ಶಿಕ್ಷಣ-ಆರೋಗ್ಯ ಕಾಯ್ದೆ ಸಮರ್ಥನೆ ಸವಾಲು


Team Udayavani, Jun 19, 2017, 11:47 AM IST

shikshana.jpg

ಬೆಂಗಳೂರು: ರಾಜ್ಯ ಸರ್ಕಾರ “ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ವಿಧೇಯಕ-2017′ ಹಾಗೂ “ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ’ ಮೂಲಕ “ಶಿಕ್ಷಣ’ ಹಾಗೂ “ಆರೋಗ್ಯ’ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೇನುಗೂಡಿಗೆ ಕಲ್ಲು ಹಾಕಿದೆ.

ಎರಡೂ ವಿಧೇಯಕ ಮಂಡನೆಗಾಗಿ ವಿಧಾನಮಂಡಲ ಅಧಿವೇಶನ ಆರಂಭವಾಗುವುದನ್ನೇ ಕಾಯುತ್ತಿದ್ದ ಸರ್ಕಾರ ಕಳೆದ ವಾರ ವಿಧಾನಸಭೆಯಲ್ಲಿ ಎರಡೂ ವಿಧೇಯಕಗಳನ್ನು ಮಂಡಿಸಿದೆ. ಪರಿಷತ್‌ನಲ್ಲಿ ಇನ್ನೂ ಮಂಡನೆಯಾಗಬೇಕಿದೆ. ಆದರೆ, ಇದು ಅಂಗೀಕಾರಕ್ಕೆ ಮುನ್ನವೇ ವಿವಾದದ ಸ್ವರೂಪ ಪಡೆದು ಶಿಕ್ಷಣ ಕ್ಷೇತ್ರದ ತಜ್ಞರು ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಸರ್ಕಾರದ ಮೇಲೆ ತಿರುಗಿಬಿದ್ದಿದ್ದಾರೆ.

ಇದರ ಜೊತೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸರ್ಕಾರದ ತೀರ್ಮಾನದ ವಿರುದಟಛಿವಿದ್ದು,
ಸೋಮವಾರದಿಂದ ಮೂರು ದಿನಗಳ ಕಾಲ ಮುಂದುವರಿಯುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ಎರಡೂ ವಿಚಾರಗಳೆನ್ನೆತ್ತಿಕೊಂಡು ಮುಗಿಬೀಳಲು ಎಲ್ಲಾ ಕಾರ್ಯತಂತ್ರ ರೂಪಿಸಿಕೊಂಡಿವೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್‌ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಂತೂ ಎಂತಹುದೇ ಪರಿಸ್ಥಿತಿಯಲ್ಲೂ ವಿಧೇಯಕ ಹಿಂದೆ ಪಡೆಯುವ ಮಾತೇ ಇಲ್ಲ ಎಂದು ಹಠ ಹಿಡಿದಿದ್ದಾರೆ. ಹೀಗಾಗಿ ಸದನವು ಬಿಸಿ ಚರ್ಚೆ, ವಾಗ್ವಾದಕ್ಕೆ ಸಾಕ್ಷಿಯಾಗುವ ಸಾಧ್ಯತೆಗಳಿವೆ. ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ
ಮೂಲಕ ಖಾಸಗಿ ಆಸ್ಪತ್ರೆ, ನರ್ಸಿಂಗ್‌ ಹೋಂಗಳ ಮೂಲಸೌಕರ್ಯ ಮತ್ತು ಸೇವೆಯ ಗುಣಮಟ್ಟ ಆಧರಿಸಿ ಸರ್ಕಾರವೇ ಚಿಕಿತ್ಸಾ ದರ ನಿಗದಿಪಡಿಸುವುದು ಹಾಗೂ ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚಾಗಿ ವಸೂಲಿ ಮಾಡಿದರೆ ಜೈಲುಶಿಕ್ಷೆ ವಿಧಿಸುವ ಅಂಶವನ್ನು ಕಾಯ್ದೆಯಲ್ಲಿ ಸೇರಿಸಿರುವುದು ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ಕೆರಳಿಸಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದಟಛಿ ತಿರುಗಿಬಿದ್ದಿರುವ ವೈದ್ಯರು ಒಂದು ದಿನದ ಸೇವೆ ಸ್ಥಗಿತದ “ಬಿಸಿ’ಮುಟ್ಟಿಸಿ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದಾರೆ. ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಹಾಗೂ ಖ್ಯಾತ ವೈದ್ಯ ಡಾ.ದೇವಿಶೆಟ್ಟಿ ಜತೆಗೆ ನಿಂತಿರುವುದು ಇವರ ಹೋರಾಟಕ್ಕೆ ಬಲ ಬಂದಿದೆ. ಇದು ಸರ್ಕಾರಕ್ಕೂ ತಲೆನೋವಾಗಿ
ಪರಿಣಮಿಸಿದೆ. ಇನ್ನು, ವಿಶ್ವವಿದ್ಯಾಲಯಗಳ ವಿಚಾರದಲ್ಲಿ ಏಕರೂಪದ ನೀತಿ ಹೆಸರಿನಲ್ಲಿ ಕುಲಪತಿ, ಕುಲಸಚಿವ
ನೇಮಕಾತಿ, ಕಾಮಗಾರಿಗಳ ಟೆಂಡರ್‌ ಸಹಿತ ಎಲ್ಲ ಅಧಿಕಾರ ಸರ್ಕಾರದ ನಿಯಂತ್ರಣದಲ್ಲಿಟ್ಟುಕೊಳ್ಳುವ ಹಾಗೂ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಉದ್ದೇಶದ ಕಾಯ್ದೆ ಜಾರಿಗೊಳಿಸಲು ಮುಂದಾಗಿರುವುದು ಶಿಕ್ಷಣ ತಜ್ಞರ ಕೋಪಕ್ಕೆ ಕಾರಣವಾಗಿದೆ. 

ವಿಶ್ವವಿದ್ಯಾಲಯಗಳ ಆಡಳಿತದಲ್ಲಿ ಸರ್ಕಾರ ಎಲ್ಲ ಹಂತಗಳಲ್ಲೂ ಮೂಗು ತೂರಿಸುವುದರಿಂದ ವಿವಿ ಘನತೆ ತಗ್ಗಲಿದೆ . ಜತೆಗೆ ವಿಶ್ವವಿದ್ಯಾಲಯಗಳಲ್ಲೂ ರಾಜಕಾರಣ ನುಸುಳುತ್ತದೆ ಎಂಬ ಆತಂಕ ಅವರದು. ವಿಧಾನಮಂಡಲದ ಮಳೆಗಾಲದ ಅಧಿವೇಶನ ಜೂ.15ಕ್ಕೆ ಮುಗಿಯಬೇಕಿತ್ತಾದರೂ ವಿಧೇಯಕಗಳಿಗೆ ಅಂಗೀಕಾರ ಪಡೆಯುವ ಸಲುವಾಗಿಯೇ ಮೂರು ದಿನ ವಿಸ್ತರಿಸಲಾಗಿದೆ. ಈ ಮೂರು ದಿನಗಳಲ್ಲಿ ಪರಿಷತ್‌ನಲ್ಲಿ ವಿಧೇಯಕಗಳನ್ನು ಮಂಡಿಸಿ, ಉಭಯ ಸದನಗಳಲ್ಲೂ ಚರ್ಚಿಸಿ ಅನುಮೋದನೆ ಪಡೆಯಬೇಕಿದೆ. ಆದರೆ, ಇದು ಸಾಧ್ಯವಾಗದು ಎಂಬ ಮಾತುಗಳು ಕೇಳಿಬರುತ್ತಿವೆ. ಮೂಲಗಳ ಪ್ರಕಾರ, ತೀರಾ ಹೆಚ್ಚು ಎಂದರೆ ವಿಶ್ವವಿದ್ಯಾಲಯಗಳ ವಿಧೇಯಕ ಒಂದಷ್ಟು
ಮಾರ್ಪಾಡುಗಳೊಂದಿಗೆಅಂಗೀಕಾರವಾಗಬಹುದು.

ಆದರೆ, ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ ಅಂಗೀಕಾರ ಸಾಧ್ಯತೆ ಕಡಿಮೆ. ಸರ್ಕಾರವೇ
ವಿಧೇಯಕ ಹಿಂದಕ್ಕೆ ಪಡೆಯುವ ಮಟ್ಟಕ್ಕೆ ಖಾಸಗಿ ವೈದ್ಯಕೀಯ ಸಂಸ್ಥೆಗಳ ಲಾಬಿ ಜೋರಾಗಿದ್ದು ಸರ್ಕಾರವನ್ನೇ ಅಲುಗಾಡಿಸುವ ಮಟ್ಟದಲ್ಲಿದೆ ಎಂದು ಹೇಳಲಾಗಿದೆ. ಇದಕ್ಕೆ ಕಾರಣ ಮೂರು ಪಕ್ಷಗಳಲ್ಲಿರುವ ರಾಜಕಾರಣಿಗಳು ಖಾಸಗಿ ಆಸ್ಪತ್ರೆ, ನರ್ಸಿಂಗ್‌ ಹೋಂಗಳ ಮಾಲೀಕರಾಗಿರುವುದು. ಹೀಗಾಗಿ, ಎರಡೂ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ
ಯಶಸ್ವಿಯಾಗುತ್ತಾ ಅಥವಾ ಲಾಬಿ ಮತ್ತು ಹೋರಾಟಕ್ಕೆ ಮಣಿಯುತ್ತಾ ಕಾದು ನೋಡಬೇಕಿದೆ.

– ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.