ತ.ನಾಡಿನ ಸುಳ್ಳುವಾದ ಬಯಲು ಮಾಡಬೇಕು
Team Udayavani, Jun 26, 2019, 3:00 AM IST
ಬೆಂಗಳೂರು: “ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳು ನಾಡು ಸರ್ಕಾರ ಪ್ರತಿಬಾರಿಯೂ ಸುಳ್ಳು ಮಾಹಿತಿ ನೀಡುತ್ತದೆ. ಅದನ್ನು ರಾಜ್ಯದ ಪ್ರತಿನಿಧಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಬಯಲು ಮಾಡಬೇಕು. ಆಗ ಮಾತ್ರ ರಾಜ್ಯದ ಪರ ವಾದಕ್ಕೆ ಬೆಲೆ ಸಿಗುತ್ತದೆ’ ಎಂದು ಬಿಜೆಪಿ ನಾಯಕರ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದ ಪ್ರತಿನಿಧಿಗಳು ವಾಸ್ತವ ಸ್ಥಿತಿಯನ್ನು ವಿವರಿಸಬೇಕು. ಕರ್ನಾಟಕಕ್ಕೆ ಮುಂಗಾರು ಜೂನ್ ತಿಂಗಳಲ್ಲಿ ಬರುತ್ತದೆ. ತಮಿಳುನಾಡಿನಲ್ಲಿ ನವೆಂಬರ್ನಲ್ಲಿ ಮಳೆ ಬರುತ್ತದೆ. ಅದನ್ನೂ ಪ್ರಾಧಿಕಾರ ಗಮನಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಹಿಂದೆ ತಮಿಳುನಾಡು ಸುಳ್ಳು ಮಾಹಿತಿ ನೀಡಿದ್ದನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದಾಗ ರಾಜ್ಯ ಸರ್ಕಾರದ ವಾದಕ್ಕೆ ನ್ಯಾಯ ದೊರೆತಿತ್ತು. ಆ ಕೆಲಸವನ್ನು ರಾಜ್ಯದ ಅಧಿಕಾರಿಗಳು ಮಾಡಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ.
ಇದೇ ವೇಳೆ, ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ವಾಸ್ತವಾಂಶವನ್ನು ಬಿಜೆಪಿ ಬಯಲು ಮಾಡಿದೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟ ಉತ್ತರ ನೀಡದೇ ಹಾರಿಕೆ ಉತ್ತರ ನೀಡಿ ಜಾರಿಕೊಂಡಿದ್ದಾರೆ. ಗ್ರಾಮ ವಾಸ್ತವ್ಯದಿಂದ ಹಣ ಪೋಲಾಗುತ್ತಿದೆ ವಿನಃ ಯಾವುದೇ ಅಭಿವೃದ್ಧಿಯಾಗುತ್ತಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ