ನಾಳೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಆಕಾಂಕ್ಷಿಗಳಲ್ಲಿ ಕಾತರ

ಸಿದ್ದರಾಮಯ್ಯ ಸ್ಪರ್ಧೆ ಇನ್ನೂ ನಿಗೂಢ

Team Udayavani, Mar 22, 2023, 7:00 AM IST

ನಾಳೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಆಕಾಂಕ್ಷಿಗಳಲ್ಲಿ ಕಾತರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಎಲ್ಲಿಂದ ಎಂಬುದು ಮಾತ್ರ ನಿಗೂಢವಾಗಿದೆ.

ದಿಲ್ಲಿಯಲ್ಲಿ ಕಳೆದ ಶುಕ್ರವಾರ ಕಾಂಗ್ರೆಸ್‌ನ ಕೇಂದ್ರ ಚುನಾವಣ ಸಮಿತಿಯು ರಾಜ್ಯದ 224 ಕ್ಷೇತ್ರಗಳ ಪೈಕಿ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಆದರೆ ರಾಹುಲ್‌ ಗಾಂಧಿ ಬೆಳಗಾವಿ ಪ್ರವಾಸದ ಬಳಿಕ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಬುಧವಾರ ಯುಗಾದಿಯ ಶುಭದಿನ ಆಗಿರುವುದರಿಂದ ಅಂದೇ ಮೊದಲ ಪಟ್ಟಿ ಬಿಡುಗಡೆ ಎನ್ನುತ್ತಿದ್ದರೂ ಇದು ಗುರುವಾರಕ್ಕೆ ಹೋಗಬಹುದು ಎನ್ನಲಾಗಿದೆ. ಹೀಗಾಗಿ ಹಾಲಿ ಶಾಸಕರ ಜತೆಗೆ ಟಿಕೆಟ್‌ ಆಕಾಂಕ್ಷಿಗಳು ಪಟ್ಟಿ ಬಿಡುಗಡೆಗೆ ಜಾತಕಪಕ್ಷಿಯಂತೆ ಕಾಯುತ್ತಿದ್ಧಾರೆ. ಯುಗಾದಿಯ ಬೇವು-ಬೆಲ್ಲ ಯಾರಿಗೆ ಎಂಬುದು ಮಾತ್ರ ಕುತೂಹಲ ಕೆರಳಿಸಿದೆ.

ಹಾಲಿ 69 ಶಾಸಕರ ಪೈಕಿ ಪುಲಕೇಶಿನಗರ, ಕಲಬುರಗಿ ಉತ್ತರ, ಕುಂದಗೋಳ, ಶಿಡ್ಲಘಟ್ಟ, ಪಾವಗಡ, ಲಿಂಗಸುಗೂರು, ಅಫ‌ಜಲಪುರ, ಹರಿಹರ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ತಡೆ ಹಾಕಿರುವುದರಿಂದ ಹಾಲಿ 8 ಶಾಸಕರಲ್ಲಿ ತಳಮಳ ಸೃಷ್ಟಿಯಾಗಿದೆ. ಈ ಕ್ಷೇತ್ರಗಳಲ್ಲಿ ಗೊಂದಲಮಯ ವಾತಾವರಣ ಉಂಟಾಗಿದೆ. ಕೇವಲ ಆಕಾಂಕ್ಷಿಗಳು ಮಾತ್ರವಲ್ಲ ಕಾರ್ಯಕರ್ತರು ಸಹ ಟಿಕೆಟ್‌ ಯಾರಿಗೆ ಸಿಗಬಹುದೆಂದು ಕಾಯುತ್ತಿದ್ದಾರೆ.

ಗೊಂದಲದ ಗೂಡು
ಸಿದ್ದರಾಮಯ್ಯ ಸ್ಪರ್ಧೆ ಕುರಿತು ಉಂಟಾಗಿರುವ ಗೊಂದಲ 4 ದಿನ ಕಳೆದರೂ ಬಗೆಹರಿದಿಲ್ಲ. ಹಲವು ಕಾರಣಗಳಿಂದ ಕೋಲಾರದಲ್ಲಿ ಸ್ಪರ್ಧಿಸುವುದು ಬೇಡ ಎಂದು ಅವರಿಗೆ ರಾಹುಲ್‌ ಗಾಂಧಿ ನೀಡಿದ್ದಾರೆ ಎನ್ನಲಾದ ಸಲಹೆಯೇ ಗೊಂದಲಕ್ಕೆ ಮೂಲ ಕಾರಣ. ಈ ಮಧ್ಯೆ ಸಿದ್ದರಾಮಯ್ಯ ಅವರು, ಬಾದಾಮಿ, ವರುಣಾ, ಕಡೂರು, ಕೊಪ್ಪಳ ಮತ್ತಿತರ ಕಡೆಗೆ ಮುಖ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಕೋಲಾರ, ವರುಣಾ ಜತೆಗೆ ಮತ್ತಷ್ಟು ಕ್ಷೇತ್ರಗಳು ಸೇರಿರುವುದರಿಂದ ಸಿದ್ದರಾಮಯ್ಯ ಸ್ಪರ್ಧೆ ಕಾಂಗ್ರೆಸ್‌ ಪಾಳಯದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿದೆ. ಸ್ವತಃ ಸಿದ್ದರಾಮಯ್ಯ ಅವರಲ್ಲಿಯೇ ಸ್ಪಷ್ಟತೆ ಇಲ್ಲದಿರುವುದರಿಂದ ಬಿಕ್ಕಟ್ಟು ಮುಂದುವರಿದಿದೆ.

ಬೆಂಗಳೂರಿನಲ್ಲಿ ಮಾತನಾಡುವಾಗ ಕೋಲಾರದಿಂದ ಸ್ಪರ್ಧಿಸುವುದಿಲ್ಲವೆಂದು ತಾವು ಹೇಳಿಲ್ಲ ಎಂದು ಹೇಳಿದ್ದರೆ, ಮೈಸೂರಿನಲ್ಲಿ ಮಾತನಾಡುವಾಗ ಪುತ್ರ ವರುಣಾದಿಂದಲೇ ಸ್ಪರ್ಧಿಸುತ್ತಾನೆ ಎಂದು ಹೇಳಿದ ಮರುಕ್ಷಣವೇ ಬಾದಾಮಿ, ಕೋಲಾರ, ವರುಣಾ ನನ್ನ ಆಯ್ಕೆ. ಆದರೆ ನಾನು ಎಲ್ಲಿಂದ ಸ್ಪರ್ಧಿಸಬೇಕೆಂಬುದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದಿದ್ದಾರೆ. ಇವೆಲ್ಲವೂ ಅವರಲ್ಲಿರುವ ಗೊಂದಲವನ್ನು ಸ್ಪಷ್ಟಪಡಿಸಿವೆ. ಹೀಗಾಗಿ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರು ಇರುತ್ತದೋ ಇಲ್ಲವೇ ಎಂಬುದು ಕುತೂಹಲ ಕೆರಳಿಸಿದೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.