ಎಡಿಜಿಪಿ ವರ್ಗಾವಣೆಗೆ 15 ದಿನ ಬೇಕಿತ್ತಾ? : ಪ್ರಿಯಾಂಕ್ ಖರ್ಗೆ ಪ್ರಶ್ನೆ
ದಿವ್ಯಾ ಹಾಗರಗಿ ಜತೆ ನನ್ನ ಫೋಟೋನೂ ಇರಬಹುದು
Team Udayavani, Apr 27, 2022, 5:51 PM IST
ಬೆಂಗಳೂರು: ಪಿಎಸ್ಐ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಸರ್ಕಾರ ತಡವಾಗಿ ಎಡಿಜಿಪಿ ಅವರನ್ನು ವರ್ಗಾವಣೆ ಮಾಡಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆಗೆ 15 ದಿನ ಬೇಕಿತ್ತಾ? ಸರ್ಕಾರ ಹಗರಣವನ್ನ ಒಪ್ಪಿಕೊಂಡಂತಾಗಿದೆ.ಹಗರಣ ನಡೆದಿದೆ. ಅಧಿಕಾರಿಗಳು ಶಾಮೀಲಾಗಿದ್ದಾರೆ ಅಂತ ಈಗ ಸರ್ಕಾರಕ್ಕೆ ಅನಿಸಿರಬಹುದು.ಹೀಗಾಗಿ ಎಡಿಜಿಪಿ ಅವರನ್ನ ವರ್ಗಾವಣೆ ಮಾಡಿದ್ದಾರೆ ಎಂದರು.
ದಿವ್ಯಾ ಹಾಗರಗಿ ಅವರ ಫೋಟೋ ಯಾರ ಜಿತೆಯಾದರೂ ಇರಲಿ, ಅವರು ಬಿಜೆಪಿನೋ, ಕಾಂಗ್ರೆಸ್ ನವರೋ, ಜೆಡಿಎಸ್ ನವರೋ ಅವರೊಬ್ಬ ಆರೋಪಿ, ಮೊದಲು ಅವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿ ಎಂದರು.
ಇದನ್ನೂ ಓದಿ : ಪಿಎಸ್ಐ ನೇಮಕಾತಿ ಅಕ್ರಮ: ನೇಮಕಾತಿ ಎಡಿಜಿಪಿ ಅಮೃತ್ ಪಾಲ್ ಎತ್ತಂಗಡಿ
ಡಿ.ಕೆ ಶಿವಕುಮಾರ್ ಜತೆ ಇರುವ ಫೋಟೋಗೆ ಪಕ್ಷದ ಅಧ್ಯಕ್ಷರೇ ಸ್ಪಷ್ಟನೆ ನೀಡಿದ್ದಾರೆ.ದಿವ್ಯಾ ಹಾಗರಗಿ ಅವರು ಅವರ ಮಗನ ಮದುವೆ ಆಮಂತ್ರಣ ಕೊಡಲು ನನ್ನ ಮನೆಗೂ ಬಂದಿದ್ದರು.ಅವರ ಜತೆ ನನ್ನ ಫೋಟೋನೂ ಇರಬಹುದು. ಮೋದಿ ಅವರ ಜೊತೆಯೂ ದಿವ್ಯಾ ಹಾಗರಗಿ ಅವರ ಫೋಟೋ ಇರಬಹುದು. ಹಾಗಂತ ವಿಚಾರಣೆ ನಡೆಸಬಾರದಾ. ಬಿಜೆಪಿ ಅವರ ಸಾಮಾಜಿಕ ಜಾಲತಾಣದವರು ಹಾಕುವ ಪೋಸ್ಟ್ ಗಳಿಗೆ ಉತ್ತರ ಕೊಡಲು ಹೋದರೆ ದಿನ ಪೂರ್ತಿ ಅದೇ ಕೆಲಸ ಮಾಡಿಕೊಂಡಿರಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ