ಸೋಲಿನ ಹೊಣೆ ಹೊತ್ತು ರಾಜೀನಾಮೆಗೆ ನಿರ್ಧಾರ
Team Udayavani, May 24, 2019, 3:25 AM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಜೆಡಿಎಸ್ ಸೋಲಿಗೆ ನಾನೇ ನೈತಿಕ ಹೊಣೆ ಹೊರುತ್ತೇನೆ. ಹೀಗಾಗಿ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಮೊದಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಲೋಕಸಭೆ ಚುನಾವಣೆವರೆಗೂ ಮುಂದುವರಿಯಲು ಹೇಳಿದ್ದರು. ಹೀಗಾಗಿ, ಮುಂದುವರಿದಿದ್ದೆ. ಇದೀಗ ಅಧ್ಯಕ್ಷ ಸ್ಥಾನದಿಂದ ಮುಕ್ತಿ ಕೊಡಿಸುವಂತೆ ಕೋರಲಿದ್ದೇನೆ ಎಂದು ತಿಳಿಸಿದರು.
ಮಂಡ್ಯದಲ್ಲಿ ಮೂವರು ಸಚಿವರು, ಎಂಟು ಶಾಸಕರು, ಮೂವರು ಪರಿಷತ್ ಸದಸ್ಯರು ಇದ್ದರೂ ಮತ ಬಂದಿಲ್ಲವಲ್ಲ ಎಂಬ ಪ್ರಶ್ನೆಗೆ, ಮತ ಹಾಕುವವರು ಮತದಾರರಲ್ಲವೇ ಎಂದು ಉತ್ತರಿಸಿದರು. ದೇವೇಗೌಡರು ಸೋಲು ಅನುಭವಿಸಿರುವ ಕುರಿತು ಪ್ರತಿಕ್ರಿಯಿಸಿ, ಇಂದಿರಾಗಾಂಧಿ ಸಮೇತ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಇದೇನು ಕೊನೆಯ ಚುನಾವಣೆಯಲ್ಲ.
ಚುನಾವಣೆಯಲ್ಲಿ ಸೋಲು-ಗೆಲುವು ಇದ್ದದ್ದೇ. ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದು ಸಮರ್ಥಿಸಿಕೊಂಡರು. ಮೈಸೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಗೆಲುವಿಗೆ ನಾವು ಶ್ರಮ ಹಾಕಿದ್ದೆವು. ಆದರೆ, ಮತದಾರರು ನಮ್ಮ ಪರ ಒಲವು ತೋರಲಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ