ದೆಹಲಿಯಲ್ಲಿ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಇಂದು
Team Udayavani, Mar 22, 2017, 10:22 AM IST
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿ ಸೇರುವ ಬಗ್ಗೆ ಇದ್ದ ವಿಘ್ನಗಳೆಲ್ಲವೂ ದೂರವಾಗಿದ್ದು, ಬುಧವಾರ ಸಂಜೆ 5 ಗಂಟೆಗೆ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕೃಷ್ಣ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ರಾಷ್ಟ್ರೀಯ ನಾಯಕರು ಮಾ. 22 (ಬುಧವಾರ) ಅಥವಾ ಏ. 5ರ ದಿನಾಂಕ ಗೊತ್ತುಮಾಡಿದ್ದರು. ಆದರೆ, ಅವರನ್ನು ನಂಜನಗೂಡು ಮತ್ತು ಗುಂಡ್ಲುಪೇಟೆ
ಉಪ ಚುನಾವಣೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಕಾರಣಕ್ಕೆ ಬುಧವಾರದ ದಿನಾಂಕವನ್ನೇ ಅಂತಿಮಗೊಳಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಉಪಚುನಾವಣೆಯಲ್ಲಿ ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿದ್ದರಿಂದ ಅವರ ಪರವಾಗಿ ಆರ್.
ಅಶೋಕ್ ಮಂಗಳವಾರ ಬೆಳಗ್ಗೆ ಕೃಷ್ಣ ಅವರನ್ನು ಭೇಟಿ ಮಾಡಿದರು. ಪಕ್ಷ ಸೇರುವ ದಿನಾಂಕ ನಿಗದಿಯಾಗಿದ್ದನ್ನು ಗಮನಕ್ಕೆ ತಂದು ಬುಧವಾರ ಬಿಜೆಪಿ ಸೇರುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಎಸ್.ಎಂ.ಕೃಷ್ಣ ಕೂಡ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಸಂಜೆ ವೇಳೆಗೆ ಆರ್.ಅಶೋಕ್ ಮತ್ತೆ ಕೃಷ್ಣ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.
ಬಿಜೆಪಿ ಸೇರುವ ಉದ್ದೇಶದೊಂದಿಗೆ ಬುಧವಾರ ಬೆಳಗ್ಗೆ ಎಸ್.ಎಂ.ಕೃಷ್ಣ ಮತ್ತು ಆರ್.ಅಶೋಕ್ ಇಬ್ಬರೂ ದೆಹಲಿಗೆ ತೆರಳುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಸಂಜೆ 5 ಗಂಟೆಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸರಳವಾಗಿ ಎಸ್.ಎಂ.ಕೃಷ್ಣ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ