ಸುಳ್ಳು ಹೇಳುವುದರಲ್ಲಿ ಗೌಡರ ಕುಟುಂಬದವರು ನಿಸ್ಸೀಮರು
Team Udayavani, Jul 21, 2019, 3:00 AM IST
ಬೆಂಗಳೂರು: “ದೇವೇಗೌಡರ ಕುಟುಂಬದವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ನಾನು ಕುಮಾರಸ್ವಾಮಿ ಸಹಾಯದಿಂದ ಸಚಿವನಾಗಿಲ್ಲ. ಯಡಿಯೂರಪ್ಪ ಅವರ ಆಶೀರ್ವಾದದಿಂದ ಸಚಿವನಾಗಿದ್ದೆ’ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಶುಕ್ರವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಸದನದಲ್ಲಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರ. ನಾನು ಗೋವಾಕ್ಕೆ ಹೋಗಿದ್ದು ನಿಜ. ನಾನು ಕುಮಾರಸ್ವಾಮಿಯ ಸಹಾಯ ಕೇಳಿರಲಿಲ್ಲ. ಅವರೇ ಸಹಾಯ ಮಾಡುತ್ತೇನೆಂದು ಬಂದಿದ್ದರು. ನನ್ನ ಹಾಗೂ ಅವರ ನಡುವೆ ಮಾತಿನ ಚಕಮಕಿಯಾಗಿತ್ತು. ನನ್ನ ಮೇಲೆ ಯಾರೂ ಹಲ್ಲೆ ಮಾಡಿರಲಿಲ್ಲ. ಈ ಬಗ್ಗೆ ನಾನು ಬಹಿರಂಗ ಚರ್ಚೆಗೆ ಸಿದ್ಧ ಎಂದು ಹೇಳಿದರು.
ಸೋಮವಾರ ವಿಶ್ವಾಸಮತ ಯಾಚನೆ ಆದ ಬಳಿಕ ಅಧಿವೇಶನದಲ್ಲಿ ಕುಮಾರಸ್ವಾಮಿ ಮಾಡಿರುವ ಎಲ್ಲ ಆರೋಪಗಳಿಗೆ ಉತ್ತರ ನೀಡುತ್ತೇನೆ. ನಾವು ಸದನದಲ್ಲಿ ಗಲಾಟೆ ಮಾಡುವಂತೆ ಮಾಡಿ, ಅಮಾನತು ಮಾಡಲು ಕುಮಾರಸ್ವಾಮಿ ತಂತ್ರ ಮಾಡಿದರು. ಅವರು ಬುದ್ಧಿ ಭ್ರಮಣೆಯಾದಂತೆ ವರ್ತಿಸುತ್ತಿದ್ದಾರೆಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ