ಸರ್ಕಾರಿ ಶಾಲಾ ಜಮೀನಿಗೆ ಖಾತಾ ಮಾಡಿಸಿಕೊಳ್ಳಲು ಸೂಚನೆ
Team Udayavani, May 4, 2019, 3:00 AM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮತ್ತು ಶಾಲೆಗಳಿಗೆ ಸಂಬಂಧಿಸಿದ ಜಮೀನಿನ ಖಾತಾ ಪಡೆಯಲು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ಸೂಚನೆ ನೀಡಿದೆ.
ಸರ್ಕಾರಿ ಶಾಲೆ ಮತ್ತು ಶಾಲೆಗಳಿಗೆ ಸಂಬಂಧಿಸಿದ ಜಮೀನನ್ನು ಸಂರಕ್ಷಿಸುವ ತುರ್ತು ಅವಶ್ಯಕತೆಯಿದೆ. ಆದ್ದರಿಂದ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಸೇರಿರುವ ಜಮೀನಿಗೆ ಖಾತಾ ಮಾಡಿಸಿಕೊಳ್ಳಬೇಕು.
ಜಮೀನಿನ ಖಾತಾ ಪಡೆಯುವ ಸಂಬಂಧ ಸ್ಥಳೀಯ ತಹಶೀಲ್ದಾರ್ಗಳನ್ನು ಸಂಪರ್ಕಿಸಿ ಆದಷ್ಟು ಬೇಗ ಖಾತಾ ಪಡೆಯಲು ನಿರ್ದೇಶನ ನೀಡಲಾಗಿದೆ. ಸರ್ಕಾರಿ ಶಾಲೆಗಳಿಗೆ ಸ್ವಂತ ಜಮೀನು ಇದ್ದರೂ ಖಾತಾ ಇಲ್ಲ ಎಂಬ ವಿಚಾರಗಾಗಿ ಕೆಲವು ತಿಂಗಳ ಹಿಂದೆ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು.
ಅಲ್ಲದೆ, ಸರ್ಕಾರಿ ಶಾಲೆಗಳ ಜಾಗದ ಒತ್ತುವರಿ ಕೂಡ ನಡೆಯುವ ಸಾಧ್ಯತೆಯಿದೆ ಎಂಬ ಉದ್ದೇಶದಿಂದ ಸರ್ಕಾರಿ ಶಾಲೆ ಹಾಗೂ ಸಂಬಂಧಪಟ್ಟ ಜಮೀನಿನ ಸಂರಕ್ಷಣೆಗೆ ಖಾತಾ ಮಾಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು