ಕಳೆಗಟ್ಟಲಾರಂಭಿಸಿದ ಶಕ್ತಿ ಕೇಂದ್ರ


Team Udayavani, Apr 25, 2019, 3:33 AM IST

kale

ಬೆಂಗಳೂರು: ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ಬಳಿಕ ಸಚಿವರು, ಹಿರಿಯ ಅಧಿಕಾರಿಗಳಿಲ್ಲದೆ ಭಣಗುಡುತ್ತಿದ್ದ ಶಕ್ತಿ ಕೇಂದ್ರ ವಿಧಾನಸೌಧ, ಬುಧವಾರದಿಂದ ಮತ್ತೆ ಕಳೆಗಟ್ಟಲಾರಂಭಿಸಿದ್ದು, ಆಡಳಿತ ಯಂತ್ರ ಕ್ರಮೇಣ ಚುರುಕುಗೊಳ್ಳುತ್ತಿರುವಂತೆ ಕಾಣುತ್ತಿದೆ.

ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಆದಿಯಾಗಿ ಬಹುತೇಕ ಸಚಿವರು ವಿಧಾನಸೌಧದತ್ತ ಸುಳಿಯಲಿಲ್ಲ. ಪಕ್ಷ ತಮಗೆ ವಹಿಸಿದ ಜವಾಬ್ದಾರಿ ನಿರ್ವಹಣೆ ಜತೆಗೆ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ಸಚಿವರು, ಶಾಸಕರು ನಿರತರಾಗಿದ್ದರು.

ಹಿರಿಯ ಅಧಿಕಾರಿಗಳನ್ನು ನಾನಾ ಕಡೆ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿದ್ದ ಹಿನ್ನೆಲೆಯಲ್ಲಿ ಅವರ ಹಾಜರಾತಿಯೂ ಕಡಿಮೆ ಇರುತ್ತಿತ್ತು. ದೈನಂದಿನ ಸೇವೆಗಳಿಗೆ ಅಗತ್ಯವಾದ ಅಧಿಕಾರಿ, ನೌಕರ, ಸಿಬ್ಬಂದಿ ಸೇವೆ ಮಾತ್ರ ಅಬಾಧಿತವಾಗಿತ್ತು.

ರಾಜ್ಯದಲ್ಲಿ ಮಂಗಳವಾರ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಸಚಿವರು ಶಕ್ತಿಸೌಧದತ್ತ ಮುಖ ಮಾಡಲಾರಂಭಿಸಿದ್ದಾರೆ. ಬುಧವಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವ ಕೃಷ್ಣ ಬೈರೇಗೌಡ ಉನ್ನತ ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿ ನಿರ್ವಹಣೆಗೆ ಹಲವು ಸಲಹೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಬರದ ಭೀಕರತೆ ತೀವ್ರವಾಗುತ್ತಿದ್ದು, ಹಲವೆಡೆ ಕುಡಿಯುವ ನೀರಿಗೆ ಜನ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ ಅವರು ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಕಚೇರಿಯಲ್ಲಿ ಸಭೆ ನಡೆಸಿ, ಚರ್ಚಿಸಿದರು.

ಕುಡಿಯುವ ನೀರಿನ ಅಭಾವ ತಲೆದೋರದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಆ ಮೂಲಕ ಬರಪೀಡಿತ ಪ್ರದೇಶಗಳು ಸೇರಿದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಪ್ರಯತ್ನಕ್ಕೆ ಚಾಲನೆ ಸಿಕ್ಕಂತಾಗಿದೆ.

ಇನ್ನೊಂದೆಡೆ, ಬೆಂಗಳೂರು ಅಭಿವೃದ್ಧಿ ಸಚಿವರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ರಾಜಧಾನಿಯಲ್ಲಿ ಮಳೆಗಾಲದಲ್ಲಿ ಅನಾಹುತಗಳ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಬಿಬಿಎಂಪಿ, ಪೊಲೀಸ್‌, ಬೆಸ್ಕಾಂ ಇತರ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪ್ರವಾಹ ತಡೆ, ಮಳೆ ನೀರು ಕಾಲುವೆಗಳ ದುರಸ್ತಿ, ಒತ್ತುವರಿ ತೆರವು, ಕೆರೆಗಳ ಹೂಳು ತೆರವು, ರಸ್ತೆ ಗುಂಡಿ ದುರಸ್ತಿಯಂತಹ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದ್ದು, ಅಧಿಕಾರಿಗಳು ಸಮರೋಪಾದಿಯಲ್ಲಿ ಸಿದ್ಧತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ತಾಕೀತು ಮಾಡಿದ್ದು, ಮಳೆಗಾಲದ ಸಿದ್ಧತಾ ಕಾರ್ಯಗಳಿಗೆ ತುಸು ಚುರುಕು ಮುಟ್ಟಿಸಿದಂತಾಗಿದೆ.

ಸಚಿವರು, ಹಿರಿಯ ಅಧಿಕಾರಿಗಳು ಕಚೇರಿಗಳತ್ತ ಆಗಮಿಸಲಾರಂಭಿಸುತ್ತಿದ್ದಂತೆ ಅಧೀನ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳೂ ಚಟುವಟಿಕೆಯಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಾರಂಭಿಸಿದ್ದಾರೆ. ಹಲವು ವಾರಗಳ ಬಳಿಕ ವಿಧಾನಸೌಧದ ಆವರಣದ ಪಾರ್ಕಿಂಗ್‌ ಸ್ಥಳದಲ್ಲಿ ವಾಹನಗಳ ಸಾಲು ಕಂಡು ಬಂತು. ಪ್ರವೇಶದ್ವಾರಗಳಲ್ಲಿ ಎಂದಿನ ತಪಾಸಣೆ, ಪರಿಶೀಲನೆ ಕ್ರಮೇಣ ಚುರುಕುಗೊಳ್ಳುತ್ತಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.