ಸರ್ಕಾರದ ಪ್ರತಿನಿಧಿಗಳು ಜನರ ಬಳಿ ಹೋಗ್ತಿಲ್ಲ, ಜನರ ಪಾಲಿಗೆ ಸರ್ಕಾರ ಸತ್ತಿದೆ: ಸಿದ್ದರಾಮಯ್ಯ


Team Udayavani, Oct 26, 2020, 1:22 PM IST

ಸರ್ಕಾರದ ಪ್ರತಿನಿಧಿಗಳು ಜನರ ಬಳಿ ಹೋಗ್ತಿಲ್ಲ, ಜನರ ಪಾಲಿಗೆ ಸರ್ಕಾರ ಸತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ನೀಡಬೇಕು ಅಂತ ಕಾಯುತ್ತಾ ಇದ್ದರೆ ಯಡಿಯೂರಪ್ಪ ಅವರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಬೇರೆ ಯಾರಿಗೂ ಸಿಗದೆ ವಾಪಾಸು ಹೋಗಿದ್ದಾರೆ. ಜನರ ಕಷ್ಟ ಕೇಳೋಕೆ ಸರ್ಕಾರದ ಪ್ರತಿನಿಧಿಗಳು ಯಾರೂ ಜನರ ಬಳಿ ಹೋಗ್ತಿಲ್ಲ ಅಂದರೆ ಜನರ ಪಾಲಿಗೆ ಸರ್ಕಾರ ಸತ್ತಿದೆ ಅಂತಲ್ಲವೇ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಪ್ರವಾಹದಿಂದ ಹಾನಿ ಸಂಭವಿಸಿದ ಜಿಲ್ಲೆಗಳಿಗೆ ಭೇಟಿ ನೀಡಿದ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿನ್ನೆ ಬೀದರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ, ಅಲ್ಲಿ ಸುಮಾರು ಎರಡೂವರೆ ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದ ಬೆಳೆ ನಾಶವಾಗಿದೆ. ಮನೆ ಕುಸಿತ, ಜಾನುವಾರುಗಳ ಸಾವು, ಆಸ್ತಿ ಹಾನಿ ಹೀಗೆ ಒಟ್ಟು ಅಂದಾಜು ರೂ.2,000 ಕೋಟಿ ನಷ್ಟ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಸುಮಾರು 1 ಲಕ್ಷದ 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದೆ, ಅಂದರೆ ಸುಮಾರು ರೂ.100 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. ಇದರ ಜೊತೆಗೆ ರಸ್ತೆಗಳು, ಶಾಲೆಗಳು, ಮನೆ, ಜಾನುವಾರು, ಆಸ್ತಿಪಾಸ್ತಿ ಎಲ್ಲವೂ ಸೇರಿ ಒಟ್ಟು ನಷ್ಟ ರೂ.700 ಕೋಟಿ ನಷ್ಟ ಸಂಭವಿಸಿದೆ ಎಂದು ಸರ್ಕಾರ ಅಂದಾಜಿಸಿದೆ ಎಂದಿದ್ದಾರೆ.

ಇದನ್ನೂ ಓದಿ:ಅತಿವೃಷ್ಟಿ- ಪ್ರವಾಹ ಹಾನಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸಿದ್ದರಾಮಯ್ಯ ಆಗ್ರಹ

ಅಫ್ಜಲ್‌ಪುರ, ಜೇವರ್ಗಿ, ಶಹಾಪುರ, ಯಾದಗಿರಿ ಭಾಗಗಳ ಪ್ರವಾಹಪೀಡಿತ ಪ್ರದೇಶಗಳಿಗೆ ನಾನು ಇಂದು ಭೇಟಿ ನೀಡಲಿದ್ದೇನೆ. ಅಫ್ಜಲ್‌ಪುರ ಕ್ಷೇತ್ರದಲ್ಲಿ ಮೂರು ಸಣ್ಣನೀರಾವರಿ ಕೆರೆಗಳು ಒಡೆದು ಹೋಗಿ ನೂರಾರು ಎಕರೆ ಬೆಳೆ ನಷ್ಟವಾಗಿದೆ. ಕೃಷಿಭೂಮಿ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿ ರೈತರ ಬದುಕು ದುಸ್ತರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆ ಆಗಸ್ಟ್‌ನಿಂದ ಈವರೆಗೆ ಮೂರು ಬಾರಿ ಪ್ರವಾಹದಿಂದ ಹಾನಿಗೊಳಗಾಗಿದೆ, ಇದರ ಜೊತೆಗೆ ಕೋವಿಡ್ ದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಇಂತಹ ಕಷ್ಟಕಾಲದಲ್ಲಿ ರೈತರು, ಬಡವರ ಜೊತೆಗಿದ್ದು ಅವರಿಗೆ ಸಾಂತ್ವನ ಹೇಳಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಇತ್ತ ಕಡೆ ತಲೆ ಹಾಕಿಲ್ಲ. ಕಲಬುರ್ಗಿ ಜಿಲ್ಲೆಗೆ ಭೇಟಿನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ, ಪರಿಹಾರ ಕಾರ್ಯಗಳಲ್ಲಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ, ನಂತರ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಜವಾಬ್ದಾರಿ ಹೊತ್ತ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ ಅಂತಾದ್ರೆ ಇನ್ನು ಅಧಿಕಾರಿಗಳು ಎಷ್ಟರ ಮಟ್ಟಿಗೆ ಸ್ಪಂದಿಸಬಹುದು ಎಂದು ಟೀಕಿಸಿದ್ದಾರೆ.

ಕಂದಾಯ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್‌ನಿಕ್‌ಗೆ ಬಂದಂತೆ ಬಂದು ಹೋಗಿದ್ದಾರೆ, ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ಮಾಡಿದ್ರು ಅವರಿಗೆ ಪ್ರವಾಹದ ಹಾನಿ ಎಷ್ಟು ಕಂಡಿದ್ಯೋ ಬಿಟ್ಟಿದ್ಯೋ ಅವರಿಗೆ ಗೊತ್ತು. ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ಮಾಡಿದ್ರೆ ವಾಸ್ತವ ಪರಿಸ್ಥಿತಿ ಅರಿವಾಗಿರೋದು, ಅದನ್ನೇ ಸರ್ಕಾರ ಮಾಡಿಲ್ಲ ಎಂದಿದ್ದಾರೆ.

ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ನೀಡಬೇಕು ಅಂತ ಕಾಯುತ್ತಾ ಇದ್ದರೆ ಯಡಿಯೂರಪ್ಪ ಅವರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಬೇರೆ ಯಾರಿಗೂ ಸಿಗದೆ ವಾಪಾಸು ಹೋಗಿದ್ದಾರೆ. ಜನರ ಕಷ್ಟ ಕೇಳೋಕೆ ಸರ್ಕಾರದ ಪ್ರತಿನಿಧಿಗಳು ಯಾರೂ ಜನರ ಬಳಿ ಹೋಗ್ತಿಲ್ಲ ಅಂದರೆ ಜನರ ಪಾಲಿಗೆ ಸರ್ಕಾರ ಸತ್ತಿದೆ ಅಂತಲ್ಲವೇ? ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಕಳೆದ ವರ್ಷದ ನೆರೆ ಪರಿಹಾರದ ಹಣವೇ ಇನ್ನೂ ಎಲ್ಲರನ್ನು ತಲುಪಿಲ್ಲ. ಸರ್ಕಾರ ಅನುದಾನ ಬಿಡುಗಡೆ ಮಾಡಿದ್ರೆ ತಾನೆ ಜನರಿಗೆ ಪರಿಹಾರದ ಹಣ ತಲುಪಲು ಸಾಧ್ಯ. ಹೋಗಲಿ ಇವರಿಗೆ ಕೇಂದ್ರ ಸರ್ಕಾರದ ಬಳಿ ನಿಯೋಗ ತೆಗೆದುಕೊಂಡು ಹೋಗಿ ಪರಿಹಾರ ಕೇಳುವ ಧೈರ್ಯವಾದರೂ ಇದೆಯಾ? ಅದೂ ಇಲ್ಲ ಎಂದು ಸಿದ್ದರಾಮಯ್ಯ ಸರ್ಕಾರವನ್ನು ಟೀಕೆ ಮಾಡಿದ್ದಾರೆ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.