13 ವಿವಿಗಳ 74 ಸ್ಥಾನಗಳ ಮೇಲೆ ಆಕಾಂಕ್ಷಿಗಳ ಕಣ್ಣು


Team Udayavani, Aug 15, 2019, 3:03 AM IST

Udayavani Kannada Newspaper

ಬೆಂಗಳೂರು: ರಾಜ್ಯದ 13 ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಸರ್ಕಾರಿ ನಾಮನಿರ್ದೇಶಿತ ಸಿಂಡಿಕೇಟ್‌ ಸದಸ್ಯರ ಸ್ಥಾನಕ್ಕೆ ಲಾಬಿ ಆರಂಭವಾಗಿದ್ದು, ನೇಮಕಾತಿ ಪ್ರಕ್ರಿಯೆ ನಡೆಸಲು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರವೂ ಮುಂದಾಗಿದೆ. ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗೆ ನಾಮನಿರ್ದೇಶಿತ ಸ್ಥಾನಗಳಿಗೆ ನೇಮಕಾತಿ ನಡೆಯಲಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೇಮಿಸಿದ್ದ ಸಿಂಡಿಕೇಟ್‌ ನಾಮನಿರ್ದೇಶಿತ ಸದಸ್ಯರ ನೇಮಕವನ್ನು ಬಳಿಕ ಅಸ್ತಿತ್ವಕ್ಕೆ ಬಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ರದ್ದುಗೊಳಿಸಿ ಹೊಸ ನೇಮಕಾತಿ ಮಾಡಿತ್ತು. ಸಮ್ಮಿಶ್ರ ಸರ್ಕಾರ ಪತನಕ್ಕೂ ಕೆಲವೇ ದಿನಗಳ ಮೊದಲು ಈ 13 ವಿವಿಗಳಿಗೆ ಸರ್ಕಾರದ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಅದೇಶ ಹೊರಡಿಸಿದ್ದರು.

ಸಿಎಂ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೈತ್ರಿ ಸರ್ಕಾರದ ಆದೇಶ ರದ್ದುಪಡಿಸಲು ಸೂಚಿಸಿದ್ದರು. ಅದರಂತೆ 13 ವಿವಿಗಳ ಸರ್ಕಾರಿ ನಾಮನಿರ್ದೇಶಿತ ಸದಸ್ಯರ ಆಯ್ಕೆ ರದ್ದು ಮಾಡಲಾಗಿದೆ. ಸರ್ಕಾರದ ಆದೇಶ ಬರುವ ವರೆಗೂ ನೇಮಕಾತಿ ಪ್ರಕ್ರಿಯೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಖಾಲಿಯಿರುವ ಸ್ಥಾನಗಳು: ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಕೇಂದ್ರ ವಿವಿಯಲ್ಲಿ 6, ಬೆಂಗಳೂರು ಉತ್ತರ ವಿವಿಯಲ್ಲಿ 5, ಮೈಸೂರು ವಿವಿಯಲ್ಲಿ 6, ಮಂಗಳೂರು ವಿವಿಯಲ್ಲಿ 6, ತುಮಕೂರು ವಿವಿಯಲ್ಲಿ 6, ದಾವಣಗೆರೆ ವಿವಿ ಯಲ್ಲಿ 5, ಧಾರವಾಡದ ಕರ್ನಾಟಕ ವಿವಿಯಲ್ಲಿ 6, ಬೆಳಗಾವಿ ರಾಣಿ ಚೆನ್ನಮ್ಮ ವಿವಿಯಲ್ಲಿ 6, ವಿಜಯಪುರ ಅಕ್ಕಮಹಾದೇವಿ ವಿವಿಯಲ್ಲಿ 6, ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವ ವಿವಿಯಲ್ಲಿ 5, ಕಲ ಬುರಗಿಯ ವಿವಿಯಲ್ಲಿ 6, ಶಿವಮೊಗ್ಗ ಕುವೆಂಪು ವಿವಿ ಯಲ್ಲಿ 5 ನಾಮನಿರ್ದೇಶಿತ ಹುದ್ದೆ ಸೇರಿದಂತೆ ಒಟ್ಟು ರಾಜ್ಯದ 13 ವಿಶ್ವವಿದ್ಯಾಲಯಗಳ 74 ಸರ್ಕಾರಿ ನಾಮ ನಿರ್ದೇಶಿತ ಸಿಂಡಿಕೇಟ್‌ ಸದಸ್ಯರ ಸ್ಥಾನ ಖಾಲಿ ಇದೆ.

ಹುದ್ದೆಗಾಗಿ ಲಾಬಿ: ರಾಜ್ಯದ 13 ವಿವಿಗಳಲ್ಲಿ ಖಾಲಿ ಇರುವ 74 ನಾಮನಿರ್ದೇಶಿತ ಸಿಂಡಿಕೇಟ್‌ ಸದಸ್ಯರ ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗದೇ ಇದ್ದರೂ, ಹುದ್ದೆಗಾಗಿ ಲಾಬಿಯಂತೂ ಪ್ರಾರಂಭವಾಗಿದೆ. ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಹಾಗೂ ಆಡಳಿತ ಪಕ್ಷದ ಜತೆಗೆ ಉತ್ತಮ ಸಂಬಂಧ ಹೊಂದಿರುವ ಶೈಕ್ಷಣಿಕ ವಲಯದ ಕೆಲವು ಪ್ರಮುಖರು ಸಿಂಡಿಕೇಟ್‌ ಸದಸ್ಯರ ಸ್ಥಾನಕ್ಕೆ ಲಾಬಿ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಸಚಿವ ಸಂಪುಟ ರಚನೆಯ ನಂತರ ಉನ್ನತ ಶಿಕ್ಷಣ ಸಚಿವರು ಯಾರಾಗುತ್ತಾರೆ ಎಂಬುದನ್ನು ನೋಡಿಕೊಂಡು, ಸಿಂಡಿಕೇಟ್‌ ಸದಸ್ಯರ ನೇಮಕ ಪ್ರಕ್ರಿಯೆ ನಡೆಸಲು ಸಿದ್ಧತೆಯೂ ಅಗಿದೆ. ಪ್ರತಿ ವಿಶ್ವವಿದ್ಯಾಲಯದಲ್ಲೂ ಸರ್ಕಾರದ 6 ಹಾಗೂ ರಾಜ್ಯಪಾಲರ 2 ನಾಮನಿರ್ದೇಶಿತ ಸದಸ್ಯರು ಸಿಂಡಿಕೇಟ್‌ನಲ್ಲಿ ಇರುತ್ತಾರೆ. ವಿವಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳಬೇಕಾದರೂ ಸಿಂಡಿಕೇಟ್‌ ಸಭೆ ಕರೆಯಲೇಬೇಕು.

ಸಿಂಡಿಕೇಟ್‌ ಸಭೆಯ ನಿರ್ಧಾರವೇ ಅಂತಿಮವಾಗಿರುತ್ತದೆ. ಸರ್ಕಾರದ ನಾಮನಿರ್ದೇಶಿತ ಸದಸ್ಯರು ಸಭೆಯಲ್ಲಿ ಪರೋಕ್ಷವಾಗಿ ಸರ್ಕಾರದ ಪರವಾಗಿಯೇ ನಿರ್ಧಾರ ತೆಗೆದುಕೊಳ್ಳುವಂತೆ ಮಾಡುತ್ತಾರೆ. ಸಿಂಡಿಕೇಟ್‌ ಸದಸ್ಯರು ಶೈಕ್ಷಣಿಕವಾಗಿ ಎಲ್ಲ ರೀತಿಯ ಅರ್ಹತೆ ಹೊಂದಿರಬೇಕು ಎಂಬುದನ್ನು ಸರ್ಕಾರ ಅರ್ಥಮಾಡಿಕೊಂಡು, ನೇಮಕಾತಿ ನಡೆಸಿದರೆ ಉತ್ತಮ ಎಂದು ವಿಶ್ರಾಂತ ಕುಲಪತಿಯೊಬ್ಬರು ಹೇಳುತ್ತಾರೆ.

ಹಿಂದಿನ ಸರ್ಕಾರದ ನೇಮಿಸಿದ್ದ 6 ಸಿಂಡಿಕೇಟ್‌ ಸದಸ್ಯರ ನೇಮಕಾತಿ ಯನ್ನು ಈ ಸರ್ಕಾರದ ಆದೇಶದಂತೆ ರದ್ದಾಗಿದೆ. ಆದರೆ, ಹೊಸ ನೇಮಕಾತಿ ಯಾಗುವವರೆಗೂ ಈ ಸಂಬಂಧ ಯಾವುದೇ ಪ್ರಕ್ರಿಯೆ ನೀಡಲು ಸಾಧ್ಯವಿಲ್ಲ. ಸರ್ಕಾರದ ಆದೇಶದಂತೆ ನಾವು ಸೇವೆ ಸಲ್ಲಿಸುತ್ತೇವೆ.
-ಪ್ರೊ.ಕೆ.ಆರ್‌.ವೇಣುಗೋಪಾಲ್‌, ಕುಲಪತಿ ಬೆಂಗಳೂರು ವಿವಿ

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.