ಕಾರಿನ ಗಾಜು ಪುಡಿಗೈದು 15 ಲಕ್ಷ ರೂ.ಕಳವು


Team Udayavani, Dec 14, 2019, 3:00 AM IST

Udayavani Kannada Newspaper

ಮಂಗಳೂರು: ನಗರದ ಚಿಲಿಂಬಿಯಲ್ಲಿ ಸೌತ್‌ ಇಂಡಿಯನ್‌ ಬ್ಯಾಂಕ್‌ ಶಾಖೆಯ ಎದುರು ನಿಲ್ಲಿಸಿದ್ದ ಕಾರಿನಿಂದ 15 ಲಕ್ಷ ರೂ.ಕಳವು ಮಾಡಿದ ಘಟನೆ ಶುಕ್ರವಾರ ಹಾಡಹಗಲೇ ನಡೆದಿದೆ. ಬೆಂಗಳೂರು ಮೂಲದ, ಪ್ರಸ್ತುತ ನಗರದ ಲೇಡಿಹಿಲ್‌ ಬಳಿ ವಾಸವಾಗಿರುವ ಮಹಮ್ಮದ್‌ ರಿಜ್ವಾನ್‌ (46) ಹಣ ಕಳೆದುಕೊಂಡವರು.

ಪತ್ನಿಯ ಜತೆ ರಿಜ್ವಾನ್‌ ಶುಕ್ರವಾರ ಬೆಳಗ್ಗೆ 11.30ರ ವೇಳೆಗೆ ಫಳ್ನೀರ್‌ನಿಂದ ಚಿಲಿಂಬಿಗೆ ಬಂದು, ಹಣದ ಬ್ಯಾಗನ್ನು ಕಾರಿನಲ್ಲಿಟ್ಟು ಬ್ಯಾಂಕಿಗೆ ತೆರಳಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಇಬ್ಬರು ಕಾರಿನ ಗ್ಲಾಸ್‌ ಒಡೆದು ಬ್ಯಾಗ್‌ನಲ್ಲಿದ್ದ 15 ಲಕ್ಷ ರೂ.ಎಗರಿಸಿ ಪರಾರಿಯಾಗಿದ್ದಾರೆ. ರಿಜ್ವಾನ್‌ ಅವರು ಬ್ಯಾಂಕಿನಿಂದ ಹೊರಗೆ ಬಂದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಉರ್ವ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸಿಸಿ ಕ್ಯಾಮರಾದಲ್ಲಿ ದಾಖ ಲು:ಆರೋಪಿಗಳು ಬೈಕಿನಲ್ಲಿ ಬಂದು ಕಳವು ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಇದರ ಆಧಾರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ರಿಜ್ವಾನ್‌ ಅವರನ್ನು ಹತ್ತಿರದಿಂದ ಬಲ್ಲವರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ.

6 ಲಕ್ಷ ರೂಪಾಯಿ ಕಳ್ಳತನ
ಚಿತ್ರದುರ್ಗ: ಬ್ಯಾಂಕ್‌ ಎದುರು ನಿಲ್ಲಿಸಿದ್ದ ಕಾರಿನ ಗ್ಲಾಸ್‌ ಒಡೆದು ಅದರೊಳಗಿದ್ದ 6 ಲಕ್ಷ ರೂ.ಗಳನ್ನು ಕಳ್ಳರು ಎಗರಿಸಿದ ಘಟನೆ ನಗರದ ದಾವಣಗೆರೆ ರಸ್ತೆಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ ಬಳಿ ಶುಕ್ರವಾರ ನಡೆದಿದೆ. ನಗರದ ಜಯಲಕ್ಷ್ಮಿಬಡಾವಣೆಯ ಗುತ್ತಿಗೆದಾರ ವೈ.ಪ್ರಕಾಶ್‌ ಎಂಬುವರ ಇನ್ನೋವಾ ಕಾರಿನ ಮುಂದಿನ ಎಡಭಾಗದ ಡೋರ್‌ನ ಗ್ಲಾಸ್‌ ಒಡೆದು ಡ್ಯಾಶ್‌ಬೋರ್ಡ್‌ನಲ್ಲಿದ್ದ ಹಣ ಕಳವು ಮಾಡಲಾಗಿದೆ. ಶುಕ್ರವಾರ ಮಧ್ಯಾಹ್ನ ಬಿ.ಡಿ.ರಸ್ತೆಯಲ್ಲಿರುವ ಆಕ್ಸಿಸ್‌ ಬ್ಯಾಂಕಿನಲ್ಲಿ 6.13 ಲಕ್ಷ ರೂ.ಡ್ರಾ ಮಾಡಿದ ಪ್ರಕಾಶ್‌, 13 ಸಾವಿರ ರೂ.ಗಳನ್ನು ಪ್ಯಾಂಟ್‌ ಜೇಬಿನಲ್ಲಿಟ್ಟುಕೊಂಡು,

ಉಳಿದ 6 ಲಕ್ಷ ರೂ.ಗಳನ್ನು ಕಾರಿನ ಡ್ಯಾಶ್‌ ಬೋರ್ಡ್‌ನಲ್ಲಿಟ್ಟಿದ್ದರು. ನಂತರ, ದಾವಣಗೆರೆ ರಸ್ತೆಯಲ್ಲಿರುವ ಜಗಳೂರು ಮಹಾಲಿಂಗಪ್ಪ ಕಾಂಪ್ಲೆಕ್ಸ್‌ನ ಎಚ್‌ಡಿಎಫ್‌ಸಿ ಬ್ಯಾಂಕ್‌ ಎದುರು ಕಾರು ನಿಲ್ಲಿಸಿ, ಇಎಂಐ ಕಟ್ಟಲೆಂದು ಬ್ಯಾಂಕ್‌ ಒಳಗೆ ತೆರಳಿದ್ದರು. ಬ್ಯಾಂಕ್‌ನಿಂದ ವಾಪಸ್‌ ಕಾರಿನ ಬಳಿ ಬಂದಾಗ 6 ಲಕ್ಷ ರೂ.ಕಳ್ಳತನ ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ಚಿತ್ರದುರ್ಗ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರಿಗಾಗಿ ಪತ್ತೆ ಕಾರ್ಯ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.