ತಿರುಗಿ ಬಿದ್ದ ಸಭಾಪತಿ : 8 ಎಂಎಲ್ಸಿಗಳಿಗೆ ಅನರ್ಹತೆಯ ಭೀತಿ !
Team Udayavani, Jun 1, 2017, 11:17 AM IST
ಬೆಂಗಳೂರು : ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಕಾಂಗ್ರೆಸ್ ಸದಸ್ಯರು ನೋಟಿಸ್ ನೀಡಿದ ಬೆನ್ನಲ್ಲೇ ಪ್ರಯಾಣ ಭತ್ಯೆ ದುರ್ಬಳಕೆ ಆರೋಪದಲ್ಲಿ 8 ಮಂದಿ ಎಂಎಲ್ಸಿಗಳಿಗೆ ನೊಟೀಸ್ ನೀಡಿ ಶಾಕ್ ನೀಡಲಾಗಿದ್ದು, ಇದೀಗ 8 ಮಂದಿಗೆ ಅನರ್ಹತೆಯ ಭೀತಿ ಎದುರಾಗಿದೆ.
ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಪರಿಷತ್ ಸದಸ್ಯರುಗಳಾದ ಅಪ್ಪಾಜಿ ಗೌಡ , ರಘು ಆಚಾರ್, ಎಂ.ಡಿ.ಲಕ್ಷ್ಮೀ ನಾರಾಯಣ ,ಬೋಸ್ರಾಜ್ , ಆರ್.ಬಿ ತಿಮ್ಮಾಪುರ, ಎಸ್.ರವಿ , ಅಲ್ಲಂ ವೀರಭದ್ರಪ್ಪ ಮತ್ತು ಸಿ.ಆರ್ ಮನೋಹರ್ ಅವರಿಗೆ ನೊಟೀಸ್ ನೀಡಿದ್ದಾರೆ.
ಲಕ್ಷಾಂತರ ರೂಪಾಯಿ ಪ್ರಯಾಣ ಭತ್ಯೆ ದುರ್ಬಳಕೆ ಮಾಡಲಾಗಿರುವ ಬಗ್ಗೆ ಆರೋಪ ಮಾಡಿ ಬಿಬಿಎಂಪಿ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ನೀಡಿದ ದೂರಿನ ಅನ್ವಯ ಈ ನೊಟೀಸ್ ನೀಡಲಾಗಿದ್ದು, ರಾಜ್ಯ ಸಭೆಯಲ್ಲಿ ಇಂತಹ ಪ್ರಕರಣಕ್ಕೆ ಕ್ರಿಮಿನಲ್ ಕೇಸ್ ಹಾಕಲಾಗುತ್ತದೆ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಏಕೆ ಹಾಕಬಾರದು ಎಂದು ಸಭಾಪತಿ ಪ್ರಶ್ನಿಸಿ ಜೂನ್ 3 ರ ಒಳಗೆ ಉತ್ತರ ನೀಡುವಂತೆ ಕೇಳಿದ್ದಾರೆ.
ಇದೀಗ ನೊಟೀಸ್ಗೆ ಎಂಎಲ್ಸಿಗಳು ಯಾವ ಉತ್ತರ ನೀಡುತ್ತಾರೆ ಎಂದು ಕಾದುನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ