ಸರ್ಕಾರಕ್ಕೆ ಬಹುಮತ ಇಲ್ಲ,ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ – ರಾಮುಲು
Team Udayavani, Feb 6, 2019, 10:01 AM IST
ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಶ್ರ ಸರಕಾರಕ್ಕೆ ಬಹುಮತ ಇಲ್ಲ. ಇಂದು ಅಧಿವೇಶನಕ್ಕೆ ಆಡಳಿತ ಪಕ್ಷದ 15ಕ್ಕೂ ಹೆಚ್ಚು ಮಂದಿ ಶಾಸಕರು ಗೈರು ಹಾಜರಾಗಿದ್ದರು. ಹಾಗಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಬುಧವಾರ ವಿಧಾನ ಮಂಡಲ ಅಧಿವೇಶನ ನಂತರ ಮಾತನಾಡಿದ ರಾಮುಲು, ಸರ್ಕಾರಕ್ಕೆ ಸಂಖ್ಯಾಬಲವಿಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡಬೇಕು. ನಾವು ಹಂತ ಹಂತವಾಗಿ ಹೋರಾಟ ನಡೆಸುತ್ತೇವೆ. ಇದರ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದರು.
ಬಹುಮತ ಸಾಬೀತು ಮಾಡಲಿ: ಜಾರ್ಜ್
ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಜಾರ್ಜ್, ನಮ್ಮ ಸರ್ಕಾರ ಸುಭಧ್ರವಾಗಿದೆ. ನಾವು ಐದು ವರ್ಷಗಳ ಕಾಲ ಅಧಿಕಾರ ನಡೆಸುತ್ತೇವೆ. ಬಿಜೆಪಿಯವರು ಬಹುಮತ ಇಲ್ಲ ಎಂದು ಹೇಳುವುದು ಮಾತ್ರ. ಬೇಕಾದರೆ ಸಾಬೀತು ಮಾಡಲಿ ಎಂದರು.
ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿಯವರು ರಾಜ್ಯಪಾಲರಿಗೆ ಮತ್ತು ಸಂವಿಧಾನಕ್ಕೆ ಅಗೌರವ ತೋರಿದ್ದಾರೆ ಎಂದು ಬಿಜೆಪಿಯ ನಡೆಯ ಕುರಿತು ಟೀಕೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ