ಮೂರು ವರ್ಷಗಳಲ್ಲಿ ನಷ್ಟ ಪ್ರಮಾಣ ತಗ್ಗಿಸುವ ಗುರಿ
Team Udayavani, May 31, 2019, 3:04 AM IST
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಪ್ರಸರಣ ನಷ್ಟ ಶೇ.3.16 ಹಾಗೂ ವಿತರಣೆ ನಷ್ಟವು ಶೇ.12.5ರಷ್ಟಿದೆ. ಮುಂದಿನ 3 ವರ್ಷಗಳಲ್ಲಿ ನಷ್ಟ ಪ್ರಮಾಣ ತಗ್ಗಿಸುವ ಗುರಿ ನೀಡಲಾಗಿದ್ದು, ಇದನ್ನು ತಲುಪದಿದ್ದರೆ ಮುಂದೆ ವಿದ್ಯುತ್ ದರ ಏರಿಕೆ ಪ್ರಸ್ತಾವಗಳನ್ನು ಪರಿಗಣಿಸುವುದು ಕಷ್ಟ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭು ದಯಾಳ್ ಮೀನಾ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕ್ರಮೇಣ ಪ್ರಸರಣ ಮತ್ತು ವಿತರಣೆ (ಟ್ರಾನ್ಸ್ಮಿಷನ್ ಆ್ಯಂಡ್ ಡಿಸ್ಟ್ರಿಬ್ಯೂಷನ್) ನಷ್ಟ ಪ್ರಮಾಣ ಇಳಿಕೆಯಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಷ್ಟ ಪ್ರಮಾಣ ತಗ್ಗಿಸಲು ಕೈಗೊಂಡಿರುವ ಕ್ರಮ ಸಮಾಧಾನಕರವಾಗಿದೆ. ಆದರೆ ಮುಂದಿನ 3 ವರ್ಷಗಳಲ್ಲಿ ನಷ್ಟ ತಗ್ಗಿಸಲು ನಿರ್ದಿಷ್ಟ ಗುರಿ ನೀಡಲಾಗಿದ್ದು, ಅದನ್ನು ತಲುಪದಿದ್ದರೆ ಮುಂದೆ ದರ ಏರಿಕೆ ಪ್ರಸ್ತಾವಕ್ಕೆ ಸ್ಪಂದಿಸುವುದು ಕಷ್ಟ ಎಂದು ತಿಳಿಸಿದರು.
ರಾಜ್ಯದಲ್ಲಿ 28 ಲಕ್ಷ ಕೃಷಿ ಪಂಪ್ಸೆಟ್ಗಳಿದ್ದು, ಉಚಿತ ವಿದ್ಯುತ್ ನೀಡಿಕೆಗಾಗಿ ಪ್ರಸಕ್ತ ವರ್ಷದಲ್ಲಿ 11,780 ಕೋಟಿ ರೂ. ಅನುದಾನವನ್ನು ಸರ್ಕಾರ ಬಜೆಟ್ನಲ್ಲಿ ಕಾಯ್ದಿರಿಸಿದೆ. ಇದರ ಸದ್ಬಳಕೆ ಉದ್ದೇಶದಿಂದ ಈಗಾಗಲೇ ಕೃಷಿ ಪಂಪ್ಸೆಟ್ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಿ ದುರ್ಬಳಕೆ ತಡೆಯುವಂತೆ ಸೂಚಿಸಲಾಗಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಲಾಗಿದೆ.
ವಿದ್ಯುತ್ ಕಳವು ನಿಯಂತ್ರಣಕ್ಕೆ ಜಾಗೃತ ಪಡೆಗಳು ಅಕ್ರಮಗಳನ್ನು ಪತ್ತೆ ಹಚ್ಚಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆಯೂ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು. ಆಯೋಗದ ಸದಸ್ಯರಾದ ಎಚ್.ಎಂ. ಮಂಜುನಾಥ್, ಎಂ.ಡಿ.ರವಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ