ಮೋದಿ ಆಡಳಿತದಲ್ಲಿ ಕರ್ನಾಟಕದ ಅಭಿವೃದ್ಧಿಗೂ ಸಾಕಷ್ಟು ನೆರವು ದೊರೆತಿದೆ: ಯಡಿಯೂರಪ್ಪ
Team Udayavani, Jun 1, 2020, 3:11 PM IST
ಬೆಂಗಳೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿ ಆಗಬೇಕು ಎಂಬುದು ದೇಶದ ಶೇ.70 ರಷ್ಟು ಜನರ ಅಪೇಕ್ಷೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರು ಮೊದಲ ಐದು ವರ್ಷ ಉತ್ತಮ ಆಡಳಿತ ನೀಡಿದ ಕಾರಣ ಎರಡನೇ ಅವಧಿಯಲ್ಲಿ ಅವರ ಅಲೆಯಲ್ಲಿ ರಾಜ್ಯದಲ್ಲಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಲ ಅವರಂತಹ ಸೋಲಿಲ್ಲದ ಸರದಾರರು ಸೋಲು ಅನುಭವಿಸಿದರು. ದೇಶದ ಸಮಗ್ರ ಅಭಿವೃದ್ಧಿಗೆ ಮೋದಿ ಅವರು ಕೈಗೊಂಡ ಕ್ರಮಗಳು ವಿಶ್ವದ ಮೆಚ್ಚುಗೆ ಪಡೆದಿದೆ ಎಂದರು.
ನರೇಂದ್ರ ಮೋದಿ ಅವರ ಆರು ವರ್ಷದ ಆಡಳಿತದಲ್ಲಿ ಕರ್ನಾಟಕದ ಅಭಿವೃದ್ಧಿಗೂ ಸಾಕಷ್ಟು ನೆರವು ದೊರೆತಿದೆ. ಕೇಂದ್ರ ಪುರಸ್ಕೃತ ಯೋಜನೆಗಳ ಮೂಲಕವೂ ರಾಜ್ಯಕ್ಕೆ ಸಿಂಹಪಾಲು ದೊರೆತಿದೆ ಎಂದು ಯಡಿಯೂರಪ್ಪ ಹೇಳಿದರು.
ಬಿಜೆಪಿಯಲ್ಲಿ ಅತೃಪ್ತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ನನ್ನ ಮೊದಲ ಆದ್ಯತೆ. ರಾಜ್ಯದ ಅಭಿವೃದ್ಧಿ ನನ್ನ ಗುರಿ. ಉಳಿದಂತೆ ಯಾವ ವಿಚಾರಗಳ ಬಗ್ಗೆಯೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಪ್ರತಿಕ್ರಿಯೆ ಸಹ ನೀಡುವುದಿಲ್ಲ ಎಂದರು.