ರಾಜ್ಯ ಒಡೆಯುವ ಕೂಗಿಗೆ ಸಿಎಂ ಛಾಟಿ


Team Udayavani, Nov 2, 2018, 6:00 AM IST

s-50.jpg

ಬೆಂಗಳೂರು: “ರಾಜ್ಯ ಒಡೆಯುವ ದನಿಗಳನ್ನು ಸಂಪೂರ್ಣವಾಗಿ ಧಿಕ್ಕರಿಸಿ. ಅಪಪ್ರಚಾರಗಳಿಗೆ ಕಿವಿಗೊಡಬೇಡಿ. ಉತ್ತರ, ದಕ್ಷಿಣ, ಕರಾವಳಿ ಎಂಬ ಭೇದಭಾವ ಇಲ್ಲದೆ, ಒಂದೇ ತಾಯಿಯ ಮಕ್ಕಳಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸಿ…’ ಇದು 63ನೇ ಕನ್ನಡ ರಾಜ್ಯೋತ್ಸವಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಾಡಿನ ಜನತೆಗೆ ನೀಡಿದ ಸಂದೇಶ. ಈ ಮೂಲಕ ಪ್ರತ್ಯೇಕ ರಾಜ್ಯದ ಕೂಗಿಗೆ ತಿರುಗೇಟು ನೀಡಿದರು.

ಛಿದ್ರವಾಗಿದ್ದ ನಾಡನ್ನು ಒಗ್ಗೂಡಿಸಿ ಕರ್ನಾಟಕದ ಗತ ವೈಭವವನ್ನು ಕಂಡುಕೊಳ್ಳಲು ನಡೆದ ಏಕೀಕರಣ ಚಳವಳಿ ಫ‌ಲವಾಗಿ ಕರ್ನಾಟಕ ರೂಪುಗೊಂಡಿದೆ. ಆದರೆ, ಇಂದು ನಾಡನ್ನು ಒಡೆಯುವ ದನಿಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಕೊಡಬಾರದು. ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಉಳಿಸುವುದು ನಮ್ಮ ಗುರಿ. ಆದ್ದರಿಂದ ಉತ್ತರ, ದಕ್ಷಿಣ, ಕರಾವಳಿ, ಮಧ್ಯ ಮತ್ತು ಹಳೆಯ ಕರ್ನಾಟಕ ಎಂಬ ಭೇದಭಾವಗಳಿಲ್ಲದೆ, ರಾಜ್ಯದ ಸರ್ವತೋಮುಖ ಅಭಿವೃದಿಟಛಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

1ನೇ ತರಗತಿಯಿಂದ ಇಂಗ್ಲಿಷ್‌; ಸಮರ್ಥನೆ: ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲಿಷ್‌ ಕಲಿಸುವ ನಿರ್ಧಾರಕ್ಕೆ ಅಲ್ಲಲ್ಲಿ ಅಪಸ್ವರಗಳು ಬರುತ್ತಿರುವುದನ್ನು ಗಮನಿಸಿದ್ದೇನೆ. ಆದರೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಇದು ನಮಗೆ ಮುಖ್ಯ.  ಗ್ರಾಮೀಣ ಭಾಗದ ಮಕ್ಕಳು ಕೀಳರಿಮೆಯಿಂದ ಹೊರಬಂದು ಎಲ್ಲರಂತೆ ಜೀವನ ಎದುರಿಸಬೇಕು ಎನ್ನುವುದು ಇದರ ಹಿಂದಿನ ಆಶಯ. ಇಂಗ್ಲಿಷ್‌ ಕಲಿಕೆಯು ಕನ್ನಡದ ಸಾರ್ವಭೌಮತ್ವದ ಮೇಲೆ ಸವಾರಿ ಮಾಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ಶಿಕ್ಷಕರು ಇನ್ನಷ್ಟು ಶ್ರಮ ಹಾಕಬೇಕು: ಕರ್ನಾಟಕದ ಗುರು ಪರಂಪರೆಗೆ ತನ್ನದೇ ಆದ ಔನ್ನತ್ಯವಿದೆ. ಸರ್ಕಾರಿ ಶಿಕ್ಷಕ ವೃತ್ತಿ ಜೀವನ ಮಾರ್ಗವಾಗಲ್ಲದೆ, ಅತ್ಯುತ್ತಮ ವ್ಯಕ್ತಿತ್ವಗಳನ್ನು ಬೆಳೆಸುವ ಅರ್ಥಪೂರ್ಣ ಸಾಧನವಾಗಿ ಪರಿಗಣಿಸಿದ ಅನೇಕ ಅದ್ಭುತ ಶಿಕ್ಷಕರನ್ನು ನಾನು ನೋಡಿದ್ದೇನೆ. ಧನ್ಯಭಾವ ಅನುಭವಿಸಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡಿ ತಮ್ಮ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿದ ಅಗಣಿತ ಸಾಧಕರ ಮೇಲ್ಪಂಕ್ತಿಯೇ ನಮ್ಮ ಮುಂದಿದೆ. ಈ ನಿಟ್ಟಿನಲ್ಲಿ ಭಾರತರತ್ನ ಪ್ರೊ.ಸಿ.ಎನ್‌. ಆರ್‌.ರಾವ್‌ ಒಂದು ಉದಾಹರಣೆ. ಆದರೆ, ಈಗ ನಮ್ಮ ಶಿಕ್ಷಕ ವೃಂದ ಇನ್ನಷ್ಟು ಶ್ರಮ ಹಾಕುವ ಅವಶ್ಯಕತೆ ಇದೆ ಎಂದರು.

ಶಿರಸಿಯ ಮಾರಿಕಾಂಬಾ ಸರ್ಕಾರಿ ಶಾಲೆಯ ಸಾಧನೆ ಉಲ್ಲೇಖೀಸಿದ ಎಚ್‌.ಡಿ. ಕುಮಾರಸ್ವಾಮಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿಯನ್ನು ಹಿಂದಿಕ್ಕಿ ದಾಖಲೆ ಎನಿಸುವಂತೆ ತನ್ನ ವಿದ್ಯಾರ್ಥಿ ಸಂಖ್ಯೆಯನ್ನು ಏರಿಸಿಕೊಂಡಿರುವ ಈ ಶಾಲೆಯ ಪ್ರಗತಿಗೆ ಅಲ್ಲಿನ
ಶಿಕ್ಷಕವರ್ಗದ ಕೊಡುಗೆ ಶ್ಲಾಘನೀಯ ಎಂದರು. ಕ್ಷೀರಭಾಗ್ಯ ಯೋಜನೆ ಅಡಿ ರಾಜ್ಯದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಒಟ್ಟು 153 ವಿಶೇಷ ಚೇತನ ಮಕ್ಕಳ ಶಾಲೆಗಳಲ್ಲಿ ಕಲಿಯುತ್ತಿರುವ 10,567 ಮಕ್ಕಳಿಗೆ ಬಿಸಿಹಾಲು ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿದರು. ಒಟ್ಟಾರೆ 58.30 ಲಕ್ಷಕ್ಕೂ ಹೆಚ್ಚು ಮಕ್ಕಳು ಬಿಸಿಹಾಲು ವಿತರಿಸುವ ವ್ಯವಸ್ಥೆಯಿಂದ ಲಾಭ ಪಡೆಯುತ್ತಿದ್ದಾರೆ.

ಮೂರು ಕೌಶಲ್ಯಾಧಾರಿತ
ವಿವಿ ಸ್ಥಾಪನೆ ಯುವಜನರ ಪ್ರತಿಭೆಗೆ ಅನುಕೂಲವಾಗಲು ಮೂರು ಕೌಶಲ್ಯಾಧಾರಿತ ವಿಶ್ವವಿದ್ಯಾನಿಲಯಗಳ ಸ್ಥಾಪನೆಗೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದರು. ಅಲ್ಲದೆ, ಜಾನಪದ ಜಾತ್ರೆ ನಿರಂತರವಾಗಿ ನಡೆಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಮೂಲಕ ನಗರ ಹಾಗೂ ಗ್ರಾಮೀಣ ಜಾನಪದ ಸಂಸ್ಕೃತಿಗಳ ನಡುವೆ ಸ್ನೇಹದ ಸೇತುವೆ ಬೆಸೆಯಲಿದೆ. ಜತೆಗೆ ಜಾನಪದ ಕಲಾವಿದರ ಪ್ರತಿಭೆಯನ್ನು ವಿವಿಧ ವೇದಿಕೆಗಳಲ್ಲಿ ಪ್ರದರ್ಶಿಸಲು ಅತ್ಯುತ್ತಮ ಅವಕಾಶ ಒದಗಿಸಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.