ಇನ್ನೂ ಈಡೇರದ ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆ
ಧೂಳು ಹಿಡಿದಿರುವ ಗೌರವ ಧನ ಹೆಚ್ಚಳದ ಪ್ರಸ್ತಾವ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ
Team Udayavani, Sep 18, 2022, 7:00 AM IST
ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳದ ಬೇಡಿಕೆಗೆ ವರ್ಷ ಕಳೆದರೂ “ಪರಿಶೀಲನೆ ಹಂತ’ದಿಂದ ಮುಕ್ತಿ ಸಿಕ್ಕಿಲ್ಲ.
ಗೌರವಧನ ಪರಿಷ್ಕರಣೆಯ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ಕಳೆದ ವರ್ಷ ಸರಕಾರ ಸದನದಲ್ಲಿ ಹೇಳಿತ್ತು. ಈಗ ಮತ್ತೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಈ ಬಾರಿಯಾದರೂ ಈಡೇರೀತೇ ಎಂಬುದು ಸುಮಾರು 99 ಸಾವಿರ ಗ್ರಾ. ಪಂ. ಪ್ರತಿನಿಧಿಗಳ ನಿರೀಕ್ಷೆ.
ಗ್ರಾ.ಪಂ. ಸದಸ್ಯರ ಗೌರವಧನ 2017ರಲ್ಲಿ ಪರಿಷ್ಕರಿಸಿದ್ದು, ಅಧ್ಯಕ್ಷರಿಗೆ 1,000 ರೂ. ಗಳಿಂದ 3,000 ರೂ. ಗಳಿಗೂ, ಉಪಾಧ್ಯಕ್ಷರಿಗೆ ನೀಡುತ್ತಿದ್ದ 600 ರೂ.ಗಳನ್ನು 2,000 ರೂ. ಗಳಿಗೂ ಹಾಗೂ ಸದಸ್ಯರಿಗೆ ನೀಡುತ್ತಿದ್ದ 500 ರೂ. ಗಳನ್ನು 1,000 ರೂ. ಗಳಿಗೆ ಏರಿಸಲಾಗಿತ್ತು. ಈಗ ಮತ್ತೆ ಗೌರವಧನ ಪರಿಷ್ಕರಿಸುವಂತೆ ಗ್ರಾ.ಪಂ. ಸದಸ್ಯರು, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ 25 ಮಂದಿ ವಿಧಾನಪರಿಷತ್ ಸದಸ್ಯರು ಒತ್ತಾಯಿಸುತ್ತಿದ್ದು, ಪ್ರಸ್ತಾವ ಇನ್ನೂ ಪರಿಶೀಲನೆಯಲ್ಲಿದೆ. ಪಂಚಾಯತ್ಗಳಲ್ಲಿ ಪ್ರತಿ ಶೇ. 80ಕ್ಕೂ ಹೆಚ್ಚು ಮಂದಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರು. ಅವರ ಜೀವನ ನಿರ್ವಹಣೆಗೂ ಗೌರವಧನ ಪರಿಷ್ಕರಣೆ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಕೇರಳ ಮಾದರಿ ಬರಲಿ
ಕೇರಳದಲ್ಲಿ ಅಧ್ಯಕ್ಷರಿಗೆ 13,200 ರೂ, ಉಪಾಧ್ಯಕ್ಷರಿಗೆ 10,600 ರೂ., ಸದಸ್ಯರಿಗೆ 7,000 ರೂ. ಗಳಿವೆ. ಈ ಸಂಬಂಧ ಕರ್ನಾಟಕ ರಾಜ್ಯ ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟ ಈ ವರ್ಷದ ಆರಂಭದಲ್ಲೇ ಕೇರಳ ಮಾದರಿ ಜಾರಿಗಾಗಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ