಿಕ ತರಗತಿ ನಡೆಸಲಿವೆ ಎಂದು ಖಾಸಗಿ ಶಾಲಾಡಳಿತ ಮಂಡಳಿಯ ಸದಸ್ಯರೊಬ್ಬರು ಮಾಹಿತಿ ನೀಡಿದರು.

ಗ್ರಾಮೀಣ ಭಾಗದಲ್ಲಿ ಭೌತಿಕ ತರಗತಿ :

ಸಿಬಿಎಸ್‌ಇ, ಐಸಿಎಸ್‌ಇ  ಸಹಿತ ಬಹುತೇಕ ಎಲ್ಲ ಖಾಸಗಿ ಶಾಲಾಡಳಿತ ಮಂಡಳಿಗಳು ಗ್ರಾಮೀಣ ಭಾಗದ ಪ್ರೌಢಶಾಲೆಗೆ ಭೌತಿಕ ತರಗತಿಗಳನ್ನು ಸೋಮವಾರದಿಂದ ನಡೆಸಲಿವೆ. ಆದರೆ, ನಗರದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗೆ ಒಗ್ಗಿಕೊಂಡಿರುವುದರಿಂದ ಆನ್‌ಲೈನ್‌ ತರಗತಿಯಲ್ಲೇ ಮುಂದು ವರಿಯಲಿದ್ದಾರೆ.  ಅನೇಕ  ಪೋಷಕರು ಕೂಡ ನಗರ ಪ್ರದೇಶಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ ಎಂದು ಖಾಸಗಿ ಶಾಲಾಡಳಿತ ಮಂಡಳಿ ಸದಸ್ಯರೋರ್ವರು ತಿಳಿಸಿದರು.

ಏಕಕಾಲದಲ್ಲಿ ಆನ್‌ಲೈನ್‌ ಮತ್ತು ಭೌತಿಕ ತರಗತಿಗಳನ್ನು ನಡೆಸುವುದು ಕಷ್ಟ. ಹೀಗಾಗಿ ಶಾಲೆಗಳೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿವೆ. ಸಂಘಟನೆಯಿಂದ ಯಾವುದೇ ಸೂಚನೆ ನೀಡಿಲ್ಲ ಎಂದು ಸಿಬಿಎಸ್‌ಇ ಶಾಲಾಡಳಿತ ಮಂಡಳಿಗಳ ಸಂಘದ ರಾಜ್ಯಾಧ್ಯಕ್ಷ ಎಂ. ಶ್ರೀನಿವಾಸನ್‌ ಹೇಳಿದ್ದಾರೆ.

ಸಂವೇದ ತರಗತಿ ಯಥಾಸ್ಥಿತಿ :

ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ  ಭೌತಿಕ ತರಗತಿ ಆರಂಭವಾಗಿದ್ದರೂ,  ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವೇದ ತರಗತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸ್ಪಷ್ಟಪಡಿಸಿದೆ.

ಭೌತಿಕ ತರಗತಿಗಳಿಗಾಗಿ ಪ್ರತ್ಯೇಕ ಗುಂಪುಗಳನ್ನು ಶಾಲಾ ಹಂತದಲ್ಲಿ ರಚನೆ ಮಾಡಲಾಗಿದೆ. ಸೋಮವಾರ, ಮಂಗಳವಾರ ಹಾಗೂ ಬುಧವಾರ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಗುರುವಾರ, ಶುಕ್ರವಾರ ಹಾಗೂ ಶನಿವಾರ ಆನ್‌ಲೈನ್‌ ತರಗತಿ ಇರುತ್ತದೆ. ಹಾಗೆಯೇ ಸೋಮವಾರದಿಂದ ಬುಧವಾರ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳುವವರಿಗೆ ಗುರುವಾರದಿಂದ ಶನಿವಾರದ ವರೆಗೆ ಭೌತಿಕ ತರಗತಿ ಇರುತ್ತದೆ. ಆನ್‌ಲೈನ್‌ ತರಗತಿಯವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸಂವೇದ ತರಗತಿ ಮುಂದುವರಿ ಯಲಿದೆ. ವೇಳಾಪಟ್ಟಿಯಲ್ಲೂ ಬದಲಾವಣೆ ಇಲ್ಲ.  ಸಂವೇದ ತರಗತಿಗಳ ಪಾಠವನ್ನು ಯೂ-ಟ್ಯೂಬ್‌ ಚಾನೆಲ್‌ಗ‌ಳಲ್ಲೂ ಅಪ್‌ಲೋಡ್‌ ಮಾಡಲಿದ್ದೇವೆ ಎಂದು  ಡಿಇಎಸ್‌ಇಆರ್‌ಟಿ ನಿರ್ದೇಶಕ ಎಂ. ಆರ್‌. ಮಾರುತಿ ತಿಳಿಸಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.