ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ ಹೊಸದೇನಲ್ಲ
Team Udayavani, Sep 26, 2019, 3:03 AM IST
ಬೆಂಗಳೂರು: “ಕೇಂದ್ರದ ದ್ವೇಷದ ರಾಜಕಾರಣ ಹೊಸದೇನಲ್ಲ. ಐದು ವರ್ಷದಿಂದ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟೀಕಿಸಿದರು. ದೆಹಲಿಯಲ್ಲಿ ಸಂಸದ ಡಿ.ಕೆ.ಸುರೇಶ್ ಭೇಟಿ ಬಳಿಕ ಮಾತನಾಡಿ, ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರ ನಡೆಸುವವರು ಮರೆಯಬಾರದು. ಬಿಜೆಪಿ ವಿರೋಧಿಸುವವರ ವಿರುದ್ಧ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ದೂರಿದರು.
ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್ರನ್ನು ಭೇಟಿಯಾಗಲು ಅವಕಾಶ ದೊರೆಯಲಿಲ್ಲ. ಒಳ್ಳೆಯ ತೀರ್ಥ ಕ್ಷೇತ್ರದಲ್ಲಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಹೇಳಿದರು. ಸಂಸದ ಡಿ.ಕೆ.ಸುರೇಶ್ ಮಾತನಾಡಿ, “ದೇವೇಗೌಡರು, ಎಚ್.ಡಿ.ರೇವಣ್ಣ ಭೇಟಿಯಾಗಲು ಬಂದಿದ್ದರು. ಕಾಲಾವಕಾಶ ಇಲ್ಲದ ಕಾರಣ ಭೇಟಿ ಸಾಧ್ಯ ವಾಗಲಿಲ್ಲ. ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಮೂಲಕ ನನ್ನ ಜತೆ ಮಾತನಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’