4 ಕ್ಷೇತ್ರಗಳ ಮುಖಂಡರ ಸಭೆ ಕರೆದ ಎಚ್‌ಡಿಡಿ

ಅತೃಪ್ತರನ್ನು ಚುನಾವಣೆಯಲ್ಲಿ ಮಣಿಸಲು ದೇವೇಗೌಡರ ಸೂತ್ರ

Team Udayavani, Jul 26, 2019, 5:39 AM IST

HD-Devegowda–800

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಇದಕ್ಕೆ ಕಾರಣರಾದ ಬೆಂಗಳೂರು ನಗರದ ಶಾಸಕರ ಕ್ಷೇತ್ರಗಳ ಮೇಲೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದೃಷ್ಟಿ ಹರಿಸಿದ್ದು, ಶನಿವಾರ ಮತ್ತು ಭಾನುವಾರ ನಾಲ್ಕು ಕ್ಷೇತ್ರಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಪದಾಧಿಕಾರಿಗಳ ಸಭೆ ಕರೆದಿದ್ದಾರೆ.

ರಾಜರಾಜೇಶ್ವರಿನಗರ, ಕೆ.ಆರ್‌. ಪುರ, ಮಹಾಲಕ್ಷ್ಮಿ ಲೇ ಔಟ್, ಯಶವಂತಪುರ ಕ್ಷೇತ್ರಗಳ ಪಕ್ಷದ ಮುಖಂಡರ ಸಭೆ ಕರೆದಿದ್ದು, ಕುತೂಹಲ ಮೂಡಿಸಿದೆ. ಶನಿವಾರದಂದು ರಾಜರಾಜೇಶ್ವರಿ ನಗರ, ಕೆ.ಆರ್‌. ಪುರಂ, ಭಾನುವಾರದಂದು ಮಹಾಲಕ್ಷ್ಮಿ ಲೇ ಔಟ್, ಯಶವಂತಪುರ ಕ್ಷೇತ್ರಗಳ ಮುಖಂಡರ ಸಭೆ ಕರೆಯಲಾಗಿದೆ. ಹಂಗಾಮಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಆ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಾಲ್ಕು ಕ್ಷೇತ್ರಗಳ ಶಾಸಕರು ಕೈ ಕೊಟ್ಟ ಕಾರಣದಿಂ ದಲೇ ಸಮ್ಮಿಶ್ರ ಸರ್ಕಾರ ಪತನವಾಗಿರುವುದರಿಂದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಆ ಕ್ಷೇತ್ರಗಳಲ್ಲಿ ಜಯಗಳಿಸುವ ಹಿನ್ನೆಲೆಯಲ್ಲಿ ಪರ್ಯಾಯ ಅಭ್ಯರ್ಥಿಗಳ ತಲಾಷೆ, ತಳಮಟ್ಟದಿಂದ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಸಭೆ ಕರೆಲಾಗಿದೆ ಎಂದು ತಿಳಿದು ಬಂದಿದೆ.

ಯಶವಂತಪುರದಲ್ಲಿ ಎಸ್‌.ಟಿ. ಸೋಮಶೇಖರ್‌ ವಿರುದ್ಧ ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ಜವರಾಯಿಗೌಡ, ರಾಜರಾಜೇಶ್ವರಿನಗರ ದಲ್ಲಿ ಕಳೆದ ಬಾರಿ ಸ್ಪರ್ಧೆ ಮಾಡಿದ್ದ ರಾಮಚಂದ್ರ ಜತೆಗೆ ನಗರ ಜೆಡಿಎಸ್‌ ಘಟಕದ ಅಧ್ಯಕ್ಷ ಆರ್‌. ಪ್ರಕಾಶ್‌, ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದಲ್ಲಿ ಉಪ ಮೇಯರ್‌ ಭದ್ರೇಗೌಡ ಅವರನ್ನು ಅಭ್ಯರ್ಥಿ ಮಾಡುವ ಸಂಬಂಧ ಪಕ್ಷದ ವಲಯದಲ್ಲಿ ಚರ್ಚಿಸಲಾಗಿದೆ.

ರಾಜರಾಜೇಶ್ವರಿನಗರ ಮತ್ತು ಯಶವಂತಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೂ ಉಪ ಚುನಾವಣೆಯಲ್ಲೂ ಮೈತ್ರಿಯಾದರೆ ಜೆಡಿಎಸ್‌ಗೆ ಆ ಕ್ಷೇತ್ರಗಳನ್ನು ಪಡೆಯುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಕ್ಷೇತ್ರಗಳಲ್ಲಿ ಒಕ್ಕಲಿಗ ಮತದಾರರು ಹೆಚ್ಚಾಗಿರುವುದರಿಂದ ಜೆಡಿಎಸ್‌ಗೆ ಅನುಕೂಲವಾಗಬಹುದು ಎಂಬ ಲೆಕ್ಕಾಚಾರವಿದೆ ಎಂದು ಹೇಳಲಾಗಿದೆ.

ಬೆಂಗಳೂರು ನಗರದ ಯಶವಂತಪುರ, ರಾಜರಾಜೇಶ್ವರಿನಗರ, ಮಹಾಲಕ್ಷ್ಮಿ ಲೇ ಔಟ್, ಕೆ.ಆರ್‌.ಪುರ, ಶಿವಾಜಿನಗರ ಕ್ಷೇತ್ರಗಳ ಪೈಕಿ ಎರಡು ಇಲ್ಲವೇ ಮೂರು ಕ್ಷೇತ್ರಗಳಾದರೂ ಜೆಡಿಎಸ್‌ಗೆ ಮೈತ್ರಿಯಾದರೆ ಪಡೆಯಬಹುದು. ಒಂದೊಮ್ಮೆ ಯಶವಂತಪುರ ಕ್ಷೇತ್ರ ಬಿಟ್ಟು ಕೊಡಲು ಕಾಂಗ್ರೆಸ್‌ ಒಪ್ಪದಿದ್ದರೆ ಜೆಡಿಎಸ್‌ ಆಕಾಂಕ್ಷಿ ಜವರಾಯಿಗೌಡ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ತಿಳಿದು ಬಂದಿದೆ. ಇದರ ಜತೆಗೆ ಕೆ.ಆರ್‌. ಪೇಟೆ, ಹುಣಸೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಪಡೆದು ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.