ಹೊಸ ವೈದ್ಯ ಕಾಲೇಜುಗಳ ಸ್ಥಾಪನೆಗೆ ಆರ್ಥಿಕ ಮುಗ್ಗಟ್ಟು
Team Udayavani, Dec 27, 2017, 6:30 AM IST
ಬೆಂಗಳೂರು: ರಾಜ್ಯದಲ್ಲಿ ಆರು ಹೊಸ ವೈದ್ಯಕೀಯ ಕಾಲೇಜುಗಳಿಗೆ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು, 1200 ಕೋಟಿ ರೂ. ಮೊತ್ತ ಬಿಡುಗಡೆಗೆ ಹಣಕಾಸು ಇಲಾಖೆ ಹಿಂದೇಟು ಹಾಕುತ್ತಿದೆ. ಹೀಗಾಗಿ, ಬಾಗಲಕೋಟೆ, ಹಾವೇರಿ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ವಿಘ್ನ ಎದುರಾಗಿದೆ.
ಹೊಸ ವೈದ್ಯಕೀಯ ಕಾಲೇಜಿಗೆ ತಲಾ 200 ಕೋಟಿ ರೂ. ಅಗತ್ಯವಿದ್ದು ಒಟ್ಟು 1200 ಕೋಟಿ ರೂ. ಬೇಕಾಗಿದೆ. ಹಣಕಾಸು ಇಲಾಖೆ ಇನ್ನೂ ಒಪ್ಪಿಗೆ ಕೊಟ್ಟಿಲ್ಲ ಎಂದು ಖುದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸದಾಗಿ ಪ್ರಾರಂಭಿಸಲು
ಘೋಷಿಸಲಾಗಿದ್ದ 6 ವೈದ್ಯಕೀಯ ಕಾಲೇಜುಗಳಿಗೆ ಹಣಕಾಸು ಬಿಡುಗಡೆ ವಿಳಂಬವಾಗುತ್ತಿದೆ. ಸದ್ಯವೇ ಆ ಕುರಿತು ಸಭೆ ಸಹ ಕರೆಯಲಾಗಿದ್ದು ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಘೊಷಿಸಲಾಗಿದ್ದ ಚಾಮರಾಜನಗರ, ಕೊಡಗು, ಕಾರವಾರ, ಕೊಪ್ಪಳ, ಗದಗ,
ಕಲಬುರಗಿ ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜು ಈಗಾಗಲೇ ಆರಂಭವಾಗಿದೆ. ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಕಾಲೇಜು ಮುಂದಿನ ವರ್ಷದಿಂದ ಪ್ರಾರಂಭವಾಗುವ ನಿರೀಕ್ಷೆಯಿದ್ದು ಎಂಸಿಐ ಅನುಮತಿಗೆ ಕಾಯಲಾಗುತ್ತಿದೆ. ಇದರಿಂದ 150 ಹೊಸದಾಗಿ ಸೀಟು ದೊರೆಯಲಿದೆ ಎಂದರು.
ಸರ್ಕಾರದ ಮತ್ತೂಂದು ಮಹತ್ವಾಕಾಂಕ್ಷಿ ಯೋಜನೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ ತೀರ್ಮಾನದಂತೆ
ಪ್ರಮುಖ ನಗರಗಳಾದ ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಇನ್ನೊಂದು ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಲಿದೆ.
ಕಲಬುರಗಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗೆ 110 ಕೋಟಿ ರೂ., ಮೈಸೂರಿಗೆ 140 ಕೋಟಿ ರೂ., ಬೆಳಗಾವಿಗೆ 150 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದಡಿ ಉನ್ನತೀಕರಣ ಮಾಡುತ್ತಿರುವ ಬಳ್ಳಾರಿ ಮತ್ತು ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ ವೇಳೆಗೆ ಕಾರ್ಯಾರಂಭವಾಗಲಿವೆ ಎಂದರು. ಇದರ ಜತೆಗೆ
ಮೈಸೂರು ಮತ್ತು ಕಲಬುರಗಿಯಲ್ಲಿ ಅಪಘಾತ ಗಾಯಾಳುಗಳಿಗೆ ವಿಶೇಷ ಚಿಕಿತ್ಸೆ ನೀಡುವ ಟ್ರಾಮಾ ಸೆಂಟರ್ ಪ್ರಾರಂಭವಾಗಲಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ