ಮೂರ್ತಿ ಅಮಾನತು ವಿವರ ಕೋರಿದ ಹೈಕೋರ್ಟ್
Team Udayavani, Aug 20, 2019, 3:00 AM IST
ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಎಸ್. ಮೂರ್ತಿ ಅವರನ್ನು ಅಮಾನತುಗೊಳಿಸಲು ತೀರ್ಮಾನ ಕೈಗೊಂಡ ವಿಶೇಷ ಮಂಡಳಿಯ ಎಲ್ಲ ವಿವರಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೋಮವಾರ ನಿರ್ದೇಶಿಸಿದೆ. ಅಮಾನತು ಆದೇಶ ಸಂಬಂಧ ಎಸ್. ಮೂರ್ತಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾ. ಅಭಯ್ ಎಸ್ .ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ, ಅರ್ಜಿದಾರರನ್ನು ಅಮಾನತು ಮಾಡುವ ಅಧಿಕಾರ ವಿಧಾನಸಭೆ ಕಾರ್ಯದರ್ಶಿಗಿಲ್ಲ. ಹೀಗಾಗಿ ಅಮಾನತು ಕಾನೂನು ಬಾಹಿರ ಕ್ರಮವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಆಕ್ಷೇಪಿಸಿದ ಸರ್ಕಾರದ ಪರ ವಕೀಲರು, ಅವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತು ಹೊರಡಿಸುವ ಮುನ್ನ ವಿಧಾನಸಭೆ ವಿಶೇಷ ಮಂಡಳಿ ಸಭೆ ನಡೆಸಿ ತೀರ್ಮಾನ ಕೈಗೊಂಡಿದೆ ಎಂದು ಪ್ರತಿಪಾದಿಸಿದರು.
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಅಮಾನತು ಕುರಿತ ವಿಶೇಷ ಮಂಡಳಿ ಸಭೆ ನಡೆಸಿದ ದಿನಾಂಕ, ಕೈಗೊಂಡ ನಿರ್ಣಯ ಸಹಿತ ಎಲ್ಲ ವಿವರಗಳನ್ನು ಸಲ್ಲಿಸಿ ಎಂದು ನಿದೇ ರ್ಶಿಸಿ ಸೆ.4ಕ್ಕೆ ವಿಚಾರಣೆ ಮುಂದೂಡಿದೆ. 2016 ಹಾಗೂ 2017ನೇ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿ ಸಿದಂತೆ ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎಸ್. ಮೂರ್ತಿ ಅವರನ್ನು 2018ರ ಡಿಸೆಂಬರ್ 27ರಂದು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ