ವಿವಾದಕ್ಕೆ ಕಾರಣವಾದ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ
ಮನಮೋಹನ್ ಸಿಂಗ್ ಉದ್ಘಾಟನೆ ಮಾಡಿದ್ದ ಬೇಸ್ ಮೋದಿಯಿಂದ ಮತ್ತೊಮ್ಮೆ ಉದ್ಘಾಟನೆ
Team Udayavani, Jun 20, 2022, 9:34 AM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಈಗಾಗಾಲೇ ಭಾಗಶಃ ಕಾರ್ಯನಿರ್ವಹಣೆ ಮಾಡುತ್ತಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ( ಬೇಸ್ ) ನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಉದ್ಘಾಟನೆ ಮಾಡುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಸುಮಾರು 201 ಕೋಟಿ ರೂ. ಮೊತ್ತದ ನೂತನ ಬೇಸ್ ಕ್ಯಾಂಪ್ ಉದ್ಘಾಟನೆಯನ್ನು ಮೋದಿ ನಡೆಸಲಿದ್ದಾರೆ ಎಂದು ರಾಜ್ಯ ಸರಕಾರ ಕಾರ್ಯಕ್ರಮ ರೂಪಿಸಿದೆ. ಆದರೆ ತಮ್ಮ ಸರಕಾರದ ಅವಧಿಯಲ್ಲಿ ಡಾ.ಮನಮೋಹನ್ ಸಿಂಗ್ ಉದ್ಘಾಟನೆ ಮಾಡಿದ ಯೋಜನೆಗೆ ಮರು ಉದ್ಘಾಟನಾ ಭಾಗ್ಯ ಕರುಣಿಸುವುದೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸ್ಕೂಲ್ ಆಫ್ ಎಕನಾಮಿಕ್ಸ್ ಸ್ಥಾಪನೆಗೆ ಶ್ರಮ ವಹಿಸಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರಕಾರದ ನಡೆಯನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ರಾಜ್ಯಕ್ಕೆ ಮೋದಿ ಆಗಮನ : ಬಿಜೆಪಿಗೆ ಚುನಾವಣಾ ಚುರುಕು
ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಸ್ಥಾಪನೆಯ ಹಿಂದಿನ ಶ್ರಮ, ಲಂಡನ್ ಪ್ರವಾಸ ಸಂದರ್ಭದಲ್ಲಿ ಅಲ್ಲಿನ ವಿದ್ಯಾ ಸಂಸ್ಥೆಗಳ ಜತೆಗೆ ನಡೆಸಿದ ಮಾತುಕತೆ, ಸರಕಾರದ ಮನವೊಲಿಕೆಯ ಹಿಂದಿನ ಕಸರತ್ತು ಹಾಗೂ ಉದ್ಘಾಟನೆಯವರೆಗಿನ ವಿಚಾರವನ್ನು ಸರಣಿ ಟ್ವೀಟ್ ಮೂಲಕ ಪ್ರಿಯಾಂಕ ಖರ್ಗೆ ವಿವರಿಸಿದ್ದಾರೆ. ಯೋಜನೆಯ ನೀಲನಕ್ಷೆಯನ್ನು ಪ್ರಧಾನಿ ಮೋದಿ ಈಗ ವೀಕ್ಷಿಸುತ್ತಿರುವುದನ್ನು ಅವರು ಪ್ರಶ್ನಿಸಿದ್ದಾರೆ.
ದುರ್ಬಲ ಗವರ್ನಿಂಗ್ ಕೌನ್ಸಿಲ್ : ಇದೆಲ್ಲದಕ್ಕಿಂತ ಮುಖ್ಯವಾಗಿ ಸ್ಕೂಲ್ ಆಫ್ ಎಕಾನಾಮಿಕ್ಸ್ ನ ಗೌರ್ನಿಂಗ್ ಕೌನ್ಸಿಲ್ ನ್ನು ಬಿಜೆಪಿ ಸರಕಾರ ದುರ್ಬಲಗೊಳಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸುಧಾಮೂರ್ತಿ, ಕಿರಣ್ ಮುಜುಂದಾರ್ ಶಾ, ಸ್ಯಾಮ್ ಪಿಟ್ರೋಡಾ ರಂಥ ಉದ್ಯಮಿಗಳ ಜತೆಗೆ ರಾಷ್ಟ್ರದ ಖ್ಯಾತ ಅರ್ಥಶಾಸ್ತ್ರಜ್ಞರನ್ನು ಗೌರ್ನಿಂಗ್ ಕೌನ್ಸಿಲ್ ಸದಸ್ಯರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳು, ಪರಿವಾರದ ಹಿನ್ನೆಲೆಯವರು, ಬಸವರಾಜ್ ಹೊರಟ್ಟಿಯವರ ಪುತ್ರ ಸೇರಿದಂತೆ ರಾಜಕೀಯವಾಗಿ ಪ್ರಬಲರಾಗಿರುವವರನ್ನು ನೇಮಕ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ