ಸರ್ಕಾರದ ಪ್ರತಿನಿಧಿಗಳು ಜನರ ಬಳಿ ಹೋಗ್ತಿಲ್ಲ, ಜನರ ಪಾಲಿಗೆ ಸರ್ಕಾರ ಸತ್ತಿದೆ: ಸಿದ್ದರಾಮಯ್ಯ


Team Udayavani, Oct 26, 2020, 1:22 PM IST

ಸರ್ಕಾರದ ಪ್ರತಿನಿಧಿಗಳು ಜನರ ಬಳಿ ಹೋಗ್ತಿಲ್ಲ, ಜನರ ಪಾಲಿಗೆ ಸರ್ಕಾರ ಸತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ನೀಡಬೇಕು ಅಂತ ಕಾಯುತ್ತಾ ಇದ್ದರೆ ಯಡಿಯೂರಪ್ಪ ಅವರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಬೇರೆ ಯಾರಿಗೂ ಸಿಗದೆ ವಾಪಾಸು ಹೋಗಿದ್ದಾರೆ. ಜನರ ಕಷ್ಟ ಕೇಳೋಕೆ ಸರ್ಕಾರದ ಪ್ರತಿನಿಧಿಗಳು ಯಾರೂ ಜನರ ಬಳಿ ಹೋಗ್ತಿಲ್ಲ ಅಂದರೆ ಜನರ ಪಾಲಿಗೆ ಸರ್ಕಾರ ಸತ್ತಿದೆ ಅಂತಲ್ಲವೇ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಪ್ರವಾಹದಿಂದ ಹಾನಿ ಸಂಭವಿಸಿದ ಜಿಲ್ಲೆಗಳಿಗೆ ಭೇಟಿ ನೀಡಿದ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿನ್ನೆ ಬೀದರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ, ಅಲ್ಲಿ ಸುಮಾರು ಎರಡೂವರೆ ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದ ಬೆಳೆ ನಾಶವಾಗಿದೆ. ಮನೆ ಕುಸಿತ, ಜಾನುವಾರುಗಳ ಸಾವು, ಆಸ್ತಿ ಹಾನಿ ಹೀಗೆ ಒಟ್ಟು ಅಂದಾಜು ರೂ.2,000 ಕೋಟಿ ನಷ್ಟ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಸುಮಾರು 1 ಲಕ್ಷದ 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದೆ, ಅಂದರೆ ಸುಮಾರು ರೂ.100 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. ಇದರ ಜೊತೆಗೆ ರಸ್ತೆಗಳು, ಶಾಲೆಗಳು, ಮನೆ, ಜಾನುವಾರು, ಆಸ್ತಿಪಾಸ್ತಿ ಎಲ್ಲವೂ ಸೇರಿ ಒಟ್ಟು ನಷ್ಟ ರೂ.700 ಕೋಟಿ ನಷ್ಟ ಸಂಭವಿಸಿದೆ ಎಂದು ಸರ್ಕಾರ ಅಂದಾಜಿಸಿದೆ ಎಂದಿದ್ದಾರೆ.

ಇದನ್ನೂ ಓದಿ:ಅತಿವೃಷ್ಟಿ- ಪ್ರವಾಹ ಹಾನಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸಿದ್ದರಾಮಯ್ಯ ಆಗ್ರಹ

ಅಫ್ಜಲ್‌ಪುರ, ಜೇವರ್ಗಿ, ಶಹಾಪುರ, ಯಾದಗಿರಿ ಭಾಗಗಳ ಪ್ರವಾಹಪೀಡಿತ ಪ್ರದೇಶಗಳಿಗೆ ನಾನು ಇಂದು ಭೇಟಿ ನೀಡಲಿದ್ದೇನೆ. ಅಫ್ಜಲ್‌ಪುರ ಕ್ಷೇತ್ರದಲ್ಲಿ ಮೂರು ಸಣ್ಣನೀರಾವರಿ ಕೆರೆಗಳು ಒಡೆದು ಹೋಗಿ ನೂರಾರು ಎಕರೆ ಬೆಳೆ ನಷ್ಟವಾಗಿದೆ. ಕೃಷಿಭೂಮಿ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿ ರೈತರ ಬದುಕು ದುಸ್ತರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆ ಆಗಸ್ಟ್‌ನಿಂದ ಈವರೆಗೆ ಮೂರು ಬಾರಿ ಪ್ರವಾಹದಿಂದ ಹಾನಿಗೊಳಗಾಗಿದೆ, ಇದರ ಜೊತೆಗೆ ಕೋವಿಡ್ ದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಇಂತಹ ಕಷ್ಟಕಾಲದಲ್ಲಿ ರೈತರು, ಬಡವರ ಜೊತೆಗಿದ್ದು ಅವರಿಗೆ ಸಾಂತ್ವನ ಹೇಳಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಇತ್ತ ಕಡೆ ತಲೆ ಹಾಕಿಲ್ಲ. ಕಲಬುರ್ಗಿ ಜಿಲ್ಲೆಗೆ ಭೇಟಿನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ, ಪರಿಹಾರ ಕಾರ್ಯಗಳಲ್ಲಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ, ನಂತರ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಜವಾಬ್ದಾರಿ ಹೊತ್ತ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ ಅಂತಾದ್ರೆ ಇನ್ನು ಅಧಿಕಾರಿಗಳು ಎಷ್ಟರ ಮಟ್ಟಿಗೆ ಸ್ಪಂದಿಸಬಹುದು ಎಂದು ಟೀಕಿಸಿದ್ದಾರೆ.

ಕಂದಾಯ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್‌ನಿಕ್‌ಗೆ ಬಂದಂತೆ ಬಂದು ಹೋಗಿದ್ದಾರೆ, ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ಮಾಡಿದ್ರು ಅವರಿಗೆ ಪ್ರವಾಹದ ಹಾನಿ ಎಷ್ಟು ಕಂಡಿದ್ಯೋ ಬಿಟ್ಟಿದ್ಯೋ ಅವರಿಗೆ ಗೊತ್ತು. ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ಮಾಡಿದ್ರೆ ವಾಸ್ತವ ಪರಿಸ್ಥಿತಿ ಅರಿವಾಗಿರೋದು, ಅದನ್ನೇ ಸರ್ಕಾರ ಮಾಡಿಲ್ಲ ಎಂದಿದ್ದಾರೆ.

ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ನೀಡಬೇಕು ಅಂತ ಕಾಯುತ್ತಾ ಇದ್ದರೆ ಯಡಿಯೂರಪ್ಪ ಅವರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಬೇರೆ ಯಾರಿಗೂ ಸಿಗದೆ ವಾಪಾಸು ಹೋಗಿದ್ದಾರೆ. ಜನರ ಕಷ್ಟ ಕೇಳೋಕೆ ಸರ್ಕಾರದ ಪ್ರತಿನಿಧಿಗಳು ಯಾರೂ ಜನರ ಬಳಿ ಹೋಗ್ತಿಲ್ಲ ಅಂದರೆ ಜನರ ಪಾಲಿಗೆ ಸರ್ಕಾರ ಸತ್ತಿದೆ ಅಂತಲ್ಲವೇ? ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಕಳೆದ ವರ್ಷದ ನೆರೆ ಪರಿಹಾರದ ಹಣವೇ ಇನ್ನೂ ಎಲ್ಲರನ್ನು ತಲುಪಿಲ್ಲ. ಸರ್ಕಾರ ಅನುದಾನ ಬಿಡುಗಡೆ ಮಾಡಿದ್ರೆ ತಾನೆ ಜನರಿಗೆ ಪರಿಹಾರದ ಹಣ ತಲುಪಲು ಸಾಧ್ಯ. ಹೋಗಲಿ ಇವರಿಗೆ ಕೇಂದ್ರ ಸರ್ಕಾರದ ಬಳಿ ನಿಯೋಗ ತೆಗೆದುಕೊಂಡು ಹೋಗಿ ಪರಿಹಾರ ಕೇಳುವ ಧೈರ್ಯವಾದರೂ ಇದೆಯಾ? ಅದೂ ಇಲ್ಲ ಎಂದು ಸಿದ್ದರಾಮಯ್ಯ ಸರ್ಕಾರವನ್ನು ಟೀಕೆ ಮಾಡಿದ್ದಾರೆ

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.